ಬ್ರೇಕಿಂಗ್ ನ್ಯೂಸ್
25-08-23 09:04 pm Mangalore Correspondent ಕ್ರೈಂ
ಉಳ್ಳಾಲ, ಆ.25: ಹಾಡಹಗಲೇ ಅಪರಿಚಿತ ಮಹಿಳೆಯೊಬ್ಬಳು ಒಂಟಿ ಮನೆಗೆ ನುಗ್ಗಿ ವೃದ್ಧೆಯನ್ನ ದಿಂಬಿನಿಂದ ಅದುಮಿಟ್ಟು ಕುತ್ತಿಗೆಯಲ್ಲಿದ್ದ 22 ಗ್ರಾಮ್ ಚಿನ್ನದ ಸರ ದರೋಡೆಗೈದು ಪರಾರಿಯಾಗಿರುವ ಘಟನೆ ಕುಂಪಲ ಮೂರುಕಟ್ಟೆ ಒಂದನೇ ಅಡ್ಡ ರಸ್ತೆಯ ಮಿತ್ರನಗರ ಎಂಬಲ್ಲಿ ನಡೆದಿದೆ.
ಮಿತ್ರನಗರದ ಒಂಟಿ ಮನೆ ನಿವಾಸಿ ಸುಶೀಲ(76) ಎಂಬವರ ಕತ್ತಿನಲ್ಲಿದ್ದ 22 ಗ್ರಾಮ್ ತೂಕದ ಹವಳ ಪೋಣಿತ ಚಿನ್ನದ ಸರವನ್ನ ದರೋಡೆಗೈಯಲಾಗಿದೆ. ಸುಶೀಲ ಅವರ ಪತಿ ಉಗ್ಗಪ್ಪ ಮೂಲ್ಯ ಅವರು ಕೆಲ ವರುಷಗಳ ಹಿಂದೆ ಸಾವನ್ನಪ್ಪಿದ್ದರು. ದಂಪತಿಗೆ ಮಕ್ಕಳಿರಲಿಲ್ಲ. ಹಾಗಾಗಿ ಸುಶೀಲ ಅವರು ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು.

ಇಂದು ಮಧ್ಯಾಹ್ನ 2.45 ರ ವೇಳೆ ಸುಶೀಲ ಅವರು ಮನೆಯ ಹಾಲ್ ನಲ್ಲಿ ಇದ್ದ ಮಂಚದಲ್ಲಿ ಗೋಡೆ ಕಡೆ ಮುಖ ಹಾಕಿ ಮಲಗಿದ್ದ ಸಂದರ್ಭ ಮಹಿಳೆಯೋರ್ವಳು ನುಗ್ಗಿದ್ದು ಮುಖಕ್ಕೆ ದಿಂಬನ್ನು ಅದುಮಿ ಸರವನ್ನು ದರೋಡೆಗೈದು ಪರಾರಿಯಾಗಿದ್ದಾಳೆ. ದರೋಡೆಗೈದ ಆಗಂತುಕ ಮಹಿಳೆ ಬಾಗಿಲಿನಿಂದ ಹೊರ ಓಡಿದಾಗ ಸುಶೀಲ ಅವರು ಮಹಿಳೆ ಚೂಡಿದಾರ್ ಧರಿಸಿದ್ದನ್ನ ಗಮನಿಸಿದ್ದಾರೆ.
ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕರಾದ ಸಂದೀಪ್, ಉಪ ನಿರೀಕ್ಷಕರಾದ ಶೀತಲ್ ಕುಮಾರ್ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಬಿಜೆಪಿ ಮುಖಂಡ ಸತೀಶ್ ಕುಂಪಲ ಅವರು ಪೊಲೀಸರಲ್ಲಿ ಆರೋಪಿಯ ಶೀಘ್ರ ಬಂಧನಕ್ಕೆ ಆಗ್ರಹಿಸಿದ್ದಾರೆ. ಈ ಹಿಂದೆಯೂ ಸುಶೀಲ ಅವರ ಎರಡು ಚಿನ್ನದ ಬಳೆಗಳು ಕಳವಾಗಿದ್ದು ಪೊಲೀಸ್ ದೂರು ನೀಡಿರಲಿಲ್ಲ. ಸ್ಥಳೀಯ ನಿವಾಸಿ ಆರ್ಥಿಕ ಮುಗ್ಗಟ್ಟಿನಲ್ಲಿರುವ ಮಹಿಳೆಯ ಮೇಲೆಯೇ ಶಂಕೆಯಿದ್ದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
Elderly lonely woman robbed of 22 pavan gold at Kumpala in Mangalore. Police arrive at spot and are investigating the case.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm