ಬ್ರೇಕಿಂಗ್ ನ್ಯೂಸ್
06-08-23 02:52 pm HK News Desk ಕ್ರೈಂ
ಸಿದ್ದಾರ್ಥನಗರ, ಆಗಸ್ಟ್ 6: ಕಳ್ಳತನದ ಆರೋಪ ಹೊತ್ತಿದ್ದ ಇಬ್ಬರು ಅಪ್ರಾಪ್ತ ಬಾಲಕರಿಗೆ ಅಮಾನುಷ ರೀತಿಯಲ್ಲಿ ಹಿಂಸೆ ನೀಡಿದ ಘಟನೆ ಉತ್ತರ ಪ್ರದೇಶದ ಸಿದ್ಧಾರ್ಥ ನಗರದಲ್ಲಿ ನಡೆದಿದೆ.
10 ಹಾಗೂ 15 ವರ್ಷ ವಯಸ್ಸಿನ ಬಾಲಕರನ್ನು ಕಳ್ಳತನ ಮಾಡಿದ ಆರೋಪದ ಮೇಲೆ ಹಿಡಿದು ಕಟ್ಟಿ ಹಾಕಿದ ದುಷ್ಕರ್ಮಿಗಳು, ಆ ಬಾಲಕರಿಗೆ ಮೂತ್ರ ಕುಡಿಸಿದ್ದಾರೆ. ಬಾಲಕ ಗುದದ್ವಾರಕ್ಕೆ ಹಸಿರು ಮೆಣಸಿನ ಕಾಯಿ ಉಜ್ಜಿದ್ದಾರೆ. ನಂತರ ಕೆಲವು ಇಂಜೆಕ್ಷನ್ಗಳನ್ನೂ ಬಾಲಕರಿಗೆ ನೀಡಿದ್ದಾರೆ ಎನ್ನಲಾಗಿದೆ. ಯಾವ ರೀತಿಯ ರಾಸಾಯನಿಕ ವಸ್ತು ಹೊಂದಿದ್ದ ಚುಚ್ಚು ಮದ್ದು ನೀಡಲಾಗಿದೆ ಅನ್ನೋದು ಈವರೆಗೆ ತಿಳಿದು ಬಂದಿಲ್ಲ.
ಈ ಘಟನೆಯ ಸಂಬಂಧ ದುಷ್ಕರ್ಮಿಗಳು ಬಾಲಕರಿಗೆ ಕಿರುಕುಳ ನೀಡುವ ವಿಡಿಯೋ ಕೂಡಾ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಸಿರು ಮೆಣಸಿನ ಕಾಯಿಯನ್ನು ಬಾಲಕರಿಗೆ ತಿನ್ನಿಸುವ ದುಷ್ಕರ್ಮಿಗಳು, ಮೆಣಸಿನ ಕಾಯಿಯನ್ನು ಚಟ್ನಿಯಂತೆ ಮಾಡಿ ಅದನ್ನು ಬಾಟಲ್ಗೆ ತುಂಬಿಸಿ, ಆ ಬಾಟಲಿಗೆ ಮೂತ್ರ ಸುರಿಯುತ್ತಾರೆ. ನಂತರ ಅದನ್ನು ಬಾಲಕರಿಗೆ ಬಲವಂತವಾಗಿ ಕುಡಿಸುತ್ತಾರೆ. ಈ ವೇಳೆ ಯುವಕರ ಗುಂಪು ಬಾಲಕರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸುವ ಆಡಿಯೋ ಕೂಡಾ ಈ ವಿಡಿಯೋದಲ್ಲಿ ಕೇಳಿ ಬರುತ್ತದೆ. ಬಳಿಕ ಬಾಲಕರಿಗೆ ಮನಬಂದಂತೆ ಥಳಿಸಲಾಗಿದೆ.
ಈ ಬಾಲಕರು ಹಣ ಕದಿಯುವ ವೇಳೆ ದುಷ್ಕರ್ಮಿಗಳ ಕೈಗೆ ಸಿಕ್ಕಿ ಬಿದ್ದಿದ್ದರು ಎನ್ನಲಾಗಿದೆ. ಗೂಂಡಾಗಳ ಬಳಿಯಲ್ಲೇ ಹಣ ಕದಿಯಲು ಹೋಗಿ ಸಿಕ್ಕಿ ಬಿದ್ದ ಬಾಲಕರಿಗೆ ದುಷ್ಕರ್ಮಿಗಳು ಅಮಾನುಷ ರೀತಿಯಲ್ಲಿ ಹಿಂಸೆ ನೀಡಿದ್ದಾರೆ.
ಇದೇ ಘಟನೆಗೆ ಸಂಬಂಧಿಸಿದ ಮತ್ತೊಂದು ವಿಡಿಯೋದಲ್ಲಿ ಇಬ್ಬರು ಬಾಲಕರ ಪೈಕಿ ಓರ್ವನನ್ನು ನೆಲದ ಮೇಲೆ ಬೋರಲಾಗಿ ಮಲಗಿಸುವ ದುಷ್ಕರ್ಮಿಗಳು ಆತನ ಚಡ್ಡಿ ಬಿಚ್ಚುತ್ತಾರೆ. ಮೆಣಸಿನ ಕಾಯಿಯನ್ನು ಚಟ್ನಿಯ ರೀತಿ ಅರೆದು ಆ ಮಿಶ್ರಣವನ್ನು ಬಾಲಕನ ಗುದದ್ವಾರಕ್ಕೆ ಮೆತ್ತುತ್ತಾರೆ. ಈ ವೇಳೆ ಬಾಲಕ ನೋವಿನಿಂದ ಕಿರುಚುತ್ತಾನೆ. ಇದಾದ ಬಳಿಕ ಹಳದಿ ಬಣ್ಣದ ದ್ರವ ಪದಾರ್ಥವನ್ನು ಇಂಜೆಕ್ಷನ್ಗೆ ಹಾಕಿ ಬಾಲಕನ ದೇಹಕ್ಕೆ ಚುಚ್ಚುತ್ತಾರೆ. ಈ ಹಳದಿ ಬಣ್ಣದ ದ್ರವ ಪದಾರ್ಥದಲ್ಲಿ ಯಾವ ರಾಸಾಯನಿಕ ಮಿಶ್ರಣ ಇತ್ತು ಅನ್ನೋದು ತಿಳಿದು ಬಂದಿಲ್ಲ.
ಈ ವಿಡಿಯೋವನ್ನು ಆಗಸ್ಟ್ 4 ರಂದು ಚಿತ್ರೀಕರಣ ಮಾಡಲಾಗಿತ್ತು ಎಂದು ತಿಳಿದು ಬಂದಿದೆ. ಉತ್ತರ ಪ್ರದೇಶದ ಸಿದ್ಧಾರ್ಥ ನಗರದ ಪತ್ರಾ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
In a horrifying incident that has sent shockwaves across Uttar Pradesh, two minor boys from Siddharthnagar district were subjected to unimaginable torture. The victims, aged 10 and 15, were forcibly made to drink urine, had green chillies rubbed in their anus, and were injected with some unknown substance on suspicion of theft.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm