ಬ್ರೇಕಿಂಗ್ ನ್ಯೂಸ್
13-08-23 02:21 pm Mangalore Correspondent ಕ್ರೈಂ
ಉಳ್ಳಾಲ, ಆ.13: ರೌಡಿಗಳಿಗೆಲ್ಲ ಮನೆಯನ್ನ ಬಾಡಿಗೆ ನೀಡಬೇಡಿ ಎಂದು ಸಂಬಂಧಿಕರಲ್ಲಿ ಹೇಳಿದ ವ್ಯಕ್ತಿಯನ್ನ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ನೆತ್ತಿಲಪದವು ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ನಡೆದಿದೆ.
ನೆತ್ತಿಲಪದವು ನಿವಾಸಿ ಮನ್ಸೂರ್ (40) ಎಂಬವರನ್ನ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಲಾಗಿದೆ. ಉಳ್ಳಾಲದ ನಟೋರಿಯಸ್ ಟಾರ್ಗೆಟ್ ತಂಡದ ಕೋಟೆಪುರ ನಿವಾಸಿ ನಮೀರ್ ಹಂಝ ಕೊಲೆಗೆ ಯತ್ನಿಸಿದ ಆರೋಪಿಯಾಗಿದ್ದು ಕೃತ್ಯ ಎಸಗಿದ ಬಳಿಕ ತಲೆಮರೆಸಿಕೊಂಡಿದ್ದಾನೆ. ನಮೀರ್ ಹಂಝ ತನ್ನ ಸಹೋದರನಿಗೆ ಬಾಡಿಗೆ ಮನೆ ನೋಡಲೆಂದು ನೆತ್ತಿಲಪದವು ಬಳಿಯ ಮನ್ಸೂರ್ ಸಂಬಂಧಿಕರ ಮನೆಗೆ ಬಂದಿದ್ದ. ಈ ವೇಳೆ ಮನ್ಸೂರ್ ರೌಡಿಗಳಿಗೆ ಬಾಡಿಗೆ ಮನೆ ನೀಡದಂತೆ ಸಂಬಂಧಿಗಳಿಗೆ ತಿಳಿಸಿದ್ದರಂತೆ. ಪರಿಣಾಮ ಮನ್ಸೂರ್ ಹಾಗೂ ನಮೀರ್ ಹಂಝ ತಂಡಗಳ ನಡುವೆ ಮಾತಿನ ಚಕಮಕಿ ನಡೆದು, ಪರಸ್ಪರ ಹೊಡೆದಾಡಿದ್ದಾರೆ. ಕುಪಿತಗೊಂಡ ನಮೀರ್ ಕತ್ತಿಯಿಂದ ಮನ್ಸೂರ್ ಕೈಗೆ ಕಡಿದು ಕೊಲೆಗೆ ಯತ್ನಿಸಿದ್ದಾನೆ. ಗಾಯಾಳು ಮನ್ಸೂರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲ ಬಿಚ್ಚಿದ ಟಾರ್ಗೆಟ್ ತಂಡ!
ಐದಾರು ವರ್ಷಗಳ ಹಿಂದೆ ಉಳ್ಳಾಲದಲ್ಲಿ ಹನಿಟ್ರ್ಯಾಪ್ , ಮುಕ್ಕಚ್ಚೇರಿಯಲ್ಲಿ ಬಿಜೆಪಿ ಕಾರ್ಯಕರ್ತ ಜುಬೈರ್ ಹತ್ಯೆ ಸೇರಿದಂತೆ ಅನೇಕ ಕೊಲೆಯತ್ನ, ಹಲ್ಲೆ ಪ್ರಕರಣಗಳಲ್ಲಿ ಟಾರ್ಗೆಟ್ ತಂಡ ಸಕ್ರಿಯವಾಗಿ ಸದ್ದು ಮಾಡಿತ್ತು. ತಂಡದ ಪ್ರಮುಖ ಇಲ್ಯಾಸ್ ಕೊಲೆಯಾದ ನಂತರ ಟಾರ್ಗೆಟ್ ತಂಡ ಸೈಲೆಂಟಾಗಿತ್ತು. ಇದೇ ತಂಡದಲ್ಲಿದ್ದ ನಮೀರ್ ಹಂಝ ಕೂಡ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.
Mangalore Target gang rowdy member attacks man using knife at Konaje over House rent issue.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm