ಬ್ರೇಕಿಂಗ್ ನ್ಯೂಸ್
06-08-23 02:52 pm HK News Desk ಕ್ರೈಂ
ಸಿದ್ದಾರ್ಥನಗರ, ಆಗಸ್ಟ್ 6: ಕಳ್ಳತನದ ಆರೋಪ ಹೊತ್ತಿದ್ದ ಇಬ್ಬರು ಅಪ್ರಾಪ್ತ ಬಾಲಕರಿಗೆ ಅಮಾನುಷ ರೀತಿಯಲ್ಲಿ ಹಿಂಸೆ ನೀಡಿದ ಘಟನೆ ಉತ್ತರ ಪ್ರದೇಶದ ಸಿದ್ಧಾರ್ಥ ನಗರದಲ್ಲಿ ನಡೆದಿದೆ.
10 ಹಾಗೂ 15 ವರ್ಷ ವಯಸ್ಸಿನ ಬಾಲಕರನ್ನು ಕಳ್ಳತನ ಮಾಡಿದ ಆರೋಪದ ಮೇಲೆ ಹಿಡಿದು ಕಟ್ಟಿ ಹಾಕಿದ ದುಷ್ಕರ್ಮಿಗಳು, ಆ ಬಾಲಕರಿಗೆ ಮೂತ್ರ ಕುಡಿಸಿದ್ದಾರೆ. ಬಾಲಕ ಗುದದ್ವಾರಕ್ಕೆ ಹಸಿರು ಮೆಣಸಿನ ಕಾಯಿ ಉಜ್ಜಿದ್ದಾರೆ. ನಂತರ ಕೆಲವು ಇಂಜೆಕ್ಷನ್ಗಳನ್ನೂ ಬಾಲಕರಿಗೆ ನೀಡಿದ್ದಾರೆ ಎನ್ನಲಾಗಿದೆ. ಯಾವ ರೀತಿಯ ರಾಸಾಯನಿಕ ವಸ್ತು ಹೊಂದಿದ್ದ ಚುಚ್ಚು ಮದ್ದು ನೀಡಲಾಗಿದೆ ಅನ್ನೋದು ಈವರೆಗೆ ತಿಳಿದು ಬಂದಿಲ್ಲ.
ಈ ಘಟನೆಯ ಸಂಬಂಧ ದುಷ್ಕರ್ಮಿಗಳು ಬಾಲಕರಿಗೆ ಕಿರುಕುಳ ನೀಡುವ ವಿಡಿಯೋ ಕೂಡಾ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಸಿರು ಮೆಣಸಿನ ಕಾಯಿಯನ್ನು ಬಾಲಕರಿಗೆ ತಿನ್ನಿಸುವ ದುಷ್ಕರ್ಮಿಗಳು, ಮೆಣಸಿನ ಕಾಯಿಯನ್ನು ಚಟ್ನಿಯಂತೆ ಮಾಡಿ ಅದನ್ನು ಬಾಟಲ್ಗೆ ತುಂಬಿಸಿ, ಆ ಬಾಟಲಿಗೆ ಮೂತ್ರ ಸುರಿಯುತ್ತಾರೆ. ನಂತರ ಅದನ್ನು ಬಾಲಕರಿಗೆ ಬಲವಂತವಾಗಿ ಕುಡಿಸುತ್ತಾರೆ. ಈ ವೇಳೆ ಯುವಕರ ಗುಂಪು ಬಾಲಕರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸುವ ಆಡಿಯೋ ಕೂಡಾ ಈ ವಿಡಿಯೋದಲ್ಲಿ ಕೇಳಿ ಬರುತ್ತದೆ. ಬಳಿಕ ಬಾಲಕರಿಗೆ ಮನಬಂದಂತೆ ಥಳಿಸಲಾಗಿದೆ.
ಈ ಬಾಲಕರು ಹಣ ಕದಿಯುವ ವೇಳೆ ದುಷ್ಕರ್ಮಿಗಳ ಕೈಗೆ ಸಿಕ್ಕಿ ಬಿದ್ದಿದ್ದರು ಎನ್ನಲಾಗಿದೆ. ಗೂಂಡಾಗಳ ಬಳಿಯಲ್ಲೇ ಹಣ ಕದಿಯಲು ಹೋಗಿ ಸಿಕ್ಕಿ ಬಿದ್ದ ಬಾಲಕರಿಗೆ ದುಷ್ಕರ್ಮಿಗಳು ಅಮಾನುಷ ರೀತಿಯಲ್ಲಿ ಹಿಂಸೆ ನೀಡಿದ್ದಾರೆ.
ಇದೇ ಘಟನೆಗೆ ಸಂಬಂಧಿಸಿದ ಮತ್ತೊಂದು ವಿಡಿಯೋದಲ್ಲಿ ಇಬ್ಬರು ಬಾಲಕರ ಪೈಕಿ ಓರ್ವನನ್ನು ನೆಲದ ಮೇಲೆ ಬೋರಲಾಗಿ ಮಲಗಿಸುವ ದುಷ್ಕರ್ಮಿಗಳು ಆತನ ಚಡ್ಡಿ ಬಿಚ್ಚುತ್ತಾರೆ. ಮೆಣಸಿನ ಕಾಯಿಯನ್ನು ಚಟ್ನಿಯ ರೀತಿ ಅರೆದು ಆ ಮಿಶ್ರಣವನ್ನು ಬಾಲಕನ ಗುದದ್ವಾರಕ್ಕೆ ಮೆತ್ತುತ್ತಾರೆ. ಈ ವೇಳೆ ಬಾಲಕ ನೋವಿನಿಂದ ಕಿರುಚುತ್ತಾನೆ. ಇದಾದ ಬಳಿಕ ಹಳದಿ ಬಣ್ಣದ ದ್ರವ ಪದಾರ್ಥವನ್ನು ಇಂಜೆಕ್ಷನ್ಗೆ ಹಾಕಿ ಬಾಲಕನ ದೇಹಕ್ಕೆ ಚುಚ್ಚುತ್ತಾರೆ. ಈ ಹಳದಿ ಬಣ್ಣದ ದ್ರವ ಪದಾರ್ಥದಲ್ಲಿ ಯಾವ ರಾಸಾಯನಿಕ ಮಿಶ್ರಣ ಇತ್ತು ಅನ್ನೋದು ತಿಳಿದು ಬಂದಿಲ್ಲ.
ಈ ವಿಡಿಯೋವನ್ನು ಆಗಸ್ಟ್ 4 ರಂದು ಚಿತ್ರೀಕರಣ ಮಾಡಲಾಗಿತ್ತು ಎಂದು ತಿಳಿದು ಬಂದಿದೆ. ಉತ್ತರ ಪ್ರದೇಶದ ಸಿದ್ಧಾರ್ಥ ನಗರದ ಪತ್ರಾ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
In a horrifying incident that has sent shockwaves across Uttar Pradesh, two minor boys from Siddharthnagar district were subjected to unimaginable torture. The victims, aged 10 and 15, were forcibly made to drink urine, had green chillies rubbed in their anus, and were injected with some unknown substance on suspicion of theft.
24-07-25 10:52 pm
HK News Desk
ಕಾಲ್ತುಳಿತ ಪ್ರಕರಣ ; ಆರ್ ಸಿಬಿ, ಡಿಎನ್ಎ, ಕೆಎಸ್ ಸಿ...
24-07-25 08:01 pm
Lokayukta Raid, IAS Vasanthi: ಐಎಎಸ್ ಅಧಿಕಾರಿ ಮ...
24-07-25 07:29 pm
ಜಿಎಸ್ಟಿ ಬಾಕಿ ಪಾವತಿ ನೋಟಿಸ್ ವಾಪಸ್ ; ಆತಂಕಗೊಂಡಿದ...
24-07-25 05:01 pm
ಕೆಂಪುಕಲ್ಲು ಗಣಿಗಾರಿಕೆಗೆ ಅಧಿಕೃತ ಪರವಾನಿಗೆ ನೀಡಲು...
23-07-25 08:03 pm
24-07-25 09:06 pm
HK News Desk
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
ಕುಡುಬಿ ಸಮುದಾಯ ಎಸ್ಸಿ ಪಟ್ಟಿಗೆ ಸೇರಿಸಲು ರಾಜ್ಯದಿಂದ...
22-07-25 07:21 pm
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
24-07-25 10:26 pm
Mangalore Correspondent
Dharmasthala Case, Investigation, Advocate,...
24-07-25 05:27 pm
Mangalore Indiana Hospital: ಮಂಗಳೂರಿನಲ್ಲಿ ಪ್ರಥ...
24-07-25 11:30 am
ಕರಾವಳಿ ಜಿಲ್ಲೆಗಳಿಗೆ ಜುಲೈ 26ರ ವರೆಗೆ ಭಾರೀ ಮಳೆಯ ರ...
23-07-25 10:49 pm
Mangalore Extortion Jail, Sudheer Kumar Reddy...
23-07-25 10:25 pm
24-07-25 10:38 pm
Bangalore Correspondent
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am