ಬ್ರೇಕಿಂಗ್ ನ್ಯೂಸ್
12-08-23 12:01 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 12: ಮೋದಿ ಹಣ ಬ್ಯಾಂಕ್ ಖಾತೆಗೆ ಬಂದಿದೆ, ತೆಗೆಸಿ ಕೊಡುತ್ತೇನೆಂದು ಹೇಳಿ ವೃದ್ಧ ವ್ಯಕ್ತಿಯೊಬ್ಬರನ್ನು ನಂಬಿಸಿ ಅವರಿಂದಲೇ 7 ಸಾವಿರ ರೂಪಾಯಿ ಕಿತ್ತುಕೊಂಡು ಮೋಸಗೊಳಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದ್ದು, ಪೊಲೀಸ್ ದೂರು ದಾಖಲಾಗಿದೆ.
ಉಪ್ಪಿನಂಗಡಿ ಬಳಿಯ ಪದ್ಮುಂಜ ನಿವಾಸಿ 65 ವರ್ಷದ ವ್ಯಕ್ತಿಯೊಬ್ಬರು ಅಡಿಕೆ ಮಾರಾಟ ಮಾಡಿ ಹಣದೊಂದಿಗೆ ಹಿಂತಿರುಗುತ್ತಿದ್ದಾಗ ಬೈಕಿನಲ್ಲಿ ಬಂದಿದ್ದ ಯುವಕನೊಬ್ಬ ತುಳುವಿನಲ್ಲಿ ತನ್ನನ್ನು ಪರಿಚಯಿಸಿಕೊಂಡಿದ್ದಾನೆ. ಅಲ್ಲದೆ, ತಾನೀಗ ಕೆನರಾ ಬ್ಯಾಂಕ್ ನಲ್ಲಿದ್ದು, ಕೊರೊನಾ ಸಂದರ್ಭದಲ್ಲಿ ಮೋದಿಯವರ ಹಣ ಸಾಕಷ್ಟು ಬಂದಿದೆ. ನಿಮಗೆ ಹಣ ತೆಗೆಸಿಕೊಡುತ್ತೇನೆಂದು ಹೇಳಿ ಯಾಮಾರಿಸಿದ್ದಾನೆ. ಅಲ್ಲದೆ, ನಿಮ್ಮ ಬ್ಯಾಂಕ್ ಪಾಸ್ ಪುಸ್ತಕ, ಆಧಾರ್ ಕಾರ್ಡ್ ಜೆರಾಕ್ಸ್ ಕೊಟ್ಟರೆ ಸಾಕು. ಅದಕ್ಕಾಗಿ 7 ಸಾವಿರ ಕೊಟ್ಟರೆ ಎಲ್ಲ ಕೆಲಸ ನಾನು ಮಾಡಿಸಿಕೊಡುತ್ತೇನೆ ಎಂದು ಹೇಳಿ ನಂಬಿಕೆ ಹುಟ್ಟಿಸಿದ್ದಾನೆ.
ನೀವು ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್ ತರುವುದಕ್ಕೂ ಮುನ್ನ 7 ಸಾವಿರ ರೂ. ತನಗೆ ನೀಡಿ, ಉಳಿದ ಅರ್ಜಿ ತುಂಬುವ ಕೆಲಸ ಮಾಡಿಸುತ್ತೇನೆ ಎಂದು ಹೇಳಿದ್ದು, ಅದರಂತೆ ಅಡಿಕೆ ಮಾರಿದ ಹಣದಲ್ಲಿ ವೃದ್ಧ ವ್ಯಕ್ತಿ ಹಣವನ್ನು ನೀಡಿದ್ದಾರೆ. ವೃದ್ಧ ವ್ಯಕ್ತಿ ಆಧಾರ್ ಕಾರ್ಡ್ ಜೊತೆಗೆ ಬರುವಷ್ಟರಲ್ಲಿ ಬೈಕ್ ಸಹಿತ ಯುವಕ ನಾಪತ್ತೆಯಾಗಿದ್ದ. ಆನಂತರ, ಎಷ್ಟು ಹುಡುಕಾಡಿದರೂ ಯುವಕ ಸಿಗದೇ ಇದ್ದುದರಿಂದ ಇತರೇ ಸಾರ್ವಜನಿಕರಿಗೆ ತಿಳಿಸಿದಾಗ ಮೋಸ ಹೋಗಿದ್ದು ತಿಳಿದುಬಂದಿದೆ. ಈ ಬಗ್ಗೆ ಹಣ ಕಳಕೊಂಡವರು ಪೊಲೀಸರಿಗೆ ದೂರು ನೀಡಿದ್ದು ಉಪ್ಪಿನಂಗಡಿ ಪೇಟೆಯ ಸಿಸಿ ಕ್ಯಾಮರಾ ಪರಿಶೀಲನೆ ನಡೆಸುತ್ತಿದ್ದಾರೆ.
ಮೋದಿ ಹಣ ಬಂದಿದೆ ಎಂದು ಹೇಳಿ ಅಮಾಯಕರಿಂದ ಹಣ ಎಗರಿಸುವ ಕೃತ್ಯ ಉಪ್ಪಿನಂಗಡಿ ಆಸುಪಾಸಿನಲ್ಲಿ ಹಲವು ಬಾರಿ ನಡೆದಿದ್ದು, ಪ್ರತಿ ಬಾರಿಯೂ 7 ಸಾವಿರ ರೂ. ಕೀಳುತ್ತಿರುವುದರ ಹಿಂದೆ ಒಬ್ಬನದ್ದೇ ಕೈವಾಡ ಇರುವ ಶಂಕೆ ಉಂಟಾಗಿದೆ.
Puttur Man cheats of 7 thousand to old man saying Modi money has come to Bank account.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm