ಬ್ರೇಕಿಂಗ್ ನ್ಯೂಸ್
18-08-23 03:47 pm Mangalore Correspondent ಕ್ರೈಂ
ಬಂಟ್ವಾಳ, ಆಗಸ್ಟ್ 18: ಬಂಟ್ವಾಳದ ಕಳ್ಳಿಗೆಯ ಕೆಎಸ್ಸಾರ್ಟಿಸಿ ಡಿಪೋ ಬಳಿಯಿರುವ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮಿನಲ್ಲಿ
ಇಡಲಾಗಿದ್ದ ಕೋಟ್ಯಂತರ ಮೌಲ್ಯದ ಪಡಿತರ ಅಕ್ಕಿ ನಾಪತ್ತೆಯಾಗಿದ್ದು, ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೋಣಿ ಚೀಲದಲ್ಲಿ ತುಂಬಿಡಲಾಗಿದ್ದ ಸುಮಾರು 1.32 ಕೋಟಿ ರೂಪಾಯಿ ಮೌಲ್ಯದ 3892 ಕ್ವಿಂಟಾಲ್ ಅಕ್ಕಿ ಕಾಣೆಯಾಗಿದ್ದಾಗಿ ಪೊಲೀಸರಿಗೆ ದೂರು ನೀಡಲಾಗಿದೆ. ರೇಷನ್ ವಿತರಣೆಯಲ್ಲಿ ವಿಳಂಬ ಆಗಿರುವುದರಿಂದ ಸಂಶಯಗೊಂಡ ಜಿಲ್ಲಾ ಮಟ್ಟದ ಅಧಿಕಾರಿಗಳು ಗೋದಾಮಿನಲ್ಲಿ ತಪಾಸಣೆ ನಡೆಸಿದಾಗ ಅಕ್ಕಿ ಗೋಣಿ ಕಡಿಮೆಯಿರುವುದು ಕಂಡುಬಂದಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾ ಪಡಿತರ ಇಲಾಖೆಯ ವ್ಯವಸ್ಥಾಪಕ ಶರತ್ ಕುಮಾರ್, ಬಂಟ್ವಾಳದ ಗೋದಾಮಿನ ಮ್ಯಾನೇಜರ್ ವಿಜಯ್ ಎಂಬವರ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ.

ಈಗಾಗಲೇ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯಡಿ ತಲಾ ಹತ್ತು ಕೇಜಿಯಂತೆ ಅಕ್ಕಿ ಪೂರೈಸಲು ಅಕ್ಕಿ ದಾಸ್ತಾನಿಲ್ಲದೆ, ಅದರ ಬದಲು ತಲಾ 5 ಕೇಜಿಯಂತೆ ಹಣ ಕೊಡಲಾಗುತ್ತಿದೆ. ಆದರೆ, ಇಲ್ಲಿ ರಾಜ್ಯ ಸರಕಾರದಿಂದ ಪೂರೈಕೆಯಾಗಿರುವ ಪಡಿತರ ಅಕ್ಕಿಯೇ ಇಲ್ಲಿ ರೇಶನ್ ಅಂಗಡಿಗಳಿಗೆ ತಲುಪದೆ ಮಧ್ಯವರ್ತಿಗಳ ಪಾಲಾಗಿದೆಯೇ ಎನ್ನುವ ಸಂಶಯ ಉಂಟಾಗಿದೆ. ಗೋದಾಮು ವ್ಯವಸ್ಥಾಪಕನ ಕೈವಾಡ ಇದೆಯೇ, ಯಾರು ಇದರ ಹಿಂದೆ ಇದ್ದಾರೆ ಎನ್ನುವ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆ ಬಗ್ಗೆ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ.
Bantwal 3800 quintal rice worth 1.32 crores stolen from Gowdown at Bantwal in Mangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm