ಬ್ರೇಕಿಂಗ್ ನ್ಯೂಸ್
18-08-23 03:47 pm Mangalore Correspondent ಕ್ರೈಂ
ಬಂಟ್ವಾಳ, ಆಗಸ್ಟ್ 18: ಬಂಟ್ವಾಳದ ಕಳ್ಳಿಗೆಯ ಕೆಎಸ್ಸಾರ್ಟಿಸಿ ಡಿಪೋ ಬಳಿಯಿರುವ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮಿನಲ್ಲಿ
ಇಡಲಾಗಿದ್ದ ಕೋಟ್ಯಂತರ ಮೌಲ್ಯದ ಪಡಿತರ ಅಕ್ಕಿ ನಾಪತ್ತೆಯಾಗಿದ್ದು, ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೋಣಿ ಚೀಲದಲ್ಲಿ ತುಂಬಿಡಲಾಗಿದ್ದ ಸುಮಾರು 1.32 ಕೋಟಿ ರೂಪಾಯಿ ಮೌಲ್ಯದ 3892 ಕ್ವಿಂಟಾಲ್ ಅಕ್ಕಿ ಕಾಣೆಯಾಗಿದ್ದಾಗಿ ಪೊಲೀಸರಿಗೆ ದೂರು ನೀಡಲಾಗಿದೆ. ರೇಷನ್ ವಿತರಣೆಯಲ್ಲಿ ವಿಳಂಬ ಆಗಿರುವುದರಿಂದ ಸಂಶಯಗೊಂಡ ಜಿಲ್ಲಾ ಮಟ್ಟದ ಅಧಿಕಾರಿಗಳು ಗೋದಾಮಿನಲ್ಲಿ ತಪಾಸಣೆ ನಡೆಸಿದಾಗ ಅಕ್ಕಿ ಗೋಣಿ ಕಡಿಮೆಯಿರುವುದು ಕಂಡುಬಂದಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾ ಪಡಿತರ ಇಲಾಖೆಯ ವ್ಯವಸ್ಥಾಪಕ ಶರತ್ ಕುಮಾರ್, ಬಂಟ್ವಾಳದ ಗೋದಾಮಿನ ಮ್ಯಾನೇಜರ್ ವಿಜಯ್ ಎಂಬವರ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ.

ಈಗಾಗಲೇ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯಡಿ ತಲಾ ಹತ್ತು ಕೇಜಿಯಂತೆ ಅಕ್ಕಿ ಪೂರೈಸಲು ಅಕ್ಕಿ ದಾಸ್ತಾನಿಲ್ಲದೆ, ಅದರ ಬದಲು ತಲಾ 5 ಕೇಜಿಯಂತೆ ಹಣ ಕೊಡಲಾಗುತ್ತಿದೆ. ಆದರೆ, ಇಲ್ಲಿ ರಾಜ್ಯ ಸರಕಾರದಿಂದ ಪೂರೈಕೆಯಾಗಿರುವ ಪಡಿತರ ಅಕ್ಕಿಯೇ ಇಲ್ಲಿ ರೇಶನ್ ಅಂಗಡಿಗಳಿಗೆ ತಲುಪದೆ ಮಧ್ಯವರ್ತಿಗಳ ಪಾಲಾಗಿದೆಯೇ ಎನ್ನುವ ಸಂಶಯ ಉಂಟಾಗಿದೆ. ಗೋದಾಮು ವ್ಯವಸ್ಥಾಪಕನ ಕೈವಾಡ ಇದೆಯೇ, ಯಾರು ಇದರ ಹಿಂದೆ ಇದ್ದಾರೆ ಎನ್ನುವ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆ ಬಗ್ಗೆ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ.
Bantwal 3800 quintal rice worth 1.32 crores stolen from Gowdown at Bantwal in Mangalore.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm