ಬ್ರೇಕಿಂಗ್ ನ್ಯೂಸ್
05-11-20 06:08 pm Headline Karnataka News Network ಕ್ರೈಂ
ಚಿಕ್ಕಮಗಳೂರು, ನವೆಂಬರ್ 05: ಕಾಫಿ ಡೇ ಮಾಲೀಕ ದಿವಂಗತ ಸಿದ್ಧಾರ್ಥ್ ಹೆಗ್ಡೆ ಪತ್ನಿ ಮಾಳವಿಕಾಗೆ ಬಂಧನದ ಭೀತಿ ಎದುರಾಗಿದೆ. ಮಾಳವಿಕ ಸಿದ್ಧಾರ್ಥ್ ಸೇರಿ ಕಾಫಿ ಡೇ ಕಂಪನಿಯ ಸೇರಿ 8 ಜನರಿಗೆ ಮೂಡಿಗೆರೆ ಜೆಎಂಎಫ್ ಕೋರ್ಟ್ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ.
ಚಿಕ್ಕಮಗಳೂರು ಜಿಲ್ಲೆಯ 300ಕ್ಕೂ ಹೆಚ್ಚು ಬೆಳೆಗಾರರಿಗೆ 100 ಕೋಟಿಗೂ ಅಧಿಕ ಹಣವನ್ನು ಎಬಿಸಿ ಕಂಪೆನಿ ಬಾಕಿ ಉಳಿಸಿಕೊಂಡಿದ್ದು ಇದರ ವಿರುದ್ಧ ಕಾಫಿ ಬೆಳೆಗಾರ ನಂದೀಶ್ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು.

ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಕಾಫಿ ಬೆಳೆಗಾರ ನಂದೀಶ್, ಪ್ರತಿ ವರ್ಷ ಕಾಫಿಯನ್ನು ಎಬಿಸಿ ಕಂಪೆನಿಗೆ ನೀಡುತ್ತಿದ್ದರು. ಆದರೆ, ಸಿದ್ಧಾರ್ಥ್ ನಿಧನರಾದ ಬಳಿಕ ಬೆಳೆಗಾರರಿಗೆ ಕಂಪೆನಿಯಿಂದ ಬರುತ್ತಿದ್ದ ಹಣ ನಿಂತು ಹೋಗಿದೆ. ನಂದೀಶ್ ಪೋಸ್ಟ್ ಡೇಟೆಡ್ ಚೆಕ್ ಪಡೆದು ಹಣ ನಗದು ಮಾಡಿಕೊಳ್ಳುತ್ತಿದ್ದರು. ಅದರಂತೆ, ನಂದೀಶ್ ಹತ್ತು ಚೆಕ್ ಪಡೆದಿದ್ದು ಅದನ್ನು ಬ್ಯಾಂಕಿಗೆ ಹಾಕಿದಾಗ ಬೌನ್ಸ್ ಆಗಿತ್ತು.
ಚೆಕ್ ಬೌನ್ಸ್ ಹಿನ್ನೆಲೆಯಲ್ಲಿ ನಂದೀಶ್ ತನಗೆ ಬರಬೇಕಿದ್ದ 45.38 ಲಕ್ಷ ಹಣಕ್ಕಾಗಿ ಕೋರ್ಟಿಗೆ ದೂರು ಸಲ್ಲಿಸಿದ್ದರು. ಕಳೆದ ಅಕ್ಟೋಬರ್ 6ರಂದು ಎಬಿಸಿ ಕಂಪೆನಿ ಕಡೆಯಿಂದ ನಿರ್ದೇಶಕರು ಕೋರ್ಟಿಗೆ ಹಾಜರಾಗಬೇಕಿತ್ತು. ಹೀಗಾಗಿ ಕೋರ್ಟ್ ಆರೋಪಿಗಳ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಮುಂದಿನ ವಿಚಾರಣೆ ನ.11ಕ್ಕೆ ಇದ್ದು ಅದಕ್ಕೆ ಮುನ್ನ ಆರೋಪಿಗಳು ಕೋರ್ಟಿಗೆ ಹಾಜರಾಗಬೇಕೆಂದು ನಂದೀಶ್ ಪರ ವಕೀಲರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಈ ಬಗ್ಗೆ ಕಾಫಿ ಡೇ ಕಂಪನಿಯ ಕಡೆಯಿಂದ ಸ್ಪಷ್ಟನೆ ನೀಡಲಾಗಿದ್ದು ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯ 1020 ಬೆಳೆಗಾರರಿಗೆ ಹಣ ನೀಡುವುದು ಬಾಕಿ ಇತ್ತು. ಕಳೆದ 11 ತಿಂಗಳಲ್ಲಿ 700ಕ್ಕೂ ಹೆಚ್ಚು ಬೆಳೆಗಾರರಿಗೆ ಹಣ ನೀಡಲಾಗಿದೆ. ಕೊರೊನಾ ಸಂಕಷ್ಟದ ಮಧ್ಯೆಯೂ ಬೆಳೆಗಾರರಿಗೆ ಹಣ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
A non-bailable warrant has been issued in a cheque bounce case against the directors of the Cafe Coffee Day company. One of the directors is former Chief Minister SM Krishna's daughter Malavika Hegde.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm