ಬ್ರೇಕಿಂಗ್ ನ್ಯೂಸ್
25-08-23 06:34 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 25: ಲೋನ್ ಆ್ಯಪ್ ಮೂಲಕ ಸಾಲ ಪಡೆದ ಮಹಿಳೆಗೆ ಸಾಲ ಮರುಪಾವತಿಸಿದ ಬಳಿಕವೂ ಹೆಚ್ಚಿನ ಹಣಕ್ಕೆ ಒತ್ತಾಯಿಸಿ ನಗ್ನ ಪೊಟೋ ಹರಿಬಿಡುವ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ನೊಂದ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಏಪ್ರಿಲ್ 15ರಂದು ಮಹಿಳೆ ಗೂಗಲ್ ಪ್ಲೇ ಸ್ಟೋರ್ನಿಂದ ಲೋನ್ ಆ್ಯಪ್ವೊಂದನ್ನು ಡೌನ್ಲೋಡ್ ಮಾಡಿ, ಅದರಲ್ಲಿ 10,000 ರೂಪಾಯಿ ಲೋನ್ಗೆ ಅಪ್ಲೈ ಮಾಡಿದ್ದರು. ಕೂಡಲೇ ಅವರ ಖಾತೆಗೆ 7,500 ರೂ. ಕ್ರೆಡಿಟ್ ಆಗಿತ್ತು. ಸ್ವಲ್ಪ ದಿನಗಳ ನಂತರ 10000 ರೂ.ಗಳನ್ನು ಮರು ಪಾವತಿ ಮಾಡಿರುವುದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಸಾಲ ತೀರಿಸಿದ ನಂತರದ ದಿನಗಳಲ್ಲಿಯೂ ವಿವಿಧ ವಾಟ್ಸ್ಆ್ಯಪ್ ನಂಬರ್ಗಳ ಮೂಲಕ ಮಹಿಳೆಗೆ ಪುನಃ ಕಡ್ಡಾಯವಾಗಿ ಮತ್ತೆ ಲೋನ್ ಪಡೆಯಬೇಕು ಎಂದು ಒತ್ತಾಯಿಸಿ ಅವರ ಖಾತೆಗೆ 14,000 ರೂ. ಕ್ರೆಡಿಟ್ ಮಾಡಿದ್ದಾರೆ. ಈ ಹಣವನ್ನು ಮಹಿಳೆ ಮರುಪಾವತಿ ಮಾಡಿದ್ದರು. ಆದರೆ, ಪಡೆದ ಹಣವನ್ನೆಲ್ಲ ಪಾವತಿಸಿದ ಬಳಿಕವೂ ಆ್ಯಪ್ನವರ ಕಿರುಕುಳ ಮುಂದುವರೆದಿದ್ದು, ವಿವಿಧ ಮೊಬೈಲ್ ನಂಬರ್ಗಳಿಂದ ಕರೆ ಮಾಡಿ ಹೆಚ್ಚಿನ ಹಣಕ್ಕೆ ಒತ್ತಾಯಿಸಿದ್ದಾರೆ. ಹೀಗೆ ಹಂತ ಹಂತವಾಗಿ ತನ್ನ ಕಡೆಯಿಂದ ಒಟ್ಟೂ 51,000 ರೂ.ಗಳನ್ನು ಆ್ಯಪ್ನವರು ಹಾಕಿಸಿಕೊಂಡಿದ್ದಾರೆ ಎಂದು ಮಹಿಳೆ ದೂರಿದ್ದಾರೆ.
ನಂತರವೂ ಕೂಡ ಮಹಿಳೆಗೆ ವಿವಿಧ ನಂಬರ್ಗಳಿಂದ ಕರೆ ಮಾಡಿ ಹಣಕ್ಕಾಗಿ ಬೆದರಿಕೆ ಹಾಕಿದ್ದು, ಮಹಿಳೆಯ ಫೋಟೋವನ್ನು ಓರ್ವ ಹುಡುಗನೊಂದಿಗೆ ನಗ್ನವಾಗಿ ಇರುವ ರೀತಿಯಲ್ಲಿ ಎಡಿಟ್ ಮಾಡಿ ಕಳುಹಿಸಿದ್ದಾರೆ. ಹಣ ಕಳಿಸದಿದ್ದರೆ ಫೋಟೋವನ್ನು ಸಂಬಂಧಿಕರು ಹಾಗೂ ಇತರರಿಗೆ ಕಳುಹಿಸಲಾಗುವುದು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾರೆ ಎಂದು ನೊಂದ ಮಹಿಳೆ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
Loan from mobile app, women black mailed of making nude photo viral in Mangalore.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm