ಬ್ರೇಕಿಂಗ್ ನ್ಯೂಸ್
21-08-23 02:06 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 21: ಸುರತ್ಕಲ್ ಬಳಿಯ ಇಡ್ಯಾ ಎಂಬಲ್ಲಿ ಜೆಸಿಬಿ ಮೂಲಕ ಎಟಿಎಂ ಒಡೆದು ಹಣ ದೋಚುವ ಯತ್ನ ನಡೆದಿತ್ತು. ಪ್ರಕರಣದ ಬೆನ್ನತ್ತಿದ ಸುರತ್ಕಲ್ ಪೊಲೀಸರು ಶಿವಮೊಗ್ಗ ಮೂಲದ ನಾಲ್ವರನ್ನು ಬಂಧಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಬೇಗೂರು ಗ್ರಾಮದ ದೇವರಾಜ್ (24), ಭರತ್ (20), ನಾಗರಾಜ ನಾಯ್ಕ (21), ಕೃತ್ಯಕ್ಕೆ ಧನಸಹಾಯ ಮಾಡಿದ್ದ ಧನರಾಜ್ ನಾಯ್ಕ (26) ಬಂಧಿತರು. ಇವರಿಂದ ಹೀರೊ ಹೊಂಡಾ ಸ್ಪ್ಲೆಂಡರ್ ಬೈಕ್ ಮತ್ತು ಎರಡು ಮೊಬೈಲ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.



ಆರೋಪಿಗಳು ಈ ಹಿಂದೆ 2023ರ ಜುಲೈ 26ರಂದು ಮಧ್ಯರಾತ್ರಿ ಶಿವಮೊಗ್ಗ ಜಿಲ್ಲೆಯ ವಿನೋಬ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಿವ ದೇವಸ್ಥಾನದ ಬಳಿಯಿರುವ ಏಕ್ಸಿಸ್ ಬ್ಯಾಂಕ್ ಎಟಿಎಂ ಕೇಂದ್ರವನ್ನು ಜೆಸಿಬಿ ಮೂಲಕ ಒಡೆಯುವ ಪ್ರಯತ್ನ ಮಾಡಿದ್ದರು. ಈ ಕೃತ್ಯವನ್ನು ತಾವೇ ಮಾಡಿದ್ದಾಗಿ ಆರೋಪಿಗಳು ಒಪ್ಪಿದ್ದಾರೆ. ಇದಲ್ಲದೆ, ಆಗಸ್ಟ್ 4ರಂದು ರಾತ್ರಿ ಪಡುಬಿದ್ರೆ ಠಾಣೆ ವ್ಯಾಪ್ತಿಯಲ್ಲಿ ನಿಲ್ಲಿಸಿದ್ದ ಜೆಸಿಬಿ ಯಂತ್ರವನ್ನು ಕಳವುಗೈದಿದ್ದು ಅದೇ ಜೆಸಿಬಿ ಮೂಲಕ ಸುರತ್ಕಲ್ ವರೆಗೆ ಚಲಾಯಿಸಿಕೊಂಡು ಬಂದು ಇಡ್ಯಾ ಗ್ರಾಮದ ವಿದ್ಯಾದಾಯಿನಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಬಳಿಯ ರಾಜಶ್ರೀ ಕಟ್ಟಡದಲ್ಲಿರುವ ಸೌತ್ ಇಂಡಿಯನ್ ಬ್ಯಾಂಕಿನ ಎಟಿಎಂ ಮೆಷಿನನ್ನು ಒಡೆಯುವ ಯತ್ನ ಮಾಡಿದ್ದರು. ಅದೇ ದಿನ ನಸುಕಿನ 2ರಿಂದ 2.30ರ ನಡುವೆ ಘಟನೆ ನಡೆದಿದ್ದು ಎಟಿಎಂ ಕೇಂದ್ರದಲ್ಲಿ ಸೈರನ್ ಆಗಿದ್ದರಿಂದ ಅರ್ಧಕ್ಕೆ ಬಿಟ್ಟು ಹೋಗಿದ್ದರು.


ಇದೇ ವೇಳೆ, ಸಿಸಿಟಿವಿ ವಿಭಾಗದಿಂದ ಬಂದ ಮಾಹಿತಿಯಂತೆ ಸ್ಥಳಕ್ಕೆ ಬ್ಯಾಂಕ್ ಶಾಖೆಯ ಮ್ಯಾನೇಜರ್ ರೋಹಿತ್ ರಾತ್ರಿಯೇ ಆಗಮಿಸಿದ್ದರು. ಅಷ್ಟರಲ್ಲಿ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಮರುದಿನ ಬೈಕಂಪಾಡಿ ಬಳಿಯ ಜೋಕಟ್ಟೆಯಲ್ಲಿ ಜೆಸಿಬಿ ಪತ್ತೆಯಾಗಿತ್ತು. ಪಡುಬಿದ್ರಿಯಲ್ಲಿ ಕಳವು ಮಾಡಿದ್ದ ಜೆಸಿಬಿ ಎಂದು ಪತ್ತೆಹಚ್ಚಲಾಗಿತ್ತು. ಆರೋಪಿಗಳ ಪತ್ತೆಗೆ ಸುರತ್ಕಲ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು.
Mangalore Surathkal South Indian ATM Robbery, four from Shivamogga arrested by Mangalore Police. The four had attempted robbery of ATM using JCB machine at Surathkal.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm