ಬ್ರೇಕಿಂಗ್ ನ್ಯೂಸ್
12-08-23 12:01 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 12: ಮೋದಿ ಹಣ ಬ್ಯಾಂಕ್ ಖಾತೆಗೆ ಬಂದಿದೆ, ತೆಗೆಸಿ ಕೊಡುತ್ತೇನೆಂದು ಹೇಳಿ ವೃದ್ಧ ವ್ಯಕ್ತಿಯೊಬ್ಬರನ್ನು ನಂಬಿಸಿ ಅವರಿಂದಲೇ 7 ಸಾವಿರ ರೂಪಾಯಿ ಕಿತ್ತುಕೊಂಡು ಮೋಸಗೊಳಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದ್ದು, ಪೊಲೀಸ್ ದೂರು ದಾಖಲಾಗಿದೆ.
ಉಪ್ಪಿನಂಗಡಿ ಬಳಿಯ ಪದ್ಮುಂಜ ನಿವಾಸಿ 65 ವರ್ಷದ ವ್ಯಕ್ತಿಯೊಬ್ಬರು ಅಡಿಕೆ ಮಾರಾಟ ಮಾಡಿ ಹಣದೊಂದಿಗೆ ಹಿಂತಿರುಗುತ್ತಿದ್ದಾಗ ಬೈಕಿನಲ್ಲಿ ಬಂದಿದ್ದ ಯುವಕನೊಬ್ಬ ತುಳುವಿನಲ್ಲಿ ತನ್ನನ್ನು ಪರಿಚಯಿಸಿಕೊಂಡಿದ್ದಾನೆ. ಅಲ್ಲದೆ, ತಾನೀಗ ಕೆನರಾ ಬ್ಯಾಂಕ್ ನಲ್ಲಿದ್ದು, ಕೊರೊನಾ ಸಂದರ್ಭದಲ್ಲಿ ಮೋದಿಯವರ ಹಣ ಸಾಕಷ್ಟು ಬಂದಿದೆ. ನಿಮಗೆ ಹಣ ತೆಗೆಸಿಕೊಡುತ್ತೇನೆಂದು ಹೇಳಿ ಯಾಮಾರಿಸಿದ್ದಾನೆ. ಅಲ್ಲದೆ, ನಿಮ್ಮ ಬ್ಯಾಂಕ್ ಪಾಸ್ ಪುಸ್ತಕ, ಆಧಾರ್ ಕಾರ್ಡ್ ಜೆರಾಕ್ಸ್ ಕೊಟ್ಟರೆ ಸಾಕು. ಅದಕ್ಕಾಗಿ 7 ಸಾವಿರ ಕೊಟ್ಟರೆ ಎಲ್ಲ ಕೆಲಸ ನಾನು ಮಾಡಿಸಿಕೊಡುತ್ತೇನೆ ಎಂದು ಹೇಳಿ ನಂಬಿಕೆ ಹುಟ್ಟಿಸಿದ್ದಾನೆ.
ನೀವು ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್ ತರುವುದಕ್ಕೂ ಮುನ್ನ 7 ಸಾವಿರ ರೂ. ತನಗೆ ನೀಡಿ, ಉಳಿದ ಅರ್ಜಿ ತುಂಬುವ ಕೆಲಸ ಮಾಡಿಸುತ್ತೇನೆ ಎಂದು ಹೇಳಿದ್ದು, ಅದರಂತೆ ಅಡಿಕೆ ಮಾರಿದ ಹಣದಲ್ಲಿ ವೃದ್ಧ ವ್ಯಕ್ತಿ ಹಣವನ್ನು ನೀಡಿದ್ದಾರೆ. ವೃದ್ಧ ವ್ಯಕ್ತಿ ಆಧಾರ್ ಕಾರ್ಡ್ ಜೊತೆಗೆ ಬರುವಷ್ಟರಲ್ಲಿ ಬೈಕ್ ಸಹಿತ ಯುವಕ ನಾಪತ್ತೆಯಾಗಿದ್ದ. ಆನಂತರ, ಎಷ್ಟು ಹುಡುಕಾಡಿದರೂ ಯುವಕ ಸಿಗದೇ ಇದ್ದುದರಿಂದ ಇತರೇ ಸಾರ್ವಜನಿಕರಿಗೆ ತಿಳಿಸಿದಾಗ ಮೋಸ ಹೋಗಿದ್ದು ತಿಳಿದುಬಂದಿದೆ. ಈ ಬಗ್ಗೆ ಹಣ ಕಳಕೊಂಡವರು ಪೊಲೀಸರಿಗೆ ದೂರು ನೀಡಿದ್ದು ಉಪ್ಪಿನಂಗಡಿ ಪೇಟೆಯ ಸಿಸಿ ಕ್ಯಾಮರಾ ಪರಿಶೀಲನೆ ನಡೆಸುತ್ತಿದ್ದಾರೆ.
ಮೋದಿ ಹಣ ಬಂದಿದೆ ಎಂದು ಹೇಳಿ ಅಮಾಯಕರಿಂದ ಹಣ ಎಗರಿಸುವ ಕೃತ್ಯ ಉಪ್ಪಿನಂಗಡಿ ಆಸುಪಾಸಿನಲ್ಲಿ ಹಲವು ಬಾರಿ ನಡೆದಿದ್ದು, ಪ್ರತಿ ಬಾರಿಯೂ 7 ಸಾವಿರ ರೂ. ಕೀಳುತ್ತಿರುವುದರ ಹಿಂದೆ ಒಬ್ಬನದ್ದೇ ಕೈವಾಡ ಇರುವ ಶಂಕೆ ಉಂಟಾಗಿದೆ.
Puttur Man cheats of 7 thousand to old man saying Modi money has come to Bank account.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am