ಬ್ರೇಕಿಂಗ್ ನ್ಯೂಸ್
07-11-20 12:38 pm Mangalore Correspondent ಕ್ರೈಂ
ಮಂಗಳೂರು, ನವೆಂಬರ್ 07: ಕಿರುಕುಳ ಪ್ರಕರಣದಲ್ಲಿ ದೂರು ಕೊಡಲು ಹೋಗಿದ್ದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆಯೇ ಬಜ್ಪೆ ಠಾಣೆಯ ಪೊಲೀಸರು ಬಾಸುಂಡೆ ಬರುವಂತೆ ಹೊಡೆದು ಹಲ್ಲೆಗೈದಿರುವ ಆರೋಪ ಕೇಳಿಬಂದಿದ್ದು, ಮೂವರು ಪೊಲೀಸ್ ಪೇದೆಗಳ ವಿರುದ್ಧ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮಂಗಳೂರು ಹೊರವಲಯದ ಗಂಜಿಮಠದ ಪರಿಸರದ ಪಿಯುಸಿ ವಿದ್ಯಾರ್ಥಿನಿ ಹಲ್ಲೆಗೊಳಗಾದ ಯುವತಿಯಾಗಿದ್ದು, ಕೈ, ಕಾಲಿಗೆ ತೀವ್ರ ಗಾಯಗೊಂಡು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿದ್ಯಾರ್ಥಿನಿಗೆ ಎಡಪದವು ಬಳಿಯ ಇರುವೈಲು ನಿವಾಸಿ ಶ್ರೀಕಾಂತ್ ನಾಗೇಶ್ ಎಂಬ ಯುವಕನ ಜೊತೆಗೆ ಫೇಸ್ಬುಕ್ ನಲ್ಲಿ ಪರಿಚಯ ಆಗಿತ್ತು ಎನ್ನಲಾಗುತ್ತಿದೆ. ಈ ಬಗ್ಗೆ ಪರಿಚಯ ಪ್ರೇಮಕ್ಕೆ ತಿರುಗಿ, ಯುವಕ ನಾಗೇಶ್ ಯುವತಿಯ ಮನೆಗೆ ಬಂದು ಕಿರುಕುಳ ನೀಡಿದ್ದಾನೆ. ಮದುವೆ ಮಾಡಿಕೊಡುವಂತೆ ಒತ್ತಾಯ ಮಾಡಿದ್ದು, ಯುವತಿ ಅಪ್ರಾಪ್ತಳಾಗಿದ್ದರಿಂದ ಹೆತ್ತವರು ನಿರಾಕರಿಸಿದ್ದರು ಎನ್ನಲಾಗಿದೆ.
ಈ ನಡುವೆ, ಬೇರೆ ಯುವಕರನ್ನು ಕಟ್ಟಿಕೊಂಡು ಯುವತಿಯ ಮನೆಗೆ ಬಂದಿದ್ದ ಯುವಕ ನಾಗೇಶ್, ಮದುವೆ ಮಾಡಿಕೊಡದಿದ್ದರೆ ನಿಮ್ಮ ಮನೆಯನ್ನು ಧ್ವಂಸ ಮಾಡುತ್ತೇನೆಂದು ಬೆದರಿಕೆ ಹಾಕಿದ್ದಾನೆ ಎಂದು ದೂರಲಾಗಿದ್ದು ಯುವತಿಯ ತಂದೆ ಈ ಬಗ್ಗೆ ಬಜ್ಪೆ ಠಾಣೆಗೆ ದೂರು ನೀಡಿದ್ದರು. ಆದರೆ, ನಾಗೇಶ್ ಮರುದಿನ ಬಜ್ಪೆ ಠಾಣೆಗೆ ವಕೀಲರ ಜೊತೆ ತೆರಳಿದ್ದಾನೆ. ಇದರಿಂದ ಯು ಟರ್ನ್ ಹೊಡೆದ ಬಜ್ಪೆ ಪೊಲೀಸರು ಯುವತಿಯನ್ನು ಕರೆಸಿ ಬಾಸುಂಡೆ ಬರುವಂತೆ ಹೊಡೆದಿದ್ದಾರೆ ಎಂದು ದೂರಲಾಗಿದ್ದು, ಈ ಬಗ್ಗೆ ಯುವತಿಯ ತಂದೆ ಜೆರಾಲ್ಡ್ ಮ್ಯಾಕ್ಸಿಂ ಪಿಂಟೋ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.




ಅದರಂತೆ, ಮಹಿಳಾ ಠಾಣೆಯಲ್ಲಿ ಬಜ್ಪೆ ಠಾಣೆಯ ಇಬ್ಬರು ಮಹಿಳಾ ಪೇದೆ ಸೇರಿದಂತೆ ಮೂವರು ಪೊಲೀಸರ ವಿರುದ್ಧ ಪ್ರಕರಣ ದಾಖಲಾಗಿದೆ. ಅಲ್ಲದೆ, ಮಂಗಳೂರು ಕೆಥೋಲಿಕ್ ಸಭಾ ಮೂಲಕ ಮಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಲಾಗಿದ್ದು, ತಪ್ಪಿತಸ್ಥ ಪೊಲೀಸರನ್ನು ಸಸ್ಪೆಂಡ್ ಮಾಡುವಂತೆ ಒತ್ತಾಯಿಸಲಾಗಿದೆ.
Video Report:
The Bajpe Police have beaten up a girl mercilessly inside the police station who had come to give a complaint of torture by an unknown Boy. An FIR has been registered against 3 police personals of Bajpe station, Mangalore.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm