ಬ್ರೇಕಿಂಗ್ ನ್ಯೂಸ್
18-08-23 03:47 pm Mangalore Correspondent ಕ್ರೈಂ
ಬಂಟ್ವಾಳ, ಆಗಸ್ಟ್ 18: ಬಂಟ್ವಾಳದ ಕಳ್ಳಿಗೆಯ ಕೆಎಸ್ಸಾರ್ಟಿಸಿ ಡಿಪೋ ಬಳಿಯಿರುವ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮಿನಲ್ಲಿ
ಇಡಲಾಗಿದ್ದ ಕೋಟ್ಯಂತರ ಮೌಲ್ಯದ ಪಡಿತರ ಅಕ್ಕಿ ನಾಪತ್ತೆಯಾಗಿದ್ದು, ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೋಣಿ ಚೀಲದಲ್ಲಿ ತುಂಬಿಡಲಾಗಿದ್ದ ಸುಮಾರು 1.32 ಕೋಟಿ ರೂಪಾಯಿ ಮೌಲ್ಯದ 3892 ಕ್ವಿಂಟಾಲ್ ಅಕ್ಕಿ ಕಾಣೆಯಾಗಿದ್ದಾಗಿ ಪೊಲೀಸರಿಗೆ ದೂರು ನೀಡಲಾಗಿದೆ. ರೇಷನ್ ವಿತರಣೆಯಲ್ಲಿ ವಿಳಂಬ ಆಗಿರುವುದರಿಂದ ಸಂಶಯಗೊಂಡ ಜಿಲ್ಲಾ ಮಟ್ಟದ ಅಧಿಕಾರಿಗಳು ಗೋದಾಮಿನಲ್ಲಿ ತಪಾಸಣೆ ನಡೆಸಿದಾಗ ಅಕ್ಕಿ ಗೋಣಿ ಕಡಿಮೆಯಿರುವುದು ಕಂಡುಬಂದಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾ ಪಡಿತರ ಇಲಾಖೆಯ ವ್ಯವಸ್ಥಾಪಕ ಶರತ್ ಕುಮಾರ್, ಬಂಟ್ವಾಳದ ಗೋದಾಮಿನ ಮ್ಯಾನೇಜರ್ ವಿಜಯ್ ಎಂಬವರ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ.

ಈಗಾಗಲೇ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯಡಿ ತಲಾ ಹತ್ತು ಕೇಜಿಯಂತೆ ಅಕ್ಕಿ ಪೂರೈಸಲು ಅಕ್ಕಿ ದಾಸ್ತಾನಿಲ್ಲದೆ, ಅದರ ಬದಲು ತಲಾ 5 ಕೇಜಿಯಂತೆ ಹಣ ಕೊಡಲಾಗುತ್ತಿದೆ. ಆದರೆ, ಇಲ್ಲಿ ರಾಜ್ಯ ಸರಕಾರದಿಂದ ಪೂರೈಕೆಯಾಗಿರುವ ಪಡಿತರ ಅಕ್ಕಿಯೇ ಇಲ್ಲಿ ರೇಶನ್ ಅಂಗಡಿಗಳಿಗೆ ತಲುಪದೆ ಮಧ್ಯವರ್ತಿಗಳ ಪಾಲಾಗಿದೆಯೇ ಎನ್ನುವ ಸಂಶಯ ಉಂಟಾಗಿದೆ. ಗೋದಾಮು ವ್ಯವಸ್ಥಾಪಕನ ಕೈವಾಡ ಇದೆಯೇ, ಯಾರು ಇದರ ಹಿಂದೆ ಇದ್ದಾರೆ ಎನ್ನುವ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆ ಬಗ್ಗೆ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ.
Bantwal 3800 quintal rice worth 1.32 crores stolen from Gowdown at Bantwal in Mangalore.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm