ಬ್ರೇಕಿಂಗ್ ನ್ಯೂಸ್
19-08-23 01:31 pm HK News Desk ಕ್ರೈಂ
ಕಾಸರಗೋಡು, ಆಗಸ್ಟ್ 19: ಬೆತ್ತಲೆ ವಿಡಿಯೋ ಕಾಲ್ಗಳನ್ನು ಮಾಡುವಂತೆ ಗಂಡ ಒತ್ತಾಯ ಮಾಡಿ ದೈಹಿಕ ಹಿಂಸೆ ನೀಡುತ್ತಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬಳು ದೂರು ದಾಖಲಿಸಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ನೀಲೇಶ್ವರಂನಲ್ಲಿ ನಡೆದಿದೆ.
ಸಂತ್ರಸ್ತ ಮಹಿಳೆಯ ವಯಸ್ಸು 20 ವರ್ಷ. ಆಕೆಯ ಪತಿ ಬಂಕಲಂ ಮೂಲದವರಾಗಿದ್ದು, ಪಾಲಾದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ದೂರಿನ ಪ್ರಕಾರ, ಆರೋಪಿ ಗಂಡ ಕೆಲವು ವ್ಯಕ್ತಿಗಳಿಂದ ಹಣ ಪಡೆದಿದ್ದು ಅದಕ್ಕೆ ಪ್ರತಿಯಾಗಿ ತನ್ನ ಪತ್ನಿಯನ್ನು ನಗ್ನವಾಗಿ ಕಾಣಿಸಿಕೊಳ್ಳಲು ಮತ್ತು ವಿಡಿಯೋ ಕರೆ ಮಾಡಲು ಒತ್ತಾಯಿಸಿದ್ದಾನೆ ಎಂದು ತಿಳಿದುಬಂದಿದೆ. ಅಲ್ಲದೆ, ಮಹಿಳೆಗೆ ಬೆದರಿಕೆ ಹಾಕಿ ಹಲ್ಲೆ ಮಾಡಿರುವ ಆರೋಪವೂ ಆತನ ಮೇಲಿದೆ.
ಇದೇ ಸಂದರ್ಭದಲ್ಲಿ ನೀಲೇಶ್ವರಂ ಪೊಲೀಸರು ವ್ಯಕ್ತಿಯ ವಿರುದ್ಧ ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ. ತನಿಖೆ ನಡೆಯುತ್ತಿದೆ.
ರಾಜ್ಕೋಟ್ನಲ್ಲಿ ಇದೇ ರೀತಿಯ ಘಟನೆ ; ಗಂಡ ಮತ್ತು ಮಾವನಿಂದಲ್ಲೇ ಕಿರುಕುಳ :
ಇದೇ ರೀತಿಯ ಘಟನೆ ಗುಜರಾತ್ನ ರಾಜ್ಕೋಟ್ನಲ್ಲಿ ಮೂರು ದಿನಗಳ ಹಿಂದೆ ಬೆಳಕಿಗೆ ಬಂದಿತು. ಪೋರ್ನ್ ವೆಬ್ಸೈಟ್ ಒಂದಕ್ಕೆ ವಿಡಿಯೋ ಚಿತ್ರೀಕರಿಸಲು ಲೈವ್ ಸೆಕ್ಸ್ ಮಾಡುವಂತೆ ಗಂಡ ಮತ್ತು ಮಾವ ಒತ್ತಾಯಿಸಿದರು ಎಂದು ಮಹಿಳೆಯೊಬ್ಬಳು ದೂರು ನೀಡಿದ್ದಾಳೆ. ಸಂತ್ರಸ್ತೆ ಮಹಿಳೆಯ ವಯಸ್ಸು 21 ವರ್ಷ. ಕಳೆದ ಎರಡು ವಾರಗಳಿಂದ 10 ಬಾರಿ ಒತ್ತಾಯ ಮಾಡಿದ್ದಾರೆ. ಅಲ್ಲದೆ, ಆಕೆಯ ಬೆತ್ತಲೆ ವಿಡಿಯೋವನ್ನು ರಹಸ್ಯವಾಗಿ ಸೆರೆಹಿಡಿದಿರುವುದಾಗಿ ಸಂತ್ರಸ್ತೆ ಆರೋಪ ಮಾಡಿದ್ದಾಳೆ.
ಮಾವ ನಗರದ ಹೋಟೆಲ್ ಒಂದರಲ್ಲಿ ಷೇರು ಹೊಂದಿದ್ದರು. ಆದರೆ, ಈಗ ಸ್ವಲ್ಪ ಷೇರು ಮಾತ್ರ ಹೊಂದಿದ್ದಾರೆ. ಈ ಕಾರಣಕ್ಕಾಗಿ ಇಬ್ಬರು ಅಶ್ಲೀಲ ವೆಬ್ಸೈಟ್ಗಳಿಂದ ಹಣ ಗಳಿಸಲು ಯೋಜಿಸಿದ್ದಾರೆ ಎಂದು ಸಂತ್ರಸ್ತ ತಿಳಿಸಿದ್ದಾಳೆ. ಸಂತ್ರಸ್ತೆ ಮತ್ತು ಆಕೆಯ ಗಂಡ ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾದರು. ಅವರಿಗೆ ಅವಳಿ ಮಕ್ಕಳಿದ್ದಾರೆ. ಇತ್ತೀಚೆಗೆ ಅಶ್ಲೀಲ ವಿಡಿಯೋ ಚಿತ್ರೀಕರಣಕ್ಕಾಗಿ ಕಿರುಕುಳ ನೀಡುತ್ತಿದ್ದಾರೆ. ಕ್ಯಾಮೆರಾದಲ್ಲಿ ಲೈವ್ ಸೆಕ್ಸ್ ಮಾಡುವುದನ್ನು ಕಲಿಸಲು ವಿದೇಶಿ ಮಹಿಳೆಯರನ್ನು ಹೋಟೆಲ್ ಕೋಣೆಗೆ ಮಾವ ಕರೆತಂದರು ಮತ್ತು ನನ್ನ ಮುಂದೆಯೇ ಅವರೊಂದಿಗೆ ಲೈಂಗಿಕ ಕ್ರಿಯೆ ನಡೆಸಿದರು. ಹೆಚ್ಚಾಗಿ ಲೈಂಗಿಕ ಆಟಿಕೆಗಳನ್ನು ಬಳಸಿದ್ದರಿಂದ ನನಗೆ ಸೋಂಕು ಸಹ ತಗುಲಿದೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
A woman on Friday lodged a complaint with the Nileswaram police against her husband for allegedly physically assaulting her and forcing her to do nude video calls. The complainant is a 20-year-old woman. Her husband is a Bankalam native, who has been living in a rented house in Pala.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
24-09-25 10:48 pm
Mangalore Correspondent
ಖಾಸಗಿ ಜಮೀನಲ್ಲಿ ಅಕ್ರಮ ಹೆದ್ದಾರಿ ನಿರ್ಮಿಸಿದ್ದ ಪಿಡ...
24-09-25 08:46 pm
Priyank Kharge, Dharmasthala SIT: ಅಕ್ರಮ ಎಷ್ಟೇ...
24-09-25 07:38 pm
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
ಚಿನ್ನಯ್ಯ ಮತ್ತೆ ಬೆಳ್ತಂಗಡಿ ಕೋರ್ಟಿಗೆ ಹಾಜರು, ದೂರು...
23-09-25 11:01 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am