ಬ್ರೇಕಿಂಗ್ ನ್ಯೂಸ್
07-11-20 12:38 pm Mangalore Correspondent ಕ್ರೈಂ
ಮಂಗಳೂರು, ನವೆಂಬರ್ 07: ಕಿರುಕುಳ ಪ್ರಕರಣದಲ್ಲಿ ದೂರು ಕೊಡಲು ಹೋಗಿದ್ದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆಯೇ ಬಜ್ಪೆ ಠಾಣೆಯ ಪೊಲೀಸರು ಬಾಸುಂಡೆ ಬರುವಂತೆ ಹೊಡೆದು ಹಲ್ಲೆಗೈದಿರುವ ಆರೋಪ ಕೇಳಿಬಂದಿದ್ದು, ಮೂವರು ಪೊಲೀಸ್ ಪೇದೆಗಳ ವಿರುದ್ಧ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮಂಗಳೂರು ಹೊರವಲಯದ ಗಂಜಿಮಠದ ಪರಿಸರದ ಪಿಯುಸಿ ವಿದ್ಯಾರ್ಥಿನಿ ಹಲ್ಲೆಗೊಳಗಾದ ಯುವತಿಯಾಗಿದ್ದು, ಕೈ, ಕಾಲಿಗೆ ತೀವ್ರ ಗಾಯಗೊಂಡು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿದ್ಯಾರ್ಥಿನಿಗೆ ಎಡಪದವು ಬಳಿಯ ಇರುವೈಲು ನಿವಾಸಿ ಶ್ರೀಕಾಂತ್ ನಾಗೇಶ್ ಎಂಬ ಯುವಕನ ಜೊತೆಗೆ ಫೇಸ್ಬುಕ್ ನಲ್ಲಿ ಪರಿಚಯ ಆಗಿತ್ತು ಎನ್ನಲಾಗುತ್ತಿದೆ. ಈ ಬಗ್ಗೆ ಪರಿಚಯ ಪ್ರೇಮಕ್ಕೆ ತಿರುಗಿ, ಯುವಕ ನಾಗೇಶ್ ಯುವತಿಯ ಮನೆಗೆ ಬಂದು ಕಿರುಕುಳ ನೀಡಿದ್ದಾನೆ. ಮದುವೆ ಮಾಡಿಕೊಡುವಂತೆ ಒತ್ತಾಯ ಮಾಡಿದ್ದು, ಯುವತಿ ಅಪ್ರಾಪ್ತಳಾಗಿದ್ದರಿಂದ ಹೆತ್ತವರು ನಿರಾಕರಿಸಿದ್ದರು ಎನ್ನಲಾಗಿದೆ.
ಈ ನಡುವೆ, ಬೇರೆ ಯುವಕರನ್ನು ಕಟ್ಟಿಕೊಂಡು ಯುವತಿಯ ಮನೆಗೆ ಬಂದಿದ್ದ ಯುವಕ ನಾಗೇಶ್, ಮದುವೆ ಮಾಡಿಕೊಡದಿದ್ದರೆ ನಿಮ್ಮ ಮನೆಯನ್ನು ಧ್ವಂಸ ಮಾಡುತ್ತೇನೆಂದು ಬೆದರಿಕೆ ಹಾಕಿದ್ದಾನೆ ಎಂದು ದೂರಲಾಗಿದ್ದು ಯುವತಿಯ ತಂದೆ ಈ ಬಗ್ಗೆ ಬಜ್ಪೆ ಠಾಣೆಗೆ ದೂರು ನೀಡಿದ್ದರು. ಆದರೆ, ನಾಗೇಶ್ ಮರುದಿನ ಬಜ್ಪೆ ಠಾಣೆಗೆ ವಕೀಲರ ಜೊತೆ ತೆರಳಿದ್ದಾನೆ. ಇದರಿಂದ ಯು ಟರ್ನ್ ಹೊಡೆದ ಬಜ್ಪೆ ಪೊಲೀಸರು ಯುವತಿಯನ್ನು ಕರೆಸಿ ಬಾಸುಂಡೆ ಬರುವಂತೆ ಹೊಡೆದಿದ್ದಾರೆ ಎಂದು ದೂರಲಾಗಿದ್ದು, ಈ ಬಗ್ಗೆ ಯುವತಿಯ ತಂದೆ ಜೆರಾಲ್ಡ್ ಮ್ಯಾಕ್ಸಿಂ ಪಿಂಟೋ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅದರಂತೆ, ಮಹಿಳಾ ಠಾಣೆಯಲ್ಲಿ ಬಜ್ಪೆ ಠಾಣೆಯ ಇಬ್ಬರು ಮಹಿಳಾ ಪೇದೆ ಸೇರಿದಂತೆ ಮೂವರು ಪೊಲೀಸರ ವಿರುದ್ಧ ಪ್ರಕರಣ ದಾಖಲಾಗಿದೆ. ಅಲ್ಲದೆ, ಮಂಗಳೂರು ಕೆಥೋಲಿಕ್ ಸಭಾ ಮೂಲಕ ಮಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಲಾಗಿದ್ದು, ತಪ್ಪಿತಸ್ಥ ಪೊಲೀಸರನ್ನು ಸಸ್ಪೆಂಡ್ ಮಾಡುವಂತೆ ಒತ್ತಾಯಿಸಲಾಗಿದೆ.
Video Report:
The Bajpe Police have beaten up a girl mercilessly inside the police station who had come to give a complaint of torture by an unknown Boy. An FIR has been registered against 3 police personals of Bajpe station, Mangalore.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm