ಬ್ರೇಕಿಂಗ್ ನ್ಯೂಸ್
07-11-20 11:45 am Mangalore Correspondent ಕ್ರೈಂ
ಉಳ್ಳಾಲ, ನವೆಂಬರ್ 07: ಇಲ್ಲಿನ ಬಗಂಬಿಲ ರಸ್ತೆಯಲ್ಲಿ ಯುವತಿಯ ಸರ ಕಳವು ನಡೆಸಿದ ಆರೋಪಿಯನ್ನು ಮೂರೇ ಗಂಟೆಗಳಲ್ಲಿ ಎಸಿಪಿ ನೇತೃತ್ವದ ಉಳ್ಳಾಲ ಹಾಗೂ ಕೊಣಾಜೆ ಪೊಲೀಸರ ತಂಡ ದೇರಳಕಟ್ಟೆಯಲ್ಲಿ ಬಂಧಿಸಿದ್ದಾರೆ.
ಕೇರಳದ ಕಣ್ಣೂರು ಮೂಲದ ಸುಲ್ತಾನ್ (28) ಬಂಧಿತ ಆರೋಪಿ. ದೇರಳಕಟ್ಟೆಯಲ್ಲಿರುವ ಹೊಟೇಲೊಂದರಲ್ಲಿ ಕೆಲಸಕ್ಕಿದ್ದ ಈತ ಕಳವು ಕೃತ್ಯದಲ್ಲಿ ಭಾಗಿಯಾಗಿದ್ದಾನೆ. ಬಗಂಬಿಲ ಎಂಬಲ್ಲಿ ನಿನ್ನೆ ಸಂಜೆ ಕೆಲಸ ಮುಗಿಸಿ ಮನೆ ಕಡೆಗೆ ತೆರಳುತ್ತಿದ್ದ ನಿಶಾ ಎಂಬವರ ಕುತ್ತಿಗೆಯಿಂದ ಒಂದು ಪವನ್ ಬೆಲೆಬಾಳುವ ಚಿನ್ನದ ಸರವನ್ನು ಬುಲೆಟ್ ಬೈಕಿನಲ್ಲಿ ಬಂದಿದ್ದ ಆರೋಪಿ ಸುಲ್ತಾನ್ ಕಳವು ನಡೆಸಿದ್ದ. ಈತನ ಕಳವು ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಉಳ್ಳಾಲ ಪೊಲೀಸರು ಅಲ್ಲಲ್ಲಿ ಬಂದೋಬಸ್ತ್ ನಡೆಸಿ ತಪಾಸಣೆ ಆರಂಭಿಸಿದ್ದರು. ಕೊಣಾಜೆ ಠಾಣಾ ಕ್ರೈಂ ತಂಡದ ಸಹಕಾರವನ್ನು ಪಡೆದು ತಪಾಸಣೆ ಆರಂಭಿಸಿದಾಗ ಸಿಸಿಟಿವಿಯಲ್ಲಿ ಸೆರೆಸಿಕ್ಕ ಬುಲೆಟ್ ಮತ್ತು ಆರೋಪಿಯ ಟೀಶಟ್೯ ಆಧಾರದಲ್ಲಿ, ಆರೋಪಿ ಬಾರ್ ಒಳಗಡೆ ಪ್ರವೇಶಿಸುತ್ತಿದ್ದಂತೆ ಸೆರೆ ಹಿಡಿದು ಬಂಧಿಸಿದ್ದಾರೆ.
ಯುವತಿ ಠಾಣೆಯಲ್ಲಿ ದೂರು ದಾಖಲಿಸುತ್ತಿದ್ದ ಸಂದರ್ಭದಲ್ಲೇ ಆರೋಪಿಯನ್ನು ಸೆರೆ ಹಿಡಿದ ಪೊಲೀಸರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.
ಕಾರ್ಯಾಚರಣೆಯಲ್ಲಿ ಎಸಿಪಿ ರಂಜಿತ್ ನೇತೃತ್ವದಲ್ಲಿ ಉಳ್ಳಾಲ ಠಾಣಾಧಿಕಾರಿ ಸಂದೀಪ್, ಪಿಎಸ್ ಐ ಗಳಾದ ಶಿವಕುಮಾರ್, ಪ್ರದೀಪ್ ಹಾಗೂ ಕ್ರೈಂ ತಂಡ ಮತ್ತು ಕೊಣಾಜೆ ಠಾಣೆಯ ಪಿಎಸ್ ಐ ಶರಣಪ್ಪ ಭಂಡಾರಿ ನೇತೃತ್ವದ ಕ್ರೈಂ ತಂಡ ಭಾಗವಹಿಸಿತ್ತು.
ಇದನ್ನೂ ಓದಿ: ಕುಂಪಲ ; ಬುಲೆಟ್ ನಲ್ಲಿ ಬಂದ ಯುವಕನಿಂದ ಯುವತಿಯ ಚಿನ್ನದ ಸರಗಳ್ಳತನ !
The Ullal and Konje police have succeeded in arresting a chain snatcher in just three hours of him committing crime at Kumpala. The arrested has been identified as Sulthan (28) from Kannur.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm