ಬ್ರೇಕಿಂಗ್ ನ್ಯೂಸ್
22-08-23 05:45 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 22: ಕಾವೂರು ಠಾಣೆ ವ್ಯಾಪ್ತಿಯ ಶಾಂತಿನಗರದಲ್ಲಿ ವ್ಯಕ್ತಿಯೊಬ್ಬನ ಮೇಲೆ ತಲವಾರು ದಾಳಿ ನಡೆಸಲು ಗುಂಪೊಂದು ಯತ್ನಿಸಿದ್ದು, ಘಟನೆ ಸಂಬಂಧಿಸಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಪಂಜಿಮೊಗರು ಉರುಂದಾಡಿ ಗುಡ್ಡೆಯ ನಿವಾಸಿ ಚರಣ್ ರಾಜ್ (23), ಹೊಸಬೆಟ್ಟು ಕುಳಾಯಿ ನಿವಾಸಿ ಸುಮಂತ್ ಬರ್ಮನ್ (24), ಕೋಡಿಕಲ್ ನಿವಾಸಿ ಅವಿನಾಶ್ (24) ಬಂಧಿತರು. ಇವರು ಆಗಸ್ಟ್ 20ರಂದು ರಾತ್ರಿ ಶಾಂತಿನಗರದ ಎಂವಿ ಶೆಟ್ಟಿ ಕಾಲೇಜು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುಹೇಬ್ ಎಂಬಾತನ ಮೇಲೆ ತಲವಾರು ಬೀಸಲು ಯತ್ನಿಸಿದ್ದರು. ಸುಹೇಬ್ ಒಂದು ವರ್ಷದ ಹಿಂದೆ ಕುಳೂರಿನ ನಾಗಬನಕ್ಕೆ ಹಾನಿ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿದ್ದ.

ಸುಹೇಬ್ ಬೇರೊಂದು ತಂಡದಲ್ಲಿ ಗುರುತಿಸಿಕೊಂಡಿದ್ದು, ಈತ ಒಬ್ಬಂಟಿ ಸಿಕ್ಕರೆ ಹೊಡೆಯಬೇಕೆಂದು ಚರಣ್ ಮತ್ತಿತರರು ಹೊಂಚು ಹಾಕಿದ್ದರು. ಮೊನ್ನೆ ರಾತ್ರಿ ಸಿಕ್ಕಿದಾಗ ಹೊಡೆಯಲು ಯತ್ನಿಸಿದ್ದು ಸುಹೇಬ್ ಪರಾರಿಯಾಗಿದ್ದಾನೆ. ಎರಡೂ ತಂಡ ಗಾಂಜಾ ಪಾರ್ಟಿಗಳಾಗಿದ್ದು, ಗಾಂಜಾ ನಶೆಯಲ್ಲೇ ಕೃತ್ಯ ಎಸಗಿದ್ದಾರೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಅನ್ಯಕೋಮಿನ ವ್ಯಕ್ತಿಯೆಂದು ಹಲ್ಲೆಗೆ ಯತ್ನ ನಡೆದಿದ್ದಲ್ಲ. ಗಾಂಜಾ ನಶೆ ಮತ್ತು ವೈಯಕ್ತಿಕ ದ್ವೇಷದಲ್ಲಿ ಕೃತ್ಯ ಎಸಗಿದ್ದಾರೆ.
ಆರೋಪಿ ಚರಣ್ ರಾಜ್ ವಿರುದ್ಧ ಈ ಹಿಂದೆ ಉರ್ವಾ, ಪಣಂಬೂರು, ಕಾವೂರು ಠಾಣೆಯಲ್ಲಿ ಐದು ಪ್ರಕರಣ ದಾಖಲಾಗಿರುತ್ತದೆ. ಸುಮನ್ ನಾಲ್ಕು ಪ್ರಕರಣ, ಅವಿನಾಶ್ ವಿರುದ್ಧ ಐದು ಪ್ರಕರಣ ದಾಖಲಾಗಿದೆ. ತಲವಾರು ಸಹಿತ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Three arrested for attacking man using swords in Ganja effect at Kavoor in Mangalore. The arrested accused are identified as Charan Raj alias Charan (23), a resident of Urundadigudde, Mangaluru, Sumant Burman (24) from Hosabettu, Suratkal and Avinash (24), a resident of Kodikal Sunkadakatte Kalbavai Road.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm