ಬ್ರೇಕಿಂಗ್ ನ್ಯೂಸ್
07-11-20 12:38 pm Mangalore Correspondent ಕ್ರೈಂ
ಮಂಗಳೂರು, ನವೆಂಬರ್ 07: ಕಿರುಕುಳ ಪ್ರಕರಣದಲ್ಲಿ ದೂರು ಕೊಡಲು ಹೋಗಿದ್ದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆಯೇ ಬಜ್ಪೆ ಠಾಣೆಯ ಪೊಲೀಸರು ಬಾಸುಂಡೆ ಬರುವಂತೆ ಹೊಡೆದು ಹಲ್ಲೆಗೈದಿರುವ ಆರೋಪ ಕೇಳಿಬಂದಿದ್ದು, ಮೂವರು ಪೊಲೀಸ್ ಪೇದೆಗಳ ವಿರುದ್ಧ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮಂಗಳೂರು ಹೊರವಲಯದ ಗಂಜಿಮಠದ ಪರಿಸರದ ಪಿಯುಸಿ ವಿದ್ಯಾರ್ಥಿನಿ ಹಲ್ಲೆಗೊಳಗಾದ ಯುವತಿಯಾಗಿದ್ದು, ಕೈ, ಕಾಲಿಗೆ ತೀವ್ರ ಗಾಯಗೊಂಡು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿದ್ಯಾರ್ಥಿನಿಗೆ ಎಡಪದವು ಬಳಿಯ ಇರುವೈಲು ನಿವಾಸಿ ಶ್ರೀಕಾಂತ್ ನಾಗೇಶ್ ಎಂಬ ಯುವಕನ ಜೊತೆಗೆ ಫೇಸ್ಬುಕ್ ನಲ್ಲಿ ಪರಿಚಯ ಆಗಿತ್ತು ಎನ್ನಲಾಗುತ್ತಿದೆ. ಈ ಬಗ್ಗೆ ಪರಿಚಯ ಪ್ರೇಮಕ್ಕೆ ತಿರುಗಿ, ಯುವಕ ನಾಗೇಶ್ ಯುವತಿಯ ಮನೆಗೆ ಬಂದು ಕಿರುಕುಳ ನೀಡಿದ್ದಾನೆ. ಮದುವೆ ಮಾಡಿಕೊಡುವಂತೆ ಒತ್ತಾಯ ಮಾಡಿದ್ದು, ಯುವತಿ ಅಪ್ರಾಪ್ತಳಾಗಿದ್ದರಿಂದ ಹೆತ್ತವರು ನಿರಾಕರಿಸಿದ್ದರು ಎನ್ನಲಾಗಿದೆ.
ಈ ನಡುವೆ, ಬೇರೆ ಯುವಕರನ್ನು ಕಟ್ಟಿಕೊಂಡು ಯುವತಿಯ ಮನೆಗೆ ಬಂದಿದ್ದ ಯುವಕ ನಾಗೇಶ್, ಮದುವೆ ಮಾಡಿಕೊಡದಿದ್ದರೆ ನಿಮ್ಮ ಮನೆಯನ್ನು ಧ್ವಂಸ ಮಾಡುತ್ತೇನೆಂದು ಬೆದರಿಕೆ ಹಾಕಿದ್ದಾನೆ ಎಂದು ದೂರಲಾಗಿದ್ದು ಯುವತಿಯ ತಂದೆ ಈ ಬಗ್ಗೆ ಬಜ್ಪೆ ಠಾಣೆಗೆ ದೂರು ನೀಡಿದ್ದರು. ಆದರೆ, ನಾಗೇಶ್ ಮರುದಿನ ಬಜ್ಪೆ ಠಾಣೆಗೆ ವಕೀಲರ ಜೊತೆ ತೆರಳಿದ್ದಾನೆ. ಇದರಿಂದ ಯು ಟರ್ನ್ ಹೊಡೆದ ಬಜ್ಪೆ ಪೊಲೀಸರು ಯುವತಿಯನ್ನು ಕರೆಸಿ ಬಾಸುಂಡೆ ಬರುವಂತೆ ಹೊಡೆದಿದ್ದಾರೆ ಎಂದು ದೂರಲಾಗಿದ್ದು, ಈ ಬಗ್ಗೆ ಯುವತಿಯ ತಂದೆ ಜೆರಾಲ್ಡ್ ಮ್ಯಾಕ್ಸಿಂ ಪಿಂಟೋ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.




ಅದರಂತೆ, ಮಹಿಳಾ ಠಾಣೆಯಲ್ಲಿ ಬಜ್ಪೆ ಠಾಣೆಯ ಇಬ್ಬರು ಮಹಿಳಾ ಪೇದೆ ಸೇರಿದಂತೆ ಮೂವರು ಪೊಲೀಸರ ವಿರುದ್ಧ ಪ್ರಕರಣ ದಾಖಲಾಗಿದೆ. ಅಲ್ಲದೆ, ಮಂಗಳೂರು ಕೆಥೋಲಿಕ್ ಸಭಾ ಮೂಲಕ ಮಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಲಾಗಿದ್ದು, ತಪ್ಪಿತಸ್ಥ ಪೊಲೀಸರನ್ನು ಸಸ್ಪೆಂಡ್ ಮಾಡುವಂತೆ ಒತ್ತಾಯಿಸಲಾಗಿದೆ.
Video Report:
The Bajpe Police have beaten up a girl mercilessly inside the police station who had come to give a complaint of torture by an unknown Boy. An FIR has been registered against 3 police personals of Bajpe station, Mangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm