ಬ್ರೇಕಿಂಗ್ ನ್ಯೂಸ್
22-08-23 05:45 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 22: ಕಾವೂರು ಠಾಣೆ ವ್ಯಾಪ್ತಿಯ ಶಾಂತಿನಗರದಲ್ಲಿ ವ್ಯಕ್ತಿಯೊಬ್ಬನ ಮೇಲೆ ತಲವಾರು ದಾಳಿ ನಡೆಸಲು ಗುಂಪೊಂದು ಯತ್ನಿಸಿದ್ದು, ಘಟನೆ ಸಂಬಂಧಿಸಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಪಂಜಿಮೊಗರು ಉರುಂದಾಡಿ ಗುಡ್ಡೆಯ ನಿವಾಸಿ ಚರಣ್ ರಾಜ್ (23), ಹೊಸಬೆಟ್ಟು ಕುಳಾಯಿ ನಿವಾಸಿ ಸುಮಂತ್ ಬರ್ಮನ್ (24), ಕೋಡಿಕಲ್ ನಿವಾಸಿ ಅವಿನಾಶ್ (24) ಬಂಧಿತರು. ಇವರು ಆಗಸ್ಟ್ 20ರಂದು ರಾತ್ರಿ ಶಾಂತಿನಗರದ ಎಂವಿ ಶೆಟ್ಟಿ ಕಾಲೇಜು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುಹೇಬ್ ಎಂಬಾತನ ಮೇಲೆ ತಲವಾರು ಬೀಸಲು ಯತ್ನಿಸಿದ್ದರು. ಸುಹೇಬ್ ಒಂದು ವರ್ಷದ ಹಿಂದೆ ಕುಳೂರಿನ ನಾಗಬನಕ್ಕೆ ಹಾನಿ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿದ್ದ.

ಸುಹೇಬ್ ಬೇರೊಂದು ತಂಡದಲ್ಲಿ ಗುರುತಿಸಿಕೊಂಡಿದ್ದು, ಈತ ಒಬ್ಬಂಟಿ ಸಿಕ್ಕರೆ ಹೊಡೆಯಬೇಕೆಂದು ಚರಣ್ ಮತ್ತಿತರರು ಹೊಂಚು ಹಾಕಿದ್ದರು. ಮೊನ್ನೆ ರಾತ್ರಿ ಸಿಕ್ಕಿದಾಗ ಹೊಡೆಯಲು ಯತ್ನಿಸಿದ್ದು ಸುಹೇಬ್ ಪರಾರಿಯಾಗಿದ್ದಾನೆ. ಎರಡೂ ತಂಡ ಗಾಂಜಾ ಪಾರ್ಟಿಗಳಾಗಿದ್ದು, ಗಾಂಜಾ ನಶೆಯಲ್ಲೇ ಕೃತ್ಯ ಎಸಗಿದ್ದಾರೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಅನ್ಯಕೋಮಿನ ವ್ಯಕ್ತಿಯೆಂದು ಹಲ್ಲೆಗೆ ಯತ್ನ ನಡೆದಿದ್ದಲ್ಲ. ಗಾಂಜಾ ನಶೆ ಮತ್ತು ವೈಯಕ್ತಿಕ ದ್ವೇಷದಲ್ಲಿ ಕೃತ್ಯ ಎಸಗಿದ್ದಾರೆ.
ಆರೋಪಿ ಚರಣ್ ರಾಜ್ ವಿರುದ್ಧ ಈ ಹಿಂದೆ ಉರ್ವಾ, ಪಣಂಬೂರು, ಕಾವೂರು ಠಾಣೆಯಲ್ಲಿ ಐದು ಪ್ರಕರಣ ದಾಖಲಾಗಿರುತ್ತದೆ. ಸುಮನ್ ನಾಲ್ಕು ಪ್ರಕರಣ, ಅವಿನಾಶ್ ವಿರುದ್ಧ ಐದು ಪ್ರಕರಣ ದಾಖಲಾಗಿದೆ. ತಲವಾರು ಸಹಿತ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Three arrested for attacking man using swords in Ganja effect at Kavoor in Mangalore. The arrested accused are identified as Charan Raj alias Charan (23), a resident of Urundadigudde, Mangaluru, Sumant Burman (24) from Hosabettu, Suratkal and Avinash (24), a resident of Kodikal Sunkadakatte Kalbavai Road.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm