ಬ್ರೇಕಿಂಗ್ ನ್ಯೂಸ್
18-08-23 03:47 pm Mangalore Correspondent ಕ್ರೈಂ
ಬಂಟ್ವಾಳ, ಆಗಸ್ಟ್ 18: ಬಂಟ್ವಾಳದ ಕಳ್ಳಿಗೆಯ ಕೆಎಸ್ಸಾರ್ಟಿಸಿ ಡಿಪೋ ಬಳಿಯಿರುವ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮಿನಲ್ಲಿ
ಇಡಲಾಗಿದ್ದ ಕೋಟ್ಯಂತರ ಮೌಲ್ಯದ ಪಡಿತರ ಅಕ್ಕಿ ನಾಪತ್ತೆಯಾಗಿದ್ದು, ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೋಣಿ ಚೀಲದಲ್ಲಿ ತುಂಬಿಡಲಾಗಿದ್ದ ಸುಮಾರು 1.32 ಕೋಟಿ ರೂಪಾಯಿ ಮೌಲ್ಯದ 3892 ಕ್ವಿಂಟಾಲ್ ಅಕ್ಕಿ ಕಾಣೆಯಾಗಿದ್ದಾಗಿ ಪೊಲೀಸರಿಗೆ ದೂರು ನೀಡಲಾಗಿದೆ. ರೇಷನ್ ವಿತರಣೆಯಲ್ಲಿ ವಿಳಂಬ ಆಗಿರುವುದರಿಂದ ಸಂಶಯಗೊಂಡ ಜಿಲ್ಲಾ ಮಟ್ಟದ ಅಧಿಕಾರಿಗಳು ಗೋದಾಮಿನಲ್ಲಿ ತಪಾಸಣೆ ನಡೆಸಿದಾಗ ಅಕ್ಕಿ ಗೋಣಿ ಕಡಿಮೆಯಿರುವುದು ಕಂಡುಬಂದಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾ ಪಡಿತರ ಇಲಾಖೆಯ ವ್ಯವಸ್ಥಾಪಕ ಶರತ್ ಕುಮಾರ್, ಬಂಟ್ವಾಳದ ಗೋದಾಮಿನ ಮ್ಯಾನೇಜರ್ ವಿಜಯ್ ಎಂಬವರ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ.

ಈಗಾಗಲೇ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯಡಿ ತಲಾ ಹತ್ತು ಕೇಜಿಯಂತೆ ಅಕ್ಕಿ ಪೂರೈಸಲು ಅಕ್ಕಿ ದಾಸ್ತಾನಿಲ್ಲದೆ, ಅದರ ಬದಲು ತಲಾ 5 ಕೇಜಿಯಂತೆ ಹಣ ಕೊಡಲಾಗುತ್ತಿದೆ. ಆದರೆ, ಇಲ್ಲಿ ರಾಜ್ಯ ಸರಕಾರದಿಂದ ಪೂರೈಕೆಯಾಗಿರುವ ಪಡಿತರ ಅಕ್ಕಿಯೇ ಇಲ್ಲಿ ರೇಶನ್ ಅಂಗಡಿಗಳಿಗೆ ತಲುಪದೆ ಮಧ್ಯವರ್ತಿಗಳ ಪಾಲಾಗಿದೆಯೇ ಎನ್ನುವ ಸಂಶಯ ಉಂಟಾಗಿದೆ. ಗೋದಾಮು ವ್ಯವಸ್ಥಾಪಕನ ಕೈವಾಡ ಇದೆಯೇ, ಯಾರು ಇದರ ಹಿಂದೆ ಇದ್ದಾರೆ ಎನ್ನುವ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆ ಬಗ್ಗೆ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ.
Bantwal 3800 quintal rice worth 1.32 crores stolen from Gowdown at Bantwal in Mangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm