ಬ್ರೇಕಿಂಗ್ ನ್ಯೂಸ್
12-08-23 12:01 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 12: ಮೋದಿ ಹಣ ಬ್ಯಾಂಕ್ ಖಾತೆಗೆ ಬಂದಿದೆ, ತೆಗೆಸಿ ಕೊಡುತ್ತೇನೆಂದು ಹೇಳಿ ವೃದ್ಧ ವ್ಯಕ್ತಿಯೊಬ್ಬರನ್ನು ನಂಬಿಸಿ ಅವರಿಂದಲೇ 7 ಸಾವಿರ ರೂಪಾಯಿ ಕಿತ್ತುಕೊಂಡು ಮೋಸಗೊಳಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದ್ದು, ಪೊಲೀಸ್ ದೂರು ದಾಖಲಾಗಿದೆ.
ಉಪ್ಪಿನಂಗಡಿ ಬಳಿಯ ಪದ್ಮುಂಜ ನಿವಾಸಿ 65 ವರ್ಷದ ವ್ಯಕ್ತಿಯೊಬ್ಬರು ಅಡಿಕೆ ಮಾರಾಟ ಮಾಡಿ ಹಣದೊಂದಿಗೆ ಹಿಂತಿರುಗುತ್ತಿದ್ದಾಗ ಬೈಕಿನಲ್ಲಿ ಬಂದಿದ್ದ ಯುವಕನೊಬ್ಬ ತುಳುವಿನಲ್ಲಿ ತನ್ನನ್ನು ಪರಿಚಯಿಸಿಕೊಂಡಿದ್ದಾನೆ. ಅಲ್ಲದೆ, ತಾನೀಗ ಕೆನರಾ ಬ್ಯಾಂಕ್ ನಲ್ಲಿದ್ದು, ಕೊರೊನಾ ಸಂದರ್ಭದಲ್ಲಿ ಮೋದಿಯವರ ಹಣ ಸಾಕಷ್ಟು ಬಂದಿದೆ. ನಿಮಗೆ ಹಣ ತೆಗೆಸಿಕೊಡುತ್ತೇನೆಂದು ಹೇಳಿ ಯಾಮಾರಿಸಿದ್ದಾನೆ. ಅಲ್ಲದೆ, ನಿಮ್ಮ ಬ್ಯಾಂಕ್ ಪಾಸ್ ಪುಸ್ತಕ, ಆಧಾರ್ ಕಾರ್ಡ್ ಜೆರಾಕ್ಸ್ ಕೊಟ್ಟರೆ ಸಾಕು. ಅದಕ್ಕಾಗಿ 7 ಸಾವಿರ ಕೊಟ್ಟರೆ ಎಲ್ಲ ಕೆಲಸ ನಾನು ಮಾಡಿಸಿಕೊಡುತ್ತೇನೆ ಎಂದು ಹೇಳಿ ನಂಬಿಕೆ ಹುಟ್ಟಿಸಿದ್ದಾನೆ.
ನೀವು ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್ ತರುವುದಕ್ಕೂ ಮುನ್ನ 7 ಸಾವಿರ ರೂ. ತನಗೆ ನೀಡಿ, ಉಳಿದ ಅರ್ಜಿ ತುಂಬುವ ಕೆಲಸ ಮಾಡಿಸುತ್ತೇನೆ ಎಂದು ಹೇಳಿದ್ದು, ಅದರಂತೆ ಅಡಿಕೆ ಮಾರಿದ ಹಣದಲ್ಲಿ ವೃದ್ಧ ವ್ಯಕ್ತಿ ಹಣವನ್ನು ನೀಡಿದ್ದಾರೆ. ವೃದ್ಧ ವ್ಯಕ್ತಿ ಆಧಾರ್ ಕಾರ್ಡ್ ಜೊತೆಗೆ ಬರುವಷ್ಟರಲ್ಲಿ ಬೈಕ್ ಸಹಿತ ಯುವಕ ನಾಪತ್ತೆಯಾಗಿದ್ದ. ಆನಂತರ, ಎಷ್ಟು ಹುಡುಕಾಡಿದರೂ ಯುವಕ ಸಿಗದೇ ಇದ್ದುದರಿಂದ ಇತರೇ ಸಾರ್ವಜನಿಕರಿಗೆ ತಿಳಿಸಿದಾಗ ಮೋಸ ಹೋಗಿದ್ದು ತಿಳಿದುಬಂದಿದೆ. ಈ ಬಗ್ಗೆ ಹಣ ಕಳಕೊಂಡವರು ಪೊಲೀಸರಿಗೆ ದೂರು ನೀಡಿದ್ದು ಉಪ್ಪಿನಂಗಡಿ ಪೇಟೆಯ ಸಿಸಿ ಕ್ಯಾಮರಾ ಪರಿಶೀಲನೆ ನಡೆಸುತ್ತಿದ್ದಾರೆ.
ಮೋದಿ ಹಣ ಬಂದಿದೆ ಎಂದು ಹೇಳಿ ಅಮಾಯಕರಿಂದ ಹಣ ಎಗರಿಸುವ ಕೃತ್ಯ ಉಪ್ಪಿನಂಗಡಿ ಆಸುಪಾಸಿನಲ್ಲಿ ಹಲವು ಬಾರಿ ನಡೆದಿದ್ದು, ಪ್ರತಿ ಬಾರಿಯೂ 7 ಸಾವಿರ ರೂ. ಕೀಳುತ್ತಿರುವುದರ ಹಿಂದೆ ಒಬ್ಬನದ್ದೇ ಕೈವಾಡ ಇರುವ ಶಂಕೆ ಉಂಟಾಗಿದೆ.
Puttur Man cheats of 7 thousand to old man saying Modi money has come to Bank account.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:19 pm
Mangalore Correspondent
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm