ಬ್ರೇಕಿಂಗ್ ನ್ಯೂಸ್
05-11-20 06:08 pm Headline Karnataka News Network ಕ್ರೈಂ
ಚಿಕ್ಕಮಗಳೂರು, ನವೆಂಬರ್ 05: ಕಾಫಿ ಡೇ ಮಾಲೀಕ ದಿವಂಗತ ಸಿದ್ಧಾರ್ಥ್ ಹೆಗ್ಡೆ ಪತ್ನಿ ಮಾಳವಿಕಾಗೆ ಬಂಧನದ ಭೀತಿ ಎದುರಾಗಿದೆ. ಮಾಳವಿಕ ಸಿದ್ಧಾರ್ಥ್ ಸೇರಿ ಕಾಫಿ ಡೇ ಕಂಪನಿಯ ಸೇರಿ 8 ಜನರಿಗೆ ಮೂಡಿಗೆರೆ ಜೆಎಂಎಫ್ ಕೋರ್ಟ್ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ.
ಚಿಕ್ಕಮಗಳೂರು ಜಿಲ್ಲೆಯ 300ಕ್ಕೂ ಹೆಚ್ಚು ಬೆಳೆಗಾರರಿಗೆ 100 ಕೋಟಿಗೂ ಅಧಿಕ ಹಣವನ್ನು ಎಬಿಸಿ ಕಂಪೆನಿ ಬಾಕಿ ಉಳಿಸಿಕೊಂಡಿದ್ದು ಇದರ ವಿರುದ್ಧ ಕಾಫಿ ಬೆಳೆಗಾರ ನಂದೀಶ್ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು.

ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಕಾಫಿ ಬೆಳೆಗಾರ ನಂದೀಶ್, ಪ್ರತಿ ವರ್ಷ ಕಾಫಿಯನ್ನು ಎಬಿಸಿ ಕಂಪೆನಿಗೆ ನೀಡುತ್ತಿದ್ದರು. ಆದರೆ, ಸಿದ್ಧಾರ್ಥ್ ನಿಧನರಾದ ಬಳಿಕ ಬೆಳೆಗಾರರಿಗೆ ಕಂಪೆನಿಯಿಂದ ಬರುತ್ತಿದ್ದ ಹಣ ನಿಂತು ಹೋಗಿದೆ. ನಂದೀಶ್ ಪೋಸ್ಟ್ ಡೇಟೆಡ್ ಚೆಕ್ ಪಡೆದು ಹಣ ನಗದು ಮಾಡಿಕೊಳ್ಳುತ್ತಿದ್ದರು. ಅದರಂತೆ, ನಂದೀಶ್ ಹತ್ತು ಚೆಕ್ ಪಡೆದಿದ್ದು ಅದನ್ನು ಬ್ಯಾಂಕಿಗೆ ಹಾಕಿದಾಗ ಬೌನ್ಸ್ ಆಗಿತ್ತು.
ಚೆಕ್ ಬೌನ್ಸ್ ಹಿನ್ನೆಲೆಯಲ್ಲಿ ನಂದೀಶ್ ತನಗೆ ಬರಬೇಕಿದ್ದ 45.38 ಲಕ್ಷ ಹಣಕ್ಕಾಗಿ ಕೋರ್ಟಿಗೆ ದೂರು ಸಲ್ಲಿಸಿದ್ದರು. ಕಳೆದ ಅಕ್ಟೋಬರ್ 6ರಂದು ಎಬಿಸಿ ಕಂಪೆನಿ ಕಡೆಯಿಂದ ನಿರ್ದೇಶಕರು ಕೋರ್ಟಿಗೆ ಹಾಜರಾಗಬೇಕಿತ್ತು. ಹೀಗಾಗಿ ಕೋರ್ಟ್ ಆರೋಪಿಗಳ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಮುಂದಿನ ವಿಚಾರಣೆ ನ.11ಕ್ಕೆ ಇದ್ದು ಅದಕ್ಕೆ ಮುನ್ನ ಆರೋಪಿಗಳು ಕೋರ್ಟಿಗೆ ಹಾಜರಾಗಬೇಕೆಂದು ನಂದೀಶ್ ಪರ ವಕೀಲರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಈ ಬಗ್ಗೆ ಕಾಫಿ ಡೇ ಕಂಪನಿಯ ಕಡೆಯಿಂದ ಸ್ಪಷ್ಟನೆ ನೀಡಲಾಗಿದ್ದು ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯ 1020 ಬೆಳೆಗಾರರಿಗೆ ಹಣ ನೀಡುವುದು ಬಾಕಿ ಇತ್ತು. ಕಳೆದ 11 ತಿಂಗಳಲ್ಲಿ 700ಕ್ಕೂ ಹೆಚ್ಚು ಬೆಳೆಗಾರರಿಗೆ ಹಣ ನೀಡಲಾಗಿದೆ. ಕೊರೊನಾ ಸಂಕಷ್ಟದ ಮಧ್ಯೆಯೂ ಬೆಳೆಗಾರರಿಗೆ ಹಣ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
A non-bailable warrant has been issued in a cheque bounce case against the directors of the Cafe Coffee Day company. One of the directors is former Chief Minister SM Krishna's daughter Malavika Hegde.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm