ಬ್ರೇಕಿಂಗ್ ನ್ಯೂಸ್
19-08-23 09:43 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 19: ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಉಳಾಯಿಬೆಟ್ಟು ಎಂಬಲ್ಲಿ ಫಲ್ಗುಣಿ ನದಿಯಿಂದ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದು, ಜೆಸಿಬಿ ಸೇರಿದಂತೆ ಹತ್ತು ಟಿಪ್ಪರ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಶುಕ್ರವಾರ ಸಂಜೆ 7.30ರ ಸುಮಾರಿಗೆ ಎಸಿಪಿ ಧನ್ಯಾ ನಾಯಕ್ ನೇತೃತ್ವದಲ್ಲಿ ಕಂಕನಾಡಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದ್ದಾರೆ. ನದಿಯಿಂದಲೇ ನೇರವಾಗಿ ಮರಳನ್ನು ಎತ್ತಿ ಜೆಸಿಬಿ ಮತ್ತು ಡೋಜರ್ ಮೂಲಕ ಟಿಪ್ಪರ್ ಲಾರಿಗಳಿಗೆ ತುಂಬಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಸ್ಥಳದಲ್ಲಿದ್ದ ಕಾರ್ಮಿಕರು ಪರಾರಿಯಾಗಿದ್ದಾರೆ. ಒಂದು ಜೆಸಿಬಿ, ಒಂದು ಡೋಜರ್, ಮರಳು ತುಂಬಿದ್ದ ಎರಡು ಟಿಪ್ಪರ್, ಎಂಟು ಖಾಲಿ ಟಿಪ್ಪರ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.



ಟಿಪ್ಪರ್, ಜೆಸಿಬಿ ಯಾರಿಗೆ ಸೇರಿದ್ದು, ಯಾರ ಒಡೆತನದಲ್ಲಿ ಮರಳುಗಾರಿಕೆ ನಡೆಸುತ್ತಿದ್ದರು ಎನ್ನುವ ಬಗ್ಗೆ ತಿಳಿಯಲು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಒಟ್ಟು ಸೊತ್ತುಗಳ ಮೌಲ್ಯ 1.25 ಕೋಟಿ ಆಗಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ. ಮರಳು ಮತ್ತು ವಾಹನಗಳನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವಶಕ್ಕೆ ಒಪ್ಪಿಸಲಾಗಿದೆ. ಅಲ್ಲದೆ, ಇಲ್ಲಿ ಯಾರು ಮರಳುಗಾರಿಕೆ ನಡೆಸುತ್ತಿದ್ದರು, ವಾಹನಗಳು ಯಾರಿಗೆ ಸೇರಿದ್ದು ಅನ್ನುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ಪೊಲೀಸ್ ಅಧಿಕಾರಿಗಳಿಗೆ ನೇರವಾಗಿ ಮಾಹಿತಿ ನೀಡುವಂತೆ ಕೇಳಿಕೊಂಡಿದ್ದಾರೆ. ಉಳಾಯಿಬೆಟ್ಟು ಪರಿಸರದಲ್ಲಿ ಹಿಂದಿನಿಂದಲೂ ಮರಳುಗಾರಿಕೆ ನಡೆಯುತ್ತಿದ್ದು, ಈ ಬಗ್ಗೆ ಮಾಹಿತಿ ಇದ್ದರೂ ಪೊಲೀಸರು ದಾಳಿ ನಡೆಸಿದ್ದಿಲ್ಲ.
Ulaibettu police raid on illegal mining, JCB trucks and machines seized in Mangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm