ಬ್ರೇಕಿಂಗ್ ನ್ಯೂಸ್
19-08-23 09:43 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 19: ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಉಳಾಯಿಬೆಟ್ಟು ಎಂಬಲ್ಲಿ ಫಲ್ಗುಣಿ ನದಿಯಿಂದ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದು, ಜೆಸಿಬಿ ಸೇರಿದಂತೆ ಹತ್ತು ಟಿಪ್ಪರ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಶುಕ್ರವಾರ ಸಂಜೆ 7.30ರ ಸುಮಾರಿಗೆ ಎಸಿಪಿ ಧನ್ಯಾ ನಾಯಕ್ ನೇತೃತ್ವದಲ್ಲಿ ಕಂಕನಾಡಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದ್ದಾರೆ. ನದಿಯಿಂದಲೇ ನೇರವಾಗಿ ಮರಳನ್ನು ಎತ್ತಿ ಜೆಸಿಬಿ ಮತ್ತು ಡೋಜರ್ ಮೂಲಕ ಟಿಪ್ಪರ್ ಲಾರಿಗಳಿಗೆ ತುಂಬಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಸ್ಥಳದಲ್ಲಿದ್ದ ಕಾರ್ಮಿಕರು ಪರಾರಿಯಾಗಿದ್ದಾರೆ. ಒಂದು ಜೆಸಿಬಿ, ಒಂದು ಡೋಜರ್, ಮರಳು ತುಂಬಿದ್ದ ಎರಡು ಟಿಪ್ಪರ್, ಎಂಟು ಖಾಲಿ ಟಿಪ್ಪರ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಟಿಪ್ಪರ್, ಜೆಸಿಬಿ ಯಾರಿಗೆ ಸೇರಿದ್ದು, ಯಾರ ಒಡೆತನದಲ್ಲಿ ಮರಳುಗಾರಿಕೆ ನಡೆಸುತ್ತಿದ್ದರು ಎನ್ನುವ ಬಗ್ಗೆ ತಿಳಿಯಲು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಒಟ್ಟು ಸೊತ್ತುಗಳ ಮೌಲ್ಯ 1.25 ಕೋಟಿ ಆಗಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ. ಮರಳು ಮತ್ತು ವಾಹನಗಳನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವಶಕ್ಕೆ ಒಪ್ಪಿಸಲಾಗಿದೆ. ಅಲ್ಲದೆ, ಇಲ್ಲಿ ಯಾರು ಮರಳುಗಾರಿಕೆ ನಡೆಸುತ್ತಿದ್ದರು, ವಾಹನಗಳು ಯಾರಿಗೆ ಸೇರಿದ್ದು ಅನ್ನುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ಪೊಲೀಸ್ ಅಧಿಕಾರಿಗಳಿಗೆ ನೇರವಾಗಿ ಮಾಹಿತಿ ನೀಡುವಂತೆ ಕೇಳಿಕೊಂಡಿದ್ದಾರೆ. ಉಳಾಯಿಬೆಟ್ಟು ಪರಿಸರದಲ್ಲಿ ಹಿಂದಿನಿಂದಲೂ ಮರಳುಗಾರಿಕೆ ನಡೆಯುತ್ತಿದ್ದು, ಈ ಬಗ್ಗೆ ಮಾಹಿತಿ ಇದ್ದರೂ ಪೊಲೀಸರು ದಾಳಿ ನಡೆಸಿದ್ದಿಲ್ಲ.
Ulaibettu police raid on illegal mining, JCB trucks and machines seized in Mangalore.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 01:29 pm
HK News Desk
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
18-06-25 10:24 am
Mangalore Correspondent
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm