ಬ್ರೇಕಿಂಗ್ ನ್ಯೂಸ್
12-08-23 12:01 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 12: ಮೋದಿ ಹಣ ಬ್ಯಾಂಕ್ ಖಾತೆಗೆ ಬಂದಿದೆ, ತೆಗೆಸಿ ಕೊಡುತ್ತೇನೆಂದು ಹೇಳಿ ವೃದ್ಧ ವ್ಯಕ್ತಿಯೊಬ್ಬರನ್ನು ನಂಬಿಸಿ ಅವರಿಂದಲೇ 7 ಸಾವಿರ ರೂಪಾಯಿ ಕಿತ್ತುಕೊಂಡು ಮೋಸಗೊಳಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದ್ದು, ಪೊಲೀಸ್ ದೂರು ದಾಖಲಾಗಿದೆ.
ಉಪ್ಪಿನಂಗಡಿ ಬಳಿಯ ಪದ್ಮುಂಜ ನಿವಾಸಿ 65 ವರ್ಷದ ವ್ಯಕ್ತಿಯೊಬ್ಬರು ಅಡಿಕೆ ಮಾರಾಟ ಮಾಡಿ ಹಣದೊಂದಿಗೆ ಹಿಂತಿರುಗುತ್ತಿದ್ದಾಗ ಬೈಕಿನಲ್ಲಿ ಬಂದಿದ್ದ ಯುವಕನೊಬ್ಬ ತುಳುವಿನಲ್ಲಿ ತನ್ನನ್ನು ಪರಿಚಯಿಸಿಕೊಂಡಿದ್ದಾನೆ. ಅಲ್ಲದೆ, ತಾನೀಗ ಕೆನರಾ ಬ್ಯಾಂಕ್ ನಲ್ಲಿದ್ದು, ಕೊರೊನಾ ಸಂದರ್ಭದಲ್ಲಿ ಮೋದಿಯವರ ಹಣ ಸಾಕಷ್ಟು ಬಂದಿದೆ. ನಿಮಗೆ ಹಣ ತೆಗೆಸಿಕೊಡುತ್ತೇನೆಂದು ಹೇಳಿ ಯಾಮಾರಿಸಿದ್ದಾನೆ. ಅಲ್ಲದೆ, ನಿಮ್ಮ ಬ್ಯಾಂಕ್ ಪಾಸ್ ಪುಸ್ತಕ, ಆಧಾರ್ ಕಾರ್ಡ್ ಜೆರಾಕ್ಸ್ ಕೊಟ್ಟರೆ ಸಾಕು. ಅದಕ್ಕಾಗಿ 7 ಸಾವಿರ ಕೊಟ್ಟರೆ ಎಲ್ಲ ಕೆಲಸ ನಾನು ಮಾಡಿಸಿಕೊಡುತ್ತೇನೆ ಎಂದು ಹೇಳಿ ನಂಬಿಕೆ ಹುಟ್ಟಿಸಿದ್ದಾನೆ.
ನೀವು ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್ ತರುವುದಕ್ಕೂ ಮುನ್ನ 7 ಸಾವಿರ ರೂ. ತನಗೆ ನೀಡಿ, ಉಳಿದ ಅರ್ಜಿ ತುಂಬುವ ಕೆಲಸ ಮಾಡಿಸುತ್ತೇನೆ ಎಂದು ಹೇಳಿದ್ದು, ಅದರಂತೆ ಅಡಿಕೆ ಮಾರಿದ ಹಣದಲ್ಲಿ ವೃದ್ಧ ವ್ಯಕ್ತಿ ಹಣವನ್ನು ನೀಡಿದ್ದಾರೆ. ವೃದ್ಧ ವ್ಯಕ್ತಿ ಆಧಾರ್ ಕಾರ್ಡ್ ಜೊತೆಗೆ ಬರುವಷ್ಟರಲ್ಲಿ ಬೈಕ್ ಸಹಿತ ಯುವಕ ನಾಪತ್ತೆಯಾಗಿದ್ದ. ಆನಂತರ, ಎಷ್ಟು ಹುಡುಕಾಡಿದರೂ ಯುವಕ ಸಿಗದೇ ಇದ್ದುದರಿಂದ ಇತರೇ ಸಾರ್ವಜನಿಕರಿಗೆ ತಿಳಿಸಿದಾಗ ಮೋಸ ಹೋಗಿದ್ದು ತಿಳಿದುಬಂದಿದೆ. ಈ ಬಗ್ಗೆ ಹಣ ಕಳಕೊಂಡವರು ಪೊಲೀಸರಿಗೆ ದೂರು ನೀಡಿದ್ದು ಉಪ್ಪಿನಂಗಡಿ ಪೇಟೆಯ ಸಿಸಿ ಕ್ಯಾಮರಾ ಪರಿಶೀಲನೆ ನಡೆಸುತ್ತಿದ್ದಾರೆ.
ಮೋದಿ ಹಣ ಬಂದಿದೆ ಎಂದು ಹೇಳಿ ಅಮಾಯಕರಿಂದ ಹಣ ಎಗರಿಸುವ ಕೃತ್ಯ ಉಪ್ಪಿನಂಗಡಿ ಆಸುಪಾಸಿನಲ್ಲಿ ಹಲವು ಬಾರಿ ನಡೆದಿದ್ದು, ಪ್ರತಿ ಬಾರಿಯೂ 7 ಸಾವಿರ ರೂ. ಕೀಳುತ್ತಿರುವುದರ ಹಿಂದೆ ಒಬ್ಬನದ್ದೇ ಕೈವಾಡ ಇರುವ ಶಂಕೆ ಉಂಟಾಗಿದೆ.
Puttur Man cheats of 7 thousand to old man saying Modi money has come to Bank account.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm