ಬ್ರೇಕಿಂಗ್ ನ್ಯೂಸ್
03-08-23 04:00 pm Mangalore Correspondent ಕ್ರೈಂ
ಉಳ್ಳಾಲ, ಆ.3: ತೊಕ್ಕೊಟ್ಟು ಒಳಪೇಟೆ ಮತ್ತು ಜಪ್ಪಿನಮೊಗರಿನ ವಾಣಿಜ್ಯ ಮಳಿಗೆಗಳಲ್ಲಿ ಸರಣಿ ಕಳ್ಳತನ ನಡೆದಿದ್ದು, ಸಿಸಿಟಿವಿ ಡಿವಿಆರ್ ಅನ್ನು ಕಿತ್ತ ಕಳ್ಳ ಅದನ್ನ ಮರೆತು ಅಂಗಡಿಯಲ್ಲೇ ಬಿಟ್ಟು ಹೋಗಿದ್ದು ಕಳ್ಳನ ಕರಾಮತ್ತಿನ ವೀಡಿಯೋ ಪೊಲೀಸರಿಗೆ ಲಭಿಸಿದೆ.
ತೊಕ್ಕೊಟ್ಟು ಒಳಪೇಟೆಯ ಲಕ್ಷ್ಮೀ ಕ್ಯಾಂಟೀನ್, ಪಕ್ಕದ ಪಾತ್ರೆಯ ಅಂಗಡಿ ಮತ್ತು ಮೊಬೈಲ್ ಅಂಗಡಿಗಳಲ್ಲಿ ಕಳ್ಳತನ ನಡೆದಿದ್ದು ನಗದು ಹಣವನ್ನು ದೋಚಲಾಗಿದೆ. ಪಾತ್ರೆಯ ಅಂಗಡಿಗೆ ಕಳ್ಳನೋರ್ವ ಕನ್ನ ಹಾಕುವ ದೃಶ್ಯ ಒಳಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೇಲ್ಛಾವಣಿಯ ಹಂಚು ಸರಿಸಿ ಒಳ ನುಸುಳಿದ ಚಾಣಾಕ್ಷ ಕಳ್ಳ ಮೊದಲಿಗೆ ಸಿಸಿಟಿವಿ ಇರೋದನ್ನ ಗಮನಿಸಿದ್ದು ವೀಡಿಯೋ ದಾಖಲಾಗುವ ಹಾರ್ಡ್ ಡಿಸ್ಕ್ ಇರುವ ಡಿವಿಆರನ್ನೇ ಮೊದಲಿಗೆ ಕಿತ್ತು ಮೇಜಿನ ಮೇಲಿರಿಸಿದ್ದಾನೆ.



ಬಳಿಕ ಒಳಗಿದ್ದ ಸುಮಾರು ಐದು ಸಾವಿರ ನಗದನ್ನ ಎಗರಿಸಿದ ನಂತರ ಡಿವಿಆರ್ ಅನ್ನು ಮರೆತು ಅಲ್ಲೇ ಬಿಟ್ಟು ಹೋಗಿದ್ದಾನೆ. ಪಕ್ಕದ ಲಕ್ಷ್ಮೀ ಕ್ಯಾಂಟೀನ್ ಗೂ ಕನ್ನ ಹಾಕಿದ್ದು ಸಿಕ್ಕಿದ 500 ರೂಪಾಯಿ ನಗದನ್ನ ಎಗರಿಸಲಾಗಿದೆ. ಮೊಬೈಲ್ ಅಂಗಡಿಯಲ್ಲಿ ನಗದು ಸಿಗದೆ ಹೆಡ್ ಫೋನ್ ಗಳನ್ನ ಕಳವು ಮಾಡಲಾಗಿದೆ.
ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಜಪ್ಪಿನಮೊಗರುವಿನ ಟೈಲ್ಸ್ ಅಂಗಡಿಗೂ ಕನ್ನ ಹಾಕಲಾಗಿದ್ದು ಸುಮಾರು 6000 ನಗದನ್ನ ದೋಚಲಾಗಿದೆ. ಪೊಲೀಸರು ಸಿಸಿಟಿವಿ ಪೂಟೇಜನ್ನ ಪರಿಶೀಲಿಸುತ್ತಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಕಳ್ಳ ಹೊರ ರಾಜ್ಯದ ವಲಸಿಗನೆಂದು ತಿಳಿದು ಬಂದಿದ್ದು ಒಬ್ಬನೇ ಸರಣಿ ಕಳ್ಳತನ ನಡಸಿದ್ದಾನೆಯೇ ಅಥವಾ ಗ್ಯಾಂಗ್ ಇದೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Thokottu Robbery in various shops, CCTV footages found by Police.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm