ಬ್ರೇಕಿಂಗ್ ನ್ಯೂಸ್
04-08-23 06:57 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 4: ಸುರತ್ಕಲ್ ಬಳಿಯ ಹೊಸಬೆಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಎಟಿಎಂ ಮೆಷಿನನ್ನು ಜೆಸಿಬಿ ಬಳಸಿ ಒಡೆದು ನಗದು ದೋಚಲು ಯತ್ನಿಸಿದ ಘಟನೆ ಶುಕ್ರವಾರ ನಸುಕಿನಲ್ಲಿ ನಡೆದಿದೆ.
ಹೆದ್ದಾರಿ ಬದಿಯಲ್ಲಿರುವ ಸೌತ್ ಇಂಡಿಯನ್ ಬ್ಯಾಂಕಿನ ಎಟಿಎಂ ಮೆಷಿನನ್ನು ನಸುಕಿನ 2.15ರ ವೇಳೆಗೆ ಜೆಸಿಬಿ ಬಳಸಿ ಒಡೆದು ಹಾಕಲಾಗಿದೆ. ಹೊರಗಿನ ಗ್ಲಾಸ್ ಒಡೆದು ಒಳಗಿನ ಮೆಷಿನನ್ನು ಎಬ್ಬಿಸಲು ಯತ್ನಿಸಿದ್ದು ಈ ವೇಳೆ ಮೆಷಿನ್ ನೆಲಕ್ಕೆ ಅಡ್ಡ ಬಿದ್ದಿದೆ. ಇದೇ ಸಂದರ್ಭದಲ್ಲಿ ಬ್ಯಾಂಕಿನ ಮ್ಯಾನೇಜರ್ ಗೆ ಸಂದೇಶ ಹೋಗಿದ್ದು ಅಲ್ಲದೆ ಸ್ಥಳದಲ್ಲಿ ಸೈರನ್ ಆಗತೊಡಗಿತ್ತು. ಕೆಲಹೊತ್ತು ಭಾರದ ಮೆಷಿನನ್ನು ಎತ್ತಲು ಯತ್ನಿಸಿದ ಕಳ್ಳರು ಬಳಿಕ ಜನ ಸೇರುತ್ತಾರೆಂದು ಭಯದಲ್ಲಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ.



ಕೆಲಹೊತ್ತಿನಲ್ಲಿ ಬ್ಯಾಂಕ್ ಮ್ಯಾನೇಜರ್ ಸ್ಥಳಕ್ಕೆ ಬಂದಿದ್ದರೆ, ಅದೇ ಹೊತ್ತಿಗೆ ಸುರತ್ಕಲ್ ಪೊಲೀಸರು ಕೂಡ ಸ್ಥಳಕ್ಕೆ ಬಂದಿದ್ದಾರೆ. ಅಷ್ಟರಲ್ಲಿ ಜೆಸಿಬಿ ಜೊತೆಗೆ ಕಳ್ಳರು ನಾಪತ್ತೆಯಾಗಿದ್ದರು. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನು ಆಧರಿಸಿ ಪೊಲೀಸರು ಜೆಸಿಬಿಯನ್ನು ಜೋಕಟ್ಟೆಯಲ್ಲಿ ಪತ್ತೆ ಮಾಡಿದ್ದಾರೆ. ಪರಿಶೀಲನೆ ವೇಳೆ ಜೆಸಿಬಿ ಪಡುಬಿದ್ರಿ ಠಾಣೆ ವ್ಯಾಪ್ತಿಯಲ್ಲಿ ಕಳವಾಗಿದ್ದು ಮತ್ತು ಅದರ ಬಗ್ಗೆ ಒಂದು ದಿನದ ಹಿಂದೆ ಪ್ರಕರಣ ದಾಖಲಾಗಿರುವುದು ತಿಳಿದುಬಂದಿದೆ. ಇಬ್ಬರು ಆರೋಪಿಗಳಿಗಾಗಿ ಸುರತ್ಕಲ್ ಪೊಲೀಸರು ಶೋಧ ನಡೆಸುತ್ತಿದ್ದಾರೆ.
Gang attempts to steal bank ATM machine using JCB at Surathkal in Mangalore, flee after siren sound.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm