ಬ್ರೇಕಿಂಗ್ ನ್ಯೂಸ್
04-08-23 06:57 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 4: ಸುರತ್ಕಲ್ ಬಳಿಯ ಹೊಸಬೆಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಎಟಿಎಂ ಮೆಷಿನನ್ನು ಜೆಸಿಬಿ ಬಳಸಿ ಒಡೆದು ನಗದು ದೋಚಲು ಯತ್ನಿಸಿದ ಘಟನೆ ಶುಕ್ರವಾರ ನಸುಕಿನಲ್ಲಿ ನಡೆದಿದೆ.
ಹೆದ್ದಾರಿ ಬದಿಯಲ್ಲಿರುವ ಸೌತ್ ಇಂಡಿಯನ್ ಬ್ಯಾಂಕಿನ ಎಟಿಎಂ ಮೆಷಿನನ್ನು ನಸುಕಿನ 2.15ರ ವೇಳೆಗೆ ಜೆಸಿಬಿ ಬಳಸಿ ಒಡೆದು ಹಾಕಲಾಗಿದೆ. ಹೊರಗಿನ ಗ್ಲಾಸ್ ಒಡೆದು ಒಳಗಿನ ಮೆಷಿನನ್ನು ಎಬ್ಬಿಸಲು ಯತ್ನಿಸಿದ್ದು ಈ ವೇಳೆ ಮೆಷಿನ್ ನೆಲಕ್ಕೆ ಅಡ್ಡ ಬಿದ್ದಿದೆ. ಇದೇ ಸಂದರ್ಭದಲ್ಲಿ ಬ್ಯಾಂಕಿನ ಮ್ಯಾನೇಜರ್ ಗೆ ಸಂದೇಶ ಹೋಗಿದ್ದು ಅಲ್ಲದೆ ಸ್ಥಳದಲ್ಲಿ ಸೈರನ್ ಆಗತೊಡಗಿತ್ತು. ಕೆಲಹೊತ್ತು ಭಾರದ ಮೆಷಿನನ್ನು ಎತ್ತಲು ಯತ್ನಿಸಿದ ಕಳ್ಳರು ಬಳಿಕ ಜನ ಸೇರುತ್ತಾರೆಂದು ಭಯದಲ್ಲಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ.



ಕೆಲಹೊತ್ತಿನಲ್ಲಿ ಬ್ಯಾಂಕ್ ಮ್ಯಾನೇಜರ್ ಸ್ಥಳಕ್ಕೆ ಬಂದಿದ್ದರೆ, ಅದೇ ಹೊತ್ತಿಗೆ ಸುರತ್ಕಲ್ ಪೊಲೀಸರು ಕೂಡ ಸ್ಥಳಕ್ಕೆ ಬಂದಿದ್ದಾರೆ. ಅಷ್ಟರಲ್ಲಿ ಜೆಸಿಬಿ ಜೊತೆಗೆ ಕಳ್ಳರು ನಾಪತ್ತೆಯಾಗಿದ್ದರು. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನು ಆಧರಿಸಿ ಪೊಲೀಸರು ಜೆಸಿಬಿಯನ್ನು ಜೋಕಟ್ಟೆಯಲ್ಲಿ ಪತ್ತೆ ಮಾಡಿದ್ದಾರೆ. ಪರಿಶೀಲನೆ ವೇಳೆ ಜೆಸಿಬಿ ಪಡುಬಿದ್ರಿ ಠಾಣೆ ವ್ಯಾಪ್ತಿಯಲ್ಲಿ ಕಳವಾಗಿದ್ದು ಮತ್ತು ಅದರ ಬಗ್ಗೆ ಒಂದು ದಿನದ ಹಿಂದೆ ಪ್ರಕರಣ ದಾಖಲಾಗಿರುವುದು ತಿಳಿದುಬಂದಿದೆ. ಇಬ್ಬರು ಆರೋಪಿಗಳಿಗಾಗಿ ಸುರತ್ಕಲ್ ಪೊಲೀಸರು ಶೋಧ ನಡೆಸುತ್ತಿದ್ದಾರೆ.
Gang attempts to steal bank ATM machine using JCB at Surathkal in Mangalore, flee after siren sound.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am