ಬ್ರೇಕಿಂಗ್ ನ್ಯೂಸ್
19-08-23 11:10 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 20 : ಸಿಕ್ಕಿಂ ಮೂಲದ 30 ವರ್ಷದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳ ಗುಂಪು ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ನಗರದ ಇಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ಬುಧವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ದಿನೇಶ್ ಸುಬ್ಬ ಹಲ್ಲೆಗೊಳಗಾದ ವ್ಯಕ್ತಿ. ಪಶ್ಚಿಮ ಸಿಕ್ಕಿಂ ಮೂಲದವರಾಗಿದ್ದು ಇಲೆಕ್ಟ್ರಾನಿಕ್ಸ್ ಸಿಟಿ 1ನೇ ಹಂತದಲ್ಲಿ ಪತ್ನಿ ಹಾಗೂ ಮಗುವಿನೊಂದಿಗೆ ವಾಸವಿದ್ದಾರೆ. ನಗರದ ಹೋಟೆಲ್ನಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ವಿವಾಹ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಸಹೋದರ ಹಾಗೂ ಸ್ನೇಹತರೊಂದಿಗೆ ಪಾರ್ಟಿ ಮಾಡಿ ಬುಧವಾರ ಬೆಳಗಿನ ಜಾವ 3-4 ಗಂಟೆ ಸುಮಾರಿಗೆ ಮನೆಗೆ ವಾಪಸ್ಸಾಗುತ್ತಿದ್ದರು.
ಇವರು ದೊಡ್ಡತೊಗೂರಿನ ಪಿಸಿಆರ್ ಗಾರ್ಡನ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಸ್ಥಳದಲ್ಲಿದ್ದ ದುಷ್ಕರ್ಮಿಗಳ ಗುಂಪೊಂದು ದಿನೇಶ್ ಅವರನ್ನು ನೋಡಿ, ಚೈನೀಸ್, ಚೈನೀಸ್ ಎಂದು ಕರೆದು ಅಡ್ಡಗಟ್ಟಿದ್ದಾರೆ. ಈ ವೇಳೆ ನಾನು ಸಿಕ್ಕಿಂ ಮೂಲದವನು, ಭಾರತೀಯ ಎಂದು ದಿನೇಶ್ ಹೇಳಿದರೂ ಕೇಳದೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಬಳಿಕ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಸ್ಥಳೀಯ ಕಟ್ಟಡದ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗಂಭೀರ ಗಾಯಗೊಂಡ ದಿನೇಶ್ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದು, ಮುಖ ಹಾಗೂ ತಲೆಗೆ 9 ಹೊಲಿಗೆಗಳನ್ನು ಹಾಕಲಾಗಿದೆ.
ಮನೆಯಿಂದ 100 ಮೀಟರ್ ದೂರದಲ್ಲಿ ಘಟನೆ ನಡೆದಿದೆ. ಮೂವರು ದುಷ್ಕರ್ಮಿಗಳು ಚೈನೀಸ್ ಎಂದು ಕರೆದು, ಸಹೋದರನ ಮೇಲೆ ದಾಳಿ ನಡೆಸಿದ್ದಾರೆ. ಇದೊಂದು ಜನಾಂಗೀಯ ದಾಳಿಯಾಗಿದೆ. ಬೆಡ್ ರೆಸ್ಟ್ ನಲ್ಲಿರುವಂತೆ ಸಹೋದರನಿಗೆ ವೈದ್ಯರು ಸಲಹೆ ನೀಡಿದ್ದಾರೆಂದು ನಗರದಲ್ಲಿ 2009ರಿಂದಲೂ ವಾಸವಿರುವ ದಿನೇಶ್ ಅವರ ಸಹೋದರ ದೀಪಕ್ ದೊರ್ಜಿ ಹೇಳಿದ್ದಾರೆ.
In what appears to be a racially motivated attack, a 30-year-old man from Sikkim was beaten up badly by three miscreants at Electronics City on Wednesday. The victim has been identified as K Dinesh Subba, a native of West Sikkim and a resident of Electronics City, Phase I. He works as a waiter at a hotel in Neeladri Nagar. He was discharged from a hospital with nine stitches on his head and face.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am