ಬ್ರೇಕಿಂಗ್ ನ್ಯೂಸ್
25-08-23 09:04 pm Mangalore Correspondent ಕ್ರೈಂ
ಉಳ್ಳಾಲ, ಆ.25: ಹಾಡಹಗಲೇ ಅಪರಿಚಿತ ಮಹಿಳೆಯೊಬ್ಬಳು ಒಂಟಿ ಮನೆಗೆ ನುಗ್ಗಿ ವೃದ್ಧೆಯನ್ನ ದಿಂಬಿನಿಂದ ಅದುಮಿಟ್ಟು ಕುತ್ತಿಗೆಯಲ್ಲಿದ್ದ 22 ಗ್ರಾಮ್ ಚಿನ್ನದ ಸರ ದರೋಡೆಗೈದು ಪರಾರಿಯಾಗಿರುವ ಘಟನೆ ಕುಂಪಲ ಮೂರುಕಟ್ಟೆ ಒಂದನೇ ಅಡ್ಡ ರಸ್ತೆಯ ಮಿತ್ರನಗರ ಎಂಬಲ್ಲಿ ನಡೆದಿದೆ.
ಮಿತ್ರನಗರದ ಒಂಟಿ ಮನೆ ನಿವಾಸಿ ಸುಶೀಲ(76) ಎಂಬವರ ಕತ್ತಿನಲ್ಲಿದ್ದ 22 ಗ್ರಾಮ್ ತೂಕದ ಹವಳ ಪೋಣಿತ ಚಿನ್ನದ ಸರವನ್ನ ದರೋಡೆಗೈಯಲಾಗಿದೆ. ಸುಶೀಲ ಅವರ ಪತಿ ಉಗ್ಗಪ್ಪ ಮೂಲ್ಯ ಅವರು ಕೆಲ ವರುಷಗಳ ಹಿಂದೆ ಸಾವನ್ನಪ್ಪಿದ್ದರು. ದಂಪತಿಗೆ ಮಕ್ಕಳಿರಲಿಲ್ಲ. ಹಾಗಾಗಿ ಸುಶೀಲ ಅವರು ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು.

ಇಂದು ಮಧ್ಯಾಹ್ನ 2.45 ರ ವೇಳೆ ಸುಶೀಲ ಅವರು ಮನೆಯ ಹಾಲ್ ನಲ್ಲಿ ಇದ್ದ ಮಂಚದಲ್ಲಿ ಗೋಡೆ ಕಡೆ ಮುಖ ಹಾಕಿ ಮಲಗಿದ್ದ ಸಂದರ್ಭ ಮಹಿಳೆಯೋರ್ವಳು ನುಗ್ಗಿದ್ದು ಮುಖಕ್ಕೆ ದಿಂಬನ್ನು ಅದುಮಿ ಸರವನ್ನು ದರೋಡೆಗೈದು ಪರಾರಿಯಾಗಿದ್ದಾಳೆ. ದರೋಡೆಗೈದ ಆಗಂತುಕ ಮಹಿಳೆ ಬಾಗಿಲಿನಿಂದ ಹೊರ ಓಡಿದಾಗ ಸುಶೀಲ ಅವರು ಮಹಿಳೆ ಚೂಡಿದಾರ್ ಧರಿಸಿದ್ದನ್ನ ಗಮನಿಸಿದ್ದಾರೆ.
ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕರಾದ ಸಂದೀಪ್, ಉಪ ನಿರೀಕ್ಷಕರಾದ ಶೀತಲ್ ಕುಮಾರ್ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಬಿಜೆಪಿ ಮುಖಂಡ ಸತೀಶ್ ಕುಂಪಲ ಅವರು ಪೊಲೀಸರಲ್ಲಿ ಆರೋಪಿಯ ಶೀಘ್ರ ಬಂಧನಕ್ಕೆ ಆಗ್ರಹಿಸಿದ್ದಾರೆ. ಈ ಹಿಂದೆಯೂ ಸುಶೀಲ ಅವರ ಎರಡು ಚಿನ್ನದ ಬಳೆಗಳು ಕಳವಾಗಿದ್ದು ಪೊಲೀಸ್ ದೂರು ನೀಡಿರಲಿಲ್ಲ. ಸ್ಥಳೀಯ ನಿವಾಸಿ ಆರ್ಥಿಕ ಮುಗ್ಗಟ್ಟಿನಲ್ಲಿರುವ ಮಹಿಳೆಯ ಮೇಲೆಯೇ ಶಂಕೆಯಿದ್ದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
Elderly lonely woman robbed of 22 pavan gold at Kumpala in Mangalore. Police arrive at spot and are investigating the case.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 08:27 pm
Mangalore Correspondent
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm