ಬ್ರೇಕಿಂಗ್ ನ್ಯೂಸ್
04-08-23 06:57 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 4: ಸುರತ್ಕಲ್ ಬಳಿಯ ಹೊಸಬೆಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಎಟಿಎಂ ಮೆಷಿನನ್ನು ಜೆಸಿಬಿ ಬಳಸಿ ಒಡೆದು ನಗದು ದೋಚಲು ಯತ್ನಿಸಿದ ಘಟನೆ ಶುಕ್ರವಾರ ನಸುಕಿನಲ್ಲಿ ನಡೆದಿದೆ.
ಹೆದ್ದಾರಿ ಬದಿಯಲ್ಲಿರುವ ಸೌತ್ ಇಂಡಿಯನ್ ಬ್ಯಾಂಕಿನ ಎಟಿಎಂ ಮೆಷಿನನ್ನು ನಸುಕಿನ 2.15ರ ವೇಳೆಗೆ ಜೆಸಿಬಿ ಬಳಸಿ ಒಡೆದು ಹಾಕಲಾಗಿದೆ. ಹೊರಗಿನ ಗ್ಲಾಸ್ ಒಡೆದು ಒಳಗಿನ ಮೆಷಿನನ್ನು ಎಬ್ಬಿಸಲು ಯತ್ನಿಸಿದ್ದು ಈ ವೇಳೆ ಮೆಷಿನ್ ನೆಲಕ್ಕೆ ಅಡ್ಡ ಬಿದ್ದಿದೆ. ಇದೇ ಸಂದರ್ಭದಲ್ಲಿ ಬ್ಯಾಂಕಿನ ಮ್ಯಾನೇಜರ್ ಗೆ ಸಂದೇಶ ಹೋಗಿದ್ದು ಅಲ್ಲದೆ ಸ್ಥಳದಲ್ಲಿ ಸೈರನ್ ಆಗತೊಡಗಿತ್ತು. ಕೆಲಹೊತ್ತು ಭಾರದ ಮೆಷಿನನ್ನು ಎತ್ತಲು ಯತ್ನಿಸಿದ ಕಳ್ಳರು ಬಳಿಕ ಜನ ಸೇರುತ್ತಾರೆಂದು ಭಯದಲ್ಲಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ.



ಕೆಲಹೊತ್ತಿನಲ್ಲಿ ಬ್ಯಾಂಕ್ ಮ್ಯಾನೇಜರ್ ಸ್ಥಳಕ್ಕೆ ಬಂದಿದ್ದರೆ, ಅದೇ ಹೊತ್ತಿಗೆ ಸುರತ್ಕಲ್ ಪೊಲೀಸರು ಕೂಡ ಸ್ಥಳಕ್ಕೆ ಬಂದಿದ್ದಾರೆ. ಅಷ್ಟರಲ್ಲಿ ಜೆಸಿಬಿ ಜೊತೆಗೆ ಕಳ್ಳರು ನಾಪತ್ತೆಯಾಗಿದ್ದರು. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನು ಆಧರಿಸಿ ಪೊಲೀಸರು ಜೆಸಿಬಿಯನ್ನು ಜೋಕಟ್ಟೆಯಲ್ಲಿ ಪತ್ತೆ ಮಾಡಿದ್ದಾರೆ. ಪರಿಶೀಲನೆ ವೇಳೆ ಜೆಸಿಬಿ ಪಡುಬಿದ್ರಿ ಠಾಣೆ ವ್ಯಾಪ್ತಿಯಲ್ಲಿ ಕಳವಾಗಿದ್ದು ಮತ್ತು ಅದರ ಬಗ್ಗೆ ಒಂದು ದಿನದ ಹಿಂದೆ ಪ್ರಕರಣ ದಾಖಲಾಗಿರುವುದು ತಿಳಿದುಬಂದಿದೆ. ಇಬ್ಬರು ಆರೋಪಿಗಳಿಗಾಗಿ ಸುರತ್ಕಲ್ ಪೊಲೀಸರು ಶೋಧ ನಡೆಸುತ್ತಿದ್ದಾರೆ.
Gang attempts to steal bank ATM machine using JCB at Surathkal in Mangalore, flee after siren sound.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm