ಬ್ರೇಕಿಂಗ್ ನ್ಯೂಸ್
18-08-23 03:47 pm Mangalore Correspondent ಕ್ರೈಂ
ಬಂಟ್ವಾಳ, ಆಗಸ್ಟ್ 18: ಬಂಟ್ವಾಳದ ಕಳ್ಳಿಗೆಯ ಕೆಎಸ್ಸಾರ್ಟಿಸಿ ಡಿಪೋ ಬಳಿಯಿರುವ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮಿನಲ್ಲಿ
ಇಡಲಾಗಿದ್ದ ಕೋಟ್ಯಂತರ ಮೌಲ್ಯದ ಪಡಿತರ ಅಕ್ಕಿ ನಾಪತ್ತೆಯಾಗಿದ್ದು, ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೋಣಿ ಚೀಲದಲ್ಲಿ ತುಂಬಿಡಲಾಗಿದ್ದ ಸುಮಾರು 1.32 ಕೋಟಿ ರೂಪಾಯಿ ಮೌಲ್ಯದ 3892 ಕ್ವಿಂಟಾಲ್ ಅಕ್ಕಿ ಕಾಣೆಯಾಗಿದ್ದಾಗಿ ಪೊಲೀಸರಿಗೆ ದೂರು ನೀಡಲಾಗಿದೆ. ರೇಷನ್ ವಿತರಣೆಯಲ್ಲಿ ವಿಳಂಬ ಆಗಿರುವುದರಿಂದ ಸಂಶಯಗೊಂಡ ಜಿಲ್ಲಾ ಮಟ್ಟದ ಅಧಿಕಾರಿಗಳು ಗೋದಾಮಿನಲ್ಲಿ ತಪಾಸಣೆ ನಡೆಸಿದಾಗ ಅಕ್ಕಿ ಗೋಣಿ ಕಡಿಮೆಯಿರುವುದು ಕಂಡುಬಂದಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾ ಪಡಿತರ ಇಲಾಖೆಯ ವ್ಯವಸ್ಥಾಪಕ ಶರತ್ ಕುಮಾರ್, ಬಂಟ್ವಾಳದ ಗೋದಾಮಿನ ಮ್ಯಾನೇಜರ್ ವಿಜಯ್ ಎಂಬವರ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ.

ಈಗಾಗಲೇ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯಡಿ ತಲಾ ಹತ್ತು ಕೇಜಿಯಂತೆ ಅಕ್ಕಿ ಪೂರೈಸಲು ಅಕ್ಕಿ ದಾಸ್ತಾನಿಲ್ಲದೆ, ಅದರ ಬದಲು ತಲಾ 5 ಕೇಜಿಯಂತೆ ಹಣ ಕೊಡಲಾಗುತ್ತಿದೆ. ಆದರೆ, ಇಲ್ಲಿ ರಾಜ್ಯ ಸರಕಾರದಿಂದ ಪೂರೈಕೆಯಾಗಿರುವ ಪಡಿತರ ಅಕ್ಕಿಯೇ ಇಲ್ಲಿ ರೇಶನ್ ಅಂಗಡಿಗಳಿಗೆ ತಲುಪದೆ ಮಧ್ಯವರ್ತಿಗಳ ಪಾಲಾಗಿದೆಯೇ ಎನ್ನುವ ಸಂಶಯ ಉಂಟಾಗಿದೆ. ಗೋದಾಮು ವ್ಯವಸ್ಥಾಪಕನ ಕೈವಾಡ ಇದೆಯೇ, ಯಾರು ಇದರ ಹಿಂದೆ ಇದ್ದಾರೆ ಎನ್ನುವ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆ ಬಗ್ಗೆ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ.
Bantwal 3800 quintal rice worth 1.32 crores stolen from Gowdown at Bantwal in Mangalore.
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 10:54 pm
HK News Staffer
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
Controversial Missionary Mohan C. Lazarus’ Ud...
17-03-26 09:19 pm
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am