ಬ್ರೇಕಿಂಗ್ ನ್ಯೂಸ್
24-08-23 04:46 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 24: ತಾನು ಪ್ರೀತಿಸುತ್ತಿದ್ದ ಯುವತಿಯನ್ನು ಪ್ರಿಯಕರನೇ ಕುತ್ತಿಗೆ ಸೀಳಿ ಕೊಲೆಗೈದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಇದರ ಬೆನ್ನಲ್ಲೇ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.
ವಿಟ್ಲ ನಿವಾಸಿ ಪದ್ಮರಾಜ್(30) ಬಂಧಿತ ಆರೋಪಿ. ಅಳಿಕೆ ನಿವಾಸಿ ಗೌರಿ (18) ಕೊಲೆಯಾದ ಯುವತಿ. ಪ್ರೇಮ ವೈಫಲ್ಯವೇ ಕೃತ್ಯಕ್ಕೆ ಕಾರಣ ಎನ್ನುವುದು ತಿಳಿದುಬಂದಿದೆ. ಅಳಿಕೆ ನಿವಾಸಿ 18 ವರ್ಷದ ಗೌರಿಯನ್ನು ಪದ್ಮರಾಜ್ ಪ್ರೀತಿಸುತ್ತಿದ್ದ. ಇತ್ತೀಚೆಗೆ ಇಬ್ಬರ ನಡುವೆ ವೈಮನಸ್ಯ ಉಂಟಾಗಿದ್ದು ಇಂದು ಮಧ್ಯಾಹ್ನ ಪುತ್ತೂರು ಬಸ್ ನಿಲ್ದಾಣದ ಬಳಿ ಇಬ್ಬರ ನಡುವೆ ವಾಗ್ವಾದ ನಡೆದಿತ್ತು. ಗೌರಿ ಪುತ್ತೂರಿನಲ್ಲಿ ಬಟ್ಟೆ ಮಳಿಗೆಯಲ್ಲಿ ಕೆಲಸಕ್ಕಿದ್ದಳು. ಇವರ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.
ಇಂದು ನಡೆದ ಜಗಳ ಹಿನ್ನೆಲೆಯಲ್ಲಿ ಯುವತಿ, ಪದ್ಮರಾಜ್ ವಿರುದ್ಧ ಮಹಿಳಾ ಠಾಣೆಗೆ ದೂರು ನೀಡಲು ಮುಂದಾಗಿದ್ದಳು. ಇದಕ್ಕಾಗಿ ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಬಳಿಯ ಮಹಿಳಾ ಠಾಣೆ ಬಳಿ ಬಂದಿದ್ದಳು. ಇದರಿಂದ ಕುಪಿತಗೊಂಡ ಆರೋಪಿ ಪದ್ಮರಾಜ್ ಯುವತಿಯ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ್ದಾನೆ. ಯುವತಿ ಗಂಭೀರ ಸ್ಥಿತಿಯಲ್ಲಿ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಆಕೆಯನ್ನು ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ತರುವ ದಾರಿಯಲ್ಲಿ ಮೃತಪಟ್ಟಿದ್ದಾಳೆ.
Mangalore Boy kills his 18 year old girl lover in Puttur for threating of filing police complaint. The accused has been arrested in just hours of crime. The arrested has been identifed as Padamaraj (30). The girl killed has been identifed as Gowri (18).
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
18-06-25 10:24 am
Mangalore Correspondent
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm