ಬ್ರೇಕಿಂಗ್ ನ್ಯೂಸ್
22-08-23 05:45 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 22: ಕಾವೂರು ಠಾಣೆ ವ್ಯಾಪ್ತಿಯ ಶಾಂತಿನಗರದಲ್ಲಿ ವ್ಯಕ್ತಿಯೊಬ್ಬನ ಮೇಲೆ ತಲವಾರು ದಾಳಿ ನಡೆಸಲು ಗುಂಪೊಂದು ಯತ್ನಿಸಿದ್ದು, ಘಟನೆ ಸಂಬಂಧಿಸಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಪಂಜಿಮೊಗರು ಉರುಂದಾಡಿ ಗುಡ್ಡೆಯ ನಿವಾಸಿ ಚರಣ್ ರಾಜ್ (23), ಹೊಸಬೆಟ್ಟು ಕುಳಾಯಿ ನಿವಾಸಿ ಸುಮಂತ್ ಬರ್ಮನ್ (24), ಕೋಡಿಕಲ್ ನಿವಾಸಿ ಅವಿನಾಶ್ (24) ಬಂಧಿತರು. ಇವರು ಆಗಸ್ಟ್ 20ರಂದು ರಾತ್ರಿ ಶಾಂತಿನಗರದ ಎಂವಿ ಶೆಟ್ಟಿ ಕಾಲೇಜು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುಹೇಬ್ ಎಂಬಾತನ ಮೇಲೆ ತಲವಾರು ಬೀಸಲು ಯತ್ನಿಸಿದ್ದರು. ಸುಹೇಬ್ ಒಂದು ವರ್ಷದ ಹಿಂದೆ ಕುಳೂರಿನ ನಾಗಬನಕ್ಕೆ ಹಾನಿ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿದ್ದ.
ಸುಹೇಬ್ ಬೇರೊಂದು ತಂಡದಲ್ಲಿ ಗುರುತಿಸಿಕೊಂಡಿದ್ದು, ಈತ ಒಬ್ಬಂಟಿ ಸಿಕ್ಕರೆ ಹೊಡೆಯಬೇಕೆಂದು ಚರಣ್ ಮತ್ತಿತರರು ಹೊಂಚು ಹಾಕಿದ್ದರು. ಮೊನ್ನೆ ರಾತ್ರಿ ಸಿಕ್ಕಿದಾಗ ಹೊಡೆಯಲು ಯತ್ನಿಸಿದ್ದು ಸುಹೇಬ್ ಪರಾರಿಯಾಗಿದ್ದಾನೆ. ಎರಡೂ ತಂಡ ಗಾಂಜಾ ಪಾರ್ಟಿಗಳಾಗಿದ್ದು, ಗಾಂಜಾ ನಶೆಯಲ್ಲೇ ಕೃತ್ಯ ಎಸಗಿದ್ದಾರೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಅನ್ಯಕೋಮಿನ ವ್ಯಕ್ತಿಯೆಂದು ಹಲ್ಲೆಗೆ ಯತ್ನ ನಡೆದಿದ್ದಲ್ಲ. ಗಾಂಜಾ ನಶೆ ಮತ್ತು ವೈಯಕ್ತಿಕ ದ್ವೇಷದಲ್ಲಿ ಕೃತ್ಯ ಎಸಗಿದ್ದಾರೆ.
ಆರೋಪಿ ಚರಣ್ ರಾಜ್ ವಿರುದ್ಧ ಈ ಹಿಂದೆ ಉರ್ವಾ, ಪಣಂಬೂರು, ಕಾವೂರು ಠಾಣೆಯಲ್ಲಿ ಐದು ಪ್ರಕರಣ ದಾಖಲಾಗಿರುತ್ತದೆ. ಸುಮನ್ ನಾಲ್ಕು ಪ್ರಕರಣ, ಅವಿನಾಶ್ ವಿರುದ್ಧ ಐದು ಪ್ರಕರಣ ದಾಖಲಾಗಿದೆ. ತಲವಾರು ಸಹಿತ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Three arrested for attacking man using swords in Ganja effect at Kavoor in Mangalore. The arrested accused are identified as Charan Raj alias Charan (23), a resident of Urundadigudde, Mangaluru, Sumant Burman (24) from Hosabettu, Suratkal and Avinash (24), a resident of Kodikal Sunkadakatte Kalbavai Road.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
24-09-25 10:48 pm
Mangalore Correspondent
ಖಾಸಗಿ ಜಮೀನಲ್ಲಿ ಅಕ್ರಮ ಹೆದ್ದಾರಿ ನಿರ್ಮಿಸಿದ್ದ ಪಿಡ...
24-09-25 08:46 pm
Priyank Kharge, Dharmasthala SIT: ಅಕ್ರಮ ಎಷ್ಟೇ...
24-09-25 07:38 pm
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
ಚಿನ್ನಯ್ಯ ಮತ್ತೆ ಬೆಳ್ತಂಗಡಿ ಕೋರ್ಟಿಗೆ ಹಾಜರು, ದೂರು...
23-09-25 11:01 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am