ಬ್ರೇಕಿಂಗ್ ನ್ಯೂಸ್
13-08-23 02:21 pm Mangalore Correspondent ಕ್ರೈಂ
ಉಳ್ಳಾಲ, ಆ.13: ರೌಡಿಗಳಿಗೆಲ್ಲ ಮನೆಯನ್ನ ಬಾಡಿಗೆ ನೀಡಬೇಡಿ ಎಂದು ಸಂಬಂಧಿಕರಲ್ಲಿ ಹೇಳಿದ ವ್ಯಕ್ತಿಯನ್ನ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ನೆತ್ತಿಲಪದವು ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ನಡೆದಿದೆ.
ನೆತ್ತಿಲಪದವು ನಿವಾಸಿ ಮನ್ಸೂರ್ (40) ಎಂಬವರನ್ನ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಲಾಗಿದೆ. ಉಳ್ಳಾಲದ ನಟೋರಿಯಸ್ ಟಾರ್ಗೆಟ್ ತಂಡದ ಕೋಟೆಪುರ ನಿವಾಸಿ ನಮೀರ್ ಹಂಝ ಕೊಲೆಗೆ ಯತ್ನಿಸಿದ ಆರೋಪಿಯಾಗಿದ್ದು ಕೃತ್ಯ ಎಸಗಿದ ಬಳಿಕ ತಲೆಮರೆಸಿಕೊಂಡಿದ್ದಾನೆ. ನಮೀರ್ ಹಂಝ ತನ್ನ ಸಹೋದರನಿಗೆ ಬಾಡಿಗೆ ಮನೆ ನೋಡಲೆಂದು ನೆತ್ತಿಲಪದವು ಬಳಿಯ ಮನ್ಸೂರ್ ಸಂಬಂಧಿಕರ ಮನೆಗೆ ಬಂದಿದ್ದ. ಈ ವೇಳೆ ಮನ್ಸೂರ್ ರೌಡಿಗಳಿಗೆ ಬಾಡಿಗೆ ಮನೆ ನೀಡದಂತೆ ಸಂಬಂಧಿಗಳಿಗೆ ತಿಳಿಸಿದ್ದರಂತೆ. ಪರಿಣಾಮ ಮನ್ಸೂರ್ ಹಾಗೂ ನಮೀರ್ ಹಂಝ ತಂಡಗಳ ನಡುವೆ ಮಾತಿನ ಚಕಮಕಿ ನಡೆದು, ಪರಸ್ಪರ ಹೊಡೆದಾಡಿದ್ದಾರೆ. ಕುಪಿತಗೊಂಡ ನಮೀರ್ ಕತ್ತಿಯಿಂದ ಮನ್ಸೂರ್ ಕೈಗೆ ಕಡಿದು ಕೊಲೆಗೆ ಯತ್ನಿಸಿದ್ದಾನೆ. ಗಾಯಾಳು ಮನ್ಸೂರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲ ಬಿಚ್ಚಿದ ಟಾರ್ಗೆಟ್ ತಂಡ!
ಐದಾರು ವರ್ಷಗಳ ಹಿಂದೆ ಉಳ್ಳಾಲದಲ್ಲಿ ಹನಿಟ್ರ್ಯಾಪ್ , ಮುಕ್ಕಚ್ಚೇರಿಯಲ್ಲಿ ಬಿಜೆಪಿ ಕಾರ್ಯಕರ್ತ ಜುಬೈರ್ ಹತ್ಯೆ ಸೇರಿದಂತೆ ಅನೇಕ ಕೊಲೆಯತ್ನ, ಹಲ್ಲೆ ಪ್ರಕರಣಗಳಲ್ಲಿ ಟಾರ್ಗೆಟ್ ತಂಡ ಸಕ್ರಿಯವಾಗಿ ಸದ್ದು ಮಾಡಿತ್ತು. ತಂಡದ ಪ್ರಮುಖ ಇಲ್ಯಾಸ್ ಕೊಲೆಯಾದ ನಂತರ ಟಾರ್ಗೆಟ್ ತಂಡ ಸೈಲೆಂಟಾಗಿತ್ತು. ಇದೇ ತಂಡದಲ್ಲಿದ್ದ ನಮೀರ್ ಹಂಝ ಕೂಡ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.
Mangalore Target gang rowdy member attacks man using knife at Konaje over House rent issue.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm