ಬ್ರೇಕಿಂಗ್ ನ್ಯೂಸ್
10-08-23 06:27 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 10: ಬೀದಿ ನಾಟಕ ಮಾಡುತ್ತಿದ್ದ ಕಲಾವಿದನೊಬ್ಬ ತಾನು ವಾಮಂಜೂರು ಠಾಣೆಯ ಪೊಲೀಸ್ ಎಂದು ಹೇಳಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳನ್ನು ಪ್ರೀತಿಸುವ ನಾಟಕವಾಡಿ ಅತ್ಯಾಚಾರಗೈದು, ಆಕೆಯ ನಗ್ನ ಫೋಟೋಗಳನ್ನು ತೆಗೆದು ವೈರಲ್ ಮಾಡಿದ್ದಲ್ಲದೆ ಬ್ಲಾಕ್ಮೇಲ್ ಮಾಡುತ್ತಿದ್ದ ಪ್ರಸಂಗ ಬೆಳಕಿಗೆ ಬಂದಿದ್ದು, ಮಂಗಳೂರು ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ರಾಯಚೂರು ಜಿಲ್ಲೆಯ ಮೂಲದ ಯಮನೂರ(22) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬೀದಿ ನಾಟಕ ಮಾಡಲು ಪೊಲೀಸ್ ಡ್ರೆಸ್ ಮಾಡಿಕೊಂಡಿದ್ದು, ಅದನ್ನೇ ಧರಿಸಿ ತಾನು ಪೊಲೀಸ್ ಎಂದು ಪೋಸು ನೀಡುತ್ತಿದ್ದ. ಮಂಗಳೂರಿನಲ್ಲಿ ಇಂಜಿನಿಯರಿಂಗ್ ಕಲಿಯುತ್ತಿದ್ದ ವಿದ್ಯಾರ್ಥಿನಿಗೆ ಇನ್ ಸ್ಟಾ ಗ್ರಾಮಿನಲ್ಲಿ ಪರಿಚಯ ಆಗಿದ್ದು, ಬಳಿಕ ವಾಮಂಜೂರಿನ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿದ್ದೇನೆಂದು ನಂಬಿಸಿದ್ದ. ಕಳೆದ ಮೇ ತಿಂಗಳಲ್ಲಿ ಯುವತಿಯನ್ನು ಕದ್ರಿ ದೇವಸ್ಥಾನದಲ್ಲಿ ಭೇಟಿಯಾಗಿದ್ದು, ಬಳಿಕ ತಣ್ಣೀರುಬಾವಿ ಬೀಚ್ ಗೆ ಕರೆದೊಯ್ದು ಅಲ್ಲಿ ಆಕೆಯೊಂದಿಗೆ ಫೋಟೋ ತೆಗೆದಿದ್ದ. ಬಳಿಕ ಫೋಟೋ ವೈರಲ್ ಮಾಡುವುದಾಗಿ ಹೆದರಿಸಿ ಬೆಂಗಳೂರಿಗೆ ಕರೆಯಿಸಿ, ಅಲ್ಲಿ ನೆಲಮಂಗಲದ ಲಾಡ್ಜ್ ನಲ್ಲಿರಿಸಿ ಬಲವಂತದ ಅತ್ಯಾಚಾರ ನಡೆಸಿದ್ದಾನೆ. ಬಳಿಕ ಮೂಲ್ಕಿ, ಕಿನ್ನಿಗೋಳಿಯ ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದು, ಈ ವೇಳೆ ಯುವತಿಯ ನಗ್ನ ಫೋಟೋ ತೆಗೆದು ಜಾಲತಾಣದಲ್ಲಿ ವೈರಲ್ ಮಾಡಿದ್ದಾನೆ.
ಫೋಟೋವನ್ನು ಡಿಲೀಟ್ ಮಾಡಬೇಕಾದರೆ ಒಂದೂವರೆ ಲಕ್ಷ ಹಣ ನೀಡಬೇಕೆಂದು ಬ್ಲಾಕ್ಮೇಲ್ ಮಾಡಿದ್ದಾನೆ. ಈ ಕುರಿತು ಯುವತಿ ಮಂಗಳೂರಿನ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು, ಸೆಕ್ಷನ್ 376, 384, 506, 170 ಐಪಿಸಿ ಮತ್ತು ಐಟಿ ಆಕ್ಟ್ ಅಡಿ ಕೇಸು ದಾಖಲಾಗಿದೆ. ಆರೋಪಿಯನ್ನು ಆಗಸ್ಟ್ 9ರಂದು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಿ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇತ್ತೀಚೆಗೆ ಮುಗ್ಧ ಹೆಣ್ಮಕ್ಕಳನ್ನು ಪ್ರೀತಿಸುವ ನಾಟಕವಾಡಿ ಅತ್ಯಾಚಾರ ಮಾಡಿ ಫೋಟೋ ತೆಗೆದು ಬ್ಲಾಕ್ಮೇಲ್ ಮಾಡುವ ಕೃತ್ಯಗಳು ಹೆಚ್ಚುತ್ತಿದ್ದು, ಈ ಬಗ್ಗೆ ಯುವತಿಯರ ಪೋಷಕರು ಜಾಗೃತಿ ಇರಬೇಕೆಂದು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ತಿಳಿಸಿದ್ದಾರೆ.
Fake Vamanjoor police constable arrested in Mangalore, Engineer student raped several times in context of Promising Job. Directed as be identified as Yemanooru from Raichur district. Through Instagram he texted the girl and stated that is a police constable at Vamanjoor police station and promised of giving a job through which is raped her several times
23-07-25 08:03 pm
Bangalore Correspondent
Dharmasthala, DK Suresh: ಧರ್ಮಸ್ಥಳ ಕುಟುಂಬದ ಆಸ್...
22-07-25 11:10 pm
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
23-07-25 10:49 pm
Mangalore Correspondent
Mangalore Extortion Jail, Sudheer Kumar Reddy...
23-07-25 10:25 pm
Naxal Rupesh, Kerala, Mangalore: 2012ರ ಮಿತ್ತಬ...
23-07-25 12:00 pm
Dharmasthala SIT Latest News; ಧರ್ಮಸ್ಥಳ ಎಸ್ಐಟಿ...
23-07-25 10:19 am
Puttur Bus News; ಮಂಗಳೂರು-ಪುತ್ತೂರು ಬಸ್ ನಲ್ಲಿ ಯ...
22-07-25 11:13 pm
23-07-25 04:49 pm
Udupi Correspondent
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am
Mangalore CCB Police, Arrest, Crime: ಸಿಸಿಬಿ ಕ...
22-07-25 09:45 pm
Kalaburagi Jewellery Robbery, Arrest: ಕಲಬುರಗಿ...
22-07-25 12:38 pm