ಬ್ರೇಕಿಂಗ್ ನ್ಯೂಸ್
18-08-23 09:58 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 18: ಬೆಂಗಳೂರಿನಲ್ಲಿ ಕೆಲಸಕ್ಕಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಮೂಲದ ವ್ಯಕ್ತಿಯೊಬ್ಬರು ಪದೋನ್ನತಿ ಹೊಂದಿ ಸೌದಿ ಅರೇಬಿಯಾಕ್ಕೆ ತೆರಳಿದ್ದ ವೇಳೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಲಿ ಉದ್ಯೋಗದಲ್ಲಿರುವಾಗಲೇ ಹ್ಯಾಕರ್ ಗಳ ಕಾಟಕ್ಕೆ ಸಿಲುಕಿ ತಾನು ಮಾಡದ ತಪ್ಪಿಗೆ ಜೈಲು ಪಾಲಾಗಿದ್ದಾರೆ.
ಕಡಬ ತಾಲೂಕು ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್ (34) ಸೌದಿ ಅರೇಬಿಯಾದ ರಿಯಾದ್ ನಲ್ಲಿ ಜೈಲು ಶಿಕ್ಷೆಗೆ ಒಳಗಾದವರು. ಅಲ್ಪಾನರ್ ಸೆರಾಮಿಕ್ಸ್ ಎನ್ನುವ ಕಂಪನಿಯಲ್ಲಿ ಈ ಹಿಂದೆ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ ಚಂದ್ರಶೇಖರ್ 2022ರಲ್ಲಿ ಭಡ್ತಿ ಪಡೆದು ಸೌದಿಗೆ ತೆರಳಿ ಕೆಲಸ ಆರಂಭಿಸಿದ್ದರು. ಕಳೆದ ನವೆಂಬರ್ ತಿಂಗಳಲ್ಲಿ ರಿಯಾದ್ ನಲ್ಲಿ ಮೊಬೈಲ್ ಸಿಮ್ ಖರೀದಿಗೆಂದು ತೆರಳಿದ್ದರು. ಅರ್ಜಿ ತುಂಬಿಸುತ್ತಿದ್ದಾಗ ಎರಡು ಬಾರಿ ಹೆಬ್ಬೆಟ್ಟು ಸಹಿ ನೀಡಿದ್ದರು.
ವಾರದ ಬಳಿಕ ಅವರಿಗೆ ಅವರಿಗೆ ಅರೇಬಿಕ್ ಭಾಷೆಯಲ್ಲಿ ಹೊಸ ದೂರವಾಣಿ ಸಂಖ್ಯೆಗೆ ಸಂದೇಶ ಬಂದಿತ್ತು. ಎರಡು ದಿನಗಳ ಬಳಿಕ ಅಪರಿಚಿತ ದೂರವಾಣಿ ಕರೆಯೊಂದು ಬಂದಿದ್ದು, ಮೊಬೈಲ್ ಸಂಖ್ಯೆಗೆ ಸಂಬಂಧಿಸಿ ಮಾಹಿತಿ ಕೇಳಿ ಓಟಿಪಿ ನಂಬರ್ ಕೇಳಿದ್ದರು. ಒಂದು ವಾರ ಕಳೆಯುವಷ್ಟರಲ್ಲಿ ಅಲ್ಲಿನ ಪೊಲೀಸರು ಬಂದು ಇವರನ್ನು ಬಂಧಿಸಿದ್ದರು. ಪೊಲೀಸರ ಪ್ರಕಾರ, ಚಂದ್ರಶೇಖರ್ ಹೆಸರಲ್ಲಿ ನಕಲಿ ಬ್ಯಾಂಕ್ ಖಾತೆ ತೆರೆದಿದ್ದು, ಅದರಿಂದ ಬೇರೊಬ್ಬ ಮಹಿಳೆಯ ಖಾತೆಯಿಂದ 22 ಸಾವಿರ ರಿಯಾಲ್ ಹಣ ಜಮೆಯಾಗಿತ್ತು. ಯಾರೋ ಹ್ಯಾಕರ್ಸ್ ಇದನ್ನು ಚಂದ್ರಶೇಖರ್ ಗೆ ತಿಳಿಯದಂತೆ ಮಾಡಿದ್ದು, ಆ ಹಣ ಕೆಲವೇ ಹೊತ್ತಲ್ಲಿ ಬೇರೆ ದೇಶಕ್ಕೆ ರವಾನೆಯಾಗಿತ್ತು. ಈ ಬಗ್ಗೆ ಮಹಿಳೆ ಚಂದ್ರಶೇಖರ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಅಧಿಕಾರಿಗಳು ಇವರನ್ನು ಬಂಧಿಸಿದ್ದರು.
ಮದುವೆ ತಯಾರಿಯಲ್ಲಿದ್ದಾಗಲೇ ಬಂಧನ
ಚಂದ್ರಶೇಖರ್ ಅವರಿಗೆ ಊರಿನಲ್ಲಿ ಹೆಣ್ಣು ಗೊತ್ತುಪಡಿಸಿ 2023ರ ಜನವರಿಯಲ್ಲಿ ಮದುವೆ ನಿಶ್ಚಿತಾರ್ಥಕ್ಕೆ ದಿನ ನಿಗದಿ ಮಾಡಲಾಗಿತ್ತು. ಮದುವೆಯ ದಿನಾಂಕವನ್ನೂ ನಿರ್ಧರಿಸಲಾಗಿತ್ತು. ಮದುವೆ ಸಿದ್ಧತೆಯಲ್ಲಿದ್ದಾಗಲೇ ಚಂದ್ರಶೇಖರ್ ತಾನು ಮಾಡದ ತಪ್ಪಿನಿಂದಾಗಿ ಜೈಲು ಸೇರುವಂತಾಗಿದೆ. ಕಳೆದ ಎಂಟು ತಿಂಗಳಿನಿಂದ ಆತನ ಕುಟುಂಬ ಮಗನನ್ನು ಬಿಡಿಸಿ ತರಲು ಶ್ರಮಿಸುತ್ತಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮೂಲಕ ವಿದೇಶಾಂಗ ಇಲಾಖೆಯ ನೆರವನ್ನೂ ಯಾಚಿಸಿದೆ. ಅಲ್ಲದೆ, ಚಂದ್ರಶೇಖರ್ ಅವರನ್ನು ಜೈಲಿನಿಂದ ಹೊರತರಲು ಆತನ ಗೆಳೆಯರು ಸೇರಿ 10 ಲಕ್ಷ ರೂ. ಒಟ್ಟು ಸೇರಿಸಿ ಅಲ್ಲಿನ ವಕೀಲರಿಗೆ ನೀಡಿದ್ದಾರೆ. ಆದರೆ ಯಾವುದೂ ಪ್ರಯೋಜನವಾಗಿಲ್ಲ ಎಂದು ಚಂದ್ರಶೇಖರ್ ಅವರ ನಿಕಟವರ್ತಿ ಶ್ರೀಧರ್ ಗೌಡ ಕೊಕ್ಕಡ ಮತ್ತು ಎನ್ಇಸಿಎಫ್ ಕಾರ್ಯದರ್ಶಿ ಶಶಿಧರ್ ಶೆಟ್ಟಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ್ದಾರೆ.
Conned by hackers, Kadaba youth arrested in Riyadh prison, family urges for his release in Mangalore. A youth, native of Kadaba, who had gone to Saudi Arabia on employment was trapped by bank account hackers and is languishing presently in a prison in Riyadh. His family members have urged union government for the release of the innocent youth.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm