ಬ್ರೇಕಿಂಗ್ ನ್ಯೂಸ್
17-08-23 09:53 pm Mangalore Correspondent ಕ್ರೈಂ
ಸುಳ್ಯ, ಆಗಸ್ಟ್ 17: ರಿಲಯನ್ಸ್ ಜಿಯೋ ಕಂಪನಿಯ ಟವರ್ ನಿರ್ಮಾಣ ಮಾಡಲು ಜಾಗ ಬೇಕಿದೆ ಎಂದು ಕರೆ ಮಾಡಿದ್ದ ಅಪರಿಚಿತರು ವ್ಯಕ್ತಿಯೊಬ್ಬರಿಂದ ದಾಖಲೆ ಪತ್ರಗಳನ್ನು ಪಡೆದು ಮೋಸ ಮಾಡಿದ್ದಲ್ಲದೆ, ಕೊನೆಗೆ ಅವರಿಂದಲೇ ಹಣ ವಸೂಲಿ ಮಾಡಿ ವಂಚನೆ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.
ಈ ಬಗ್ಗೆ ಮೋಸಕ್ಕೊಳಗಾದ ಸುಳ್ಯ ತಾಲೂಕಿನ ಐವತ್ತೊಕ್ಲು ಗ್ರಾಮದ ನಿವಾಸಿ ನಾರಾಯಣ್ ಎನ್(56) ಎಂಬವರು ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದಾರೆ. ತಮ್ಮನ್ನು ರಿಲಯನ್ಸ್ ಕಂಪನಿಯವರೆಂದು ಪರಿಚಯಿಸಿಕೊಂಡು ಕರೆ ಮಾಡಿದ್ದ ಅಪರಿಚಿತರು ಟವರ್ ನಿರ್ಮಾಣಕ್ಕೆ ಸ್ವಂತ ಜಾಗದಲ್ಲಿ ಜಮೀನು ಕೇಳಿದ್ದಾರೆ. ಇಂತಿಷ್ಟು ಬಾಡಿಗೆ ನೀಡುತ್ತೇವೆಂದು ಹೇಳಿ ಒಪ್ಪಿಸಿದ್ದಲ್ಲದೆ, ಜಾಗದ ಪತ್ರಗಳನ್ನು ಮೊಬೈಲ್ ವಾಟ್ಸಪ್ ಮೂಲಕ ಪಡೆದುಕೊಂಡಿದ್ದಾರೆ.
ಅಲ್ಲದೆ, ಕಾಗದ ಪತ್ರಗಳ ರಿಜಿಸ್ಟ್ರೇಶನ್ ಹೆಸರಲ್ಲಿ ಆಗಸ್ಟ್ 12ರಿಂದ 14ರ ನಡುವೆ 52 ಸಾವಿರ ರೂಪಾಯಿ ಹಣವನ್ನು ಬೇರೆ ಬೇರೆ ಖಾತೆಗಳಿಗೆ ಹಾಕಿಸಿದ್ದಾರೆ. ಸುಬ್ರಹ್ಮಣ್ಯ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಆನ್ಲೈನಲ್ಲಿ ತರಹೇವಾರಿ ಕಾರಣಗಳನ್ನು ಮುಂದಿಟ್ಟು ಅಮಾಯಕರನ್ನು ಮೋಸಗೊಳಿಸುವ ಪ್ರಕರಣಗಳು ನಡೆಯುತ್ತಿದ್ದು, ಇದೊಂದು ಹೊಸ ಮಾದರಿಯ ಘಟನೆಯಾಗಿದೆ.
Sullia man cheats about 52 thousand for installing Reliance tower in Mangalore.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am