ಬ್ರೇಕಿಂಗ್ ನ್ಯೂಸ್
10-08-23 06:27 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 10: ಬೀದಿ ನಾಟಕ ಮಾಡುತ್ತಿದ್ದ ಕಲಾವಿದನೊಬ್ಬ ತಾನು ವಾಮಂಜೂರು ಠಾಣೆಯ ಪೊಲೀಸ್ ಎಂದು ಹೇಳಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳನ್ನು ಪ್ರೀತಿಸುವ ನಾಟಕವಾಡಿ ಅತ್ಯಾಚಾರಗೈದು, ಆಕೆಯ ನಗ್ನ ಫೋಟೋಗಳನ್ನು ತೆಗೆದು ವೈರಲ್ ಮಾಡಿದ್ದಲ್ಲದೆ ಬ್ಲಾಕ್ಮೇಲ್ ಮಾಡುತ್ತಿದ್ದ ಪ್ರಸಂಗ ಬೆಳಕಿಗೆ ಬಂದಿದ್ದು, ಮಂಗಳೂರು ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ರಾಯಚೂರು ಜಿಲ್ಲೆಯ ಮೂಲದ ಯಮನೂರ(22) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬೀದಿ ನಾಟಕ ಮಾಡಲು ಪೊಲೀಸ್ ಡ್ರೆಸ್ ಮಾಡಿಕೊಂಡಿದ್ದು, ಅದನ್ನೇ ಧರಿಸಿ ತಾನು ಪೊಲೀಸ್ ಎಂದು ಪೋಸು ನೀಡುತ್ತಿದ್ದ. ಮಂಗಳೂರಿನಲ್ಲಿ ಇಂಜಿನಿಯರಿಂಗ್ ಕಲಿಯುತ್ತಿದ್ದ ವಿದ್ಯಾರ್ಥಿನಿಗೆ ಇನ್ ಸ್ಟಾ ಗ್ರಾಮಿನಲ್ಲಿ ಪರಿಚಯ ಆಗಿದ್ದು, ಬಳಿಕ ವಾಮಂಜೂರಿನ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿದ್ದೇನೆಂದು ನಂಬಿಸಿದ್ದ. ಕಳೆದ ಮೇ ತಿಂಗಳಲ್ಲಿ ಯುವತಿಯನ್ನು ಕದ್ರಿ ದೇವಸ್ಥಾನದಲ್ಲಿ ಭೇಟಿಯಾಗಿದ್ದು, ಬಳಿಕ ತಣ್ಣೀರುಬಾವಿ ಬೀಚ್ ಗೆ ಕರೆದೊಯ್ದು ಅಲ್ಲಿ ಆಕೆಯೊಂದಿಗೆ ಫೋಟೋ ತೆಗೆದಿದ್ದ. ಬಳಿಕ ಫೋಟೋ ವೈರಲ್ ಮಾಡುವುದಾಗಿ ಹೆದರಿಸಿ ಬೆಂಗಳೂರಿಗೆ ಕರೆಯಿಸಿ, ಅಲ್ಲಿ ನೆಲಮಂಗಲದ ಲಾಡ್ಜ್ ನಲ್ಲಿರಿಸಿ ಬಲವಂತದ ಅತ್ಯಾಚಾರ ನಡೆಸಿದ್ದಾನೆ. ಬಳಿಕ ಮೂಲ್ಕಿ, ಕಿನ್ನಿಗೋಳಿಯ ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದು, ಈ ವೇಳೆ ಯುವತಿಯ ನಗ್ನ ಫೋಟೋ ತೆಗೆದು ಜಾಲತಾಣದಲ್ಲಿ ವೈರಲ್ ಮಾಡಿದ್ದಾನೆ.
ಫೋಟೋವನ್ನು ಡಿಲೀಟ್ ಮಾಡಬೇಕಾದರೆ ಒಂದೂವರೆ ಲಕ್ಷ ಹಣ ನೀಡಬೇಕೆಂದು ಬ್ಲಾಕ್ಮೇಲ್ ಮಾಡಿದ್ದಾನೆ. ಈ ಕುರಿತು ಯುವತಿ ಮಂಗಳೂರಿನ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು, ಸೆಕ್ಷನ್ 376, 384, 506, 170 ಐಪಿಸಿ ಮತ್ತು ಐಟಿ ಆಕ್ಟ್ ಅಡಿ ಕೇಸು ದಾಖಲಾಗಿದೆ. ಆರೋಪಿಯನ್ನು ಆಗಸ್ಟ್ 9ರಂದು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಿ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇತ್ತೀಚೆಗೆ ಮುಗ್ಧ ಹೆಣ್ಮಕ್ಕಳನ್ನು ಪ್ರೀತಿಸುವ ನಾಟಕವಾಡಿ ಅತ್ಯಾಚಾರ ಮಾಡಿ ಫೋಟೋ ತೆಗೆದು ಬ್ಲಾಕ್ಮೇಲ್ ಮಾಡುವ ಕೃತ್ಯಗಳು ಹೆಚ್ಚುತ್ತಿದ್ದು, ಈ ಬಗ್ಗೆ ಯುವತಿಯರ ಪೋಷಕರು ಜಾಗೃತಿ ಇರಬೇಕೆಂದು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ತಿಳಿಸಿದ್ದಾರೆ.
Fake Vamanjoor police constable arrested in Mangalore, Engineer student raped several times in context of Promising Job. Directed as be identified as Yemanooru from Raichur district. Through Instagram he texted the girl and stated that is a police constable at Vamanjoor police station and promised of giving a job through which is raped her several times
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm