ಬ್ರೇಕಿಂಗ್ ನ್ಯೂಸ್
12-08-23 12:01 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 12: ಮೋದಿ ಹಣ ಬ್ಯಾಂಕ್ ಖಾತೆಗೆ ಬಂದಿದೆ, ತೆಗೆಸಿ ಕೊಡುತ್ತೇನೆಂದು ಹೇಳಿ ವೃದ್ಧ ವ್ಯಕ್ತಿಯೊಬ್ಬರನ್ನು ನಂಬಿಸಿ ಅವರಿಂದಲೇ 7 ಸಾವಿರ ರೂಪಾಯಿ ಕಿತ್ತುಕೊಂಡು ಮೋಸಗೊಳಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದ್ದು, ಪೊಲೀಸ್ ದೂರು ದಾಖಲಾಗಿದೆ.
ಉಪ್ಪಿನಂಗಡಿ ಬಳಿಯ ಪದ್ಮುಂಜ ನಿವಾಸಿ 65 ವರ್ಷದ ವ್ಯಕ್ತಿಯೊಬ್ಬರು ಅಡಿಕೆ ಮಾರಾಟ ಮಾಡಿ ಹಣದೊಂದಿಗೆ ಹಿಂತಿರುಗುತ್ತಿದ್ದಾಗ ಬೈಕಿನಲ್ಲಿ ಬಂದಿದ್ದ ಯುವಕನೊಬ್ಬ ತುಳುವಿನಲ್ಲಿ ತನ್ನನ್ನು ಪರಿಚಯಿಸಿಕೊಂಡಿದ್ದಾನೆ. ಅಲ್ಲದೆ, ತಾನೀಗ ಕೆನರಾ ಬ್ಯಾಂಕ್ ನಲ್ಲಿದ್ದು, ಕೊರೊನಾ ಸಂದರ್ಭದಲ್ಲಿ ಮೋದಿಯವರ ಹಣ ಸಾಕಷ್ಟು ಬಂದಿದೆ. ನಿಮಗೆ ಹಣ ತೆಗೆಸಿಕೊಡುತ್ತೇನೆಂದು ಹೇಳಿ ಯಾಮಾರಿಸಿದ್ದಾನೆ. ಅಲ್ಲದೆ, ನಿಮ್ಮ ಬ್ಯಾಂಕ್ ಪಾಸ್ ಪುಸ್ತಕ, ಆಧಾರ್ ಕಾರ್ಡ್ ಜೆರಾಕ್ಸ್ ಕೊಟ್ಟರೆ ಸಾಕು. ಅದಕ್ಕಾಗಿ 7 ಸಾವಿರ ಕೊಟ್ಟರೆ ಎಲ್ಲ ಕೆಲಸ ನಾನು ಮಾಡಿಸಿಕೊಡುತ್ತೇನೆ ಎಂದು ಹೇಳಿ ನಂಬಿಕೆ ಹುಟ್ಟಿಸಿದ್ದಾನೆ.
ನೀವು ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್ ತರುವುದಕ್ಕೂ ಮುನ್ನ 7 ಸಾವಿರ ರೂ. ತನಗೆ ನೀಡಿ, ಉಳಿದ ಅರ್ಜಿ ತುಂಬುವ ಕೆಲಸ ಮಾಡಿಸುತ್ತೇನೆ ಎಂದು ಹೇಳಿದ್ದು, ಅದರಂತೆ ಅಡಿಕೆ ಮಾರಿದ ಹಣದಲ್ಲಿ ವೃದ್ಧ ವ್ಯಕ್ತಿ ಹಣವನ್ನು ನೀಡಿದ್ದಾರೆ. ವೃದ್ಧ ವ್ಯಕ್ತಿ ಆಧಾರ್ ಕಾರ್ಡ್ ಜೊತೆಗೆ ಬರುವಷ್ಟರಲ್ಲಿ ಬೈಕ್ ಸಹಿತ ಯುವಕ ನಾಪತ್ತೆಯಾಗಿದ್ದ. ಆನಂತರ, ಎಷ್ಟು ಹುಡುಕಾಡಿದರೂ ಯುವಕ ಸಿಗದೇ ಇದ್ದುದರಿಂದ ಇತರೇ ಸಾರ್ವಜನಿಕರಿಗೆ ತಿಳಿಸಿದಾಗ ಮೋಸ ಹೋಗಿದ್ದು ತಿಳಿದುಬಂದಿದೆ. ಈ ಬಗ್ಗೆ ಹಣ ಕಳಕೊಂಡವರು ಪೊಲೀಸರಿಗೆ ದೂರು ನೀಡಿದ್ದು ಉಪ್ಪಿನಂಗಡಿ ಪೇಟೆಯ ಸಿಸಿ ಕ್ಯಾಮರಾ ಪರಿಶೀಲನೆ ನಡೆಸುತ್ತಿದ್ದಾರೆ.
ಮೋದಿ ಹಣ ಬಂದಿದೆ ಎಂದು ಹೇಳಿ ಅಮಾಯಕರಿಂದ ಹಣ ಎಗರಿಸುವ ಕೃತ್ಯ ಉಪ್ಪಿನಂಗಡಿ ಆಸುಪಾಸಿನಲ್ಲಿ ಹಲವು ಬಾರಿ ನಡೆದಿದ್ದು, ಪ್ರತಿ ಬಾರಿಯೂ 7 ಸಾವಿರ ರೂ. ಕೀಳುತ್ತಿರುವುದರ ಹಿಂದೆ ಒಬ್ಬನದ್ದೇ ಕೈವಾಡ ಇರುವ ಶಂಕೆ ಉಂಟಾಗಿದೆ.
Puttur Man cheats of 7 thousand to old man saying Modi money has come to Bank account.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm