ಬ್ರೇಕಿಂಗ್ ನ್ಯೂಸ್
15-08-23 11:21 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 15: “ಡ್ರಗ್ಸ್ ಫ್ರೀ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ ಪೊಲೀಸ್ ಠಾಣೆ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ MDMA ಡ್ರಗ್ಸ್ ಮಾರಾಟ ಮಾಡುತ್ತಿದ್ದ 4 ಆರೋಪಿಗಳನ್ನು ದಸ್ತಗಿರಿ ಮಾಡಿ ಒಟ್ಟು 200 ಗ್ರಾಂ ಎಂಡಿಎಂಎ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರಿನಿಂದ MDMA ಮಾದಕ ವಸ್ತುವನ್ನು ಖರೀದಿಸಿ ಮಂಗಳೂರು ನಗರದ ಉತ್ತರ ಠಾಣಾ ವ್ಯಾಪ್ತಿಯ ಫಳ್ನೀರ್ ಪರಿಸರದಲ್ಲಿ KA-19-MG-2744 ಮಾರುತಿ ಸ್ವಿಫ್ಟ್ ಕಾರಿನಲ್ಲಿ ಮೂವರು ವ್ಯಕ್ತಿಗಳು ಸೇರಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಕಾಸರಗೋಡು ಜಿಲ್ಲೆಯ ಉದ್ಯಾವರ ನಿವಾಸಿ ಮೊಹಮ್ಮದ್ ಹನೀಫ್ ಎ.ಎನ್(47), ಸೈಯದ್ ಫೌಜಾನ್(30), ಕುಂಜತ್ತೂರು ನಿವಾಸಿ ಸಿರಾಜುದ್ದೀನ್ ಅಬ್ಬೂಬಕ್ಕರ್(35) ಎಂಬುವರನ್ನು ಬಂಧಿಸಿದ್ದಾರೆ.

ಇವರಿಂದ ಒಟ್ಟು 100 ಗ್ರಾಂ ತೂಕದ ರೂ. 5,00,000/- ಮೌಲ್ಯದ ಎಂಡಿಎಂಎ ಮಾದಕ ವಸ್ತು, ನಗದು ರೂ. 4000/- ಮಾರುತಿ ಸ್ವಿಫ್ಟ್ ಕಾರು-1, ಮೊಬೈಲ್ ಫೋನುಗಳು-3, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಸೊತ್ತುಗಳ ಒಟ್ಟು ಮೌಲ್ಯ ರೂ 10,94,500/-ಆಗಬಹುದು. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಇನ್ನೊಂದು ಪ್ರಕರಣದಲ್ಲಿ ಮಂಗಳೂರು ನಗರದ ಅಳಪೆ ಗ್ರಾಮದ ಕಂಕನಾಡಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ವ್ಯಕ್ತಿಯೊಬ್ಬ MDMA ಡ್ರಗ್ಸ್ ವಶದಲ್ಲಿರಿಸಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದು ಮಂಜೇಶ್ವರ ಮೀಯಪದವು ನಿವಾಸಿ ಇಬ್ರಾಹಿಂ ಅರ್ಷಾದ್ ವಿ.ಕೆ(30) ಎಂಬಾತನನ್ನು ಬಂಧಿಸಿದ್ದು ಒಟ್ಟು 100 ಗ್ರಾಂ ತೂಕದ ರೂ. 5,00,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ನಗದು ರೂ. 1000/-, ಮೊಬೈಲ್ ಫೋನುಗಳು-1, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಆರೋಪಿ ಇಬ್ರಾಹಿಂ ಹರ್ಷಾದ್ ಎಂಬಾತನ ವಿರುದ್ಧ ಈ ಹಿಂದೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ 175 ಕೆಜಿ ಗಾಂಜಾ ಸಾಗಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿರುತ್ತದೆ. ಅಲ್ಲದೆ, ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ 2 ಹಲ್ಲೆ ಪ್ರಕರಣಗಳು ಹಾಗೂ ಕುಂಬಳೆ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ.
CCB arrest four MDMA peddlers under Operation Drugs Free Mangalore. The arrests were carried out through two separate operations conducted at the Mangaluru North Police Station and Kankanady police station under the Commissionerate.
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 10:54 pm
HK News Staffer
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
Controversial Missionary Mohan C. Lazarus’ Ud...
17-03-26 09:19 pm
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am