ಬ್ರೇಕಿಂಗ್ ನ್ಯೂಸ್
25-08-23 09:04 pm Mangalore Correspondent ಕ್ರೈಂ
ಉಳ್ಳಾಲ, ಆ.25: ಹಾಡಹಗಲೇ ಅಪರಿಚಿತ ಮಹಿಳೆಯೊಬ್ಬಳು ಒಂಟಿ ಮನೆಗೆ ನುಗ್ಗಿ ವೃದ್ಧೆಯನ್ನ ದಿಂಬಿನಿಂದ ಅದುಮಿಟ್ಟು ಕುತ್ತಿಗೆಯಲ್ಲಿದ್ದ 22 ಗ್ರಾಮ್ ಚಿನ್ನದ ಸರ ದರೋಡೆಗೈದು ಪರಾರಿಯಾಗಿರುವ ಘಟನೆ ಕುಂಪಲ ಮೂರುಕಟ್ಟೆ ಒಂದನೇ ಅಡ್ಡ ರಸ್ತೆಯ ಮಿತ್ರನಗರ ಎಂಬಲ್ಲಿ ನಡೆದಿದೆ.
ಮಿತ್ರನಗರದ ಒಂಟಿ ಮನೆ ನಿವಾಸಿ ಸುಶೀಲ(76) ಎಂಬವರ ಕತ್ತಿನಲ್ಲಿದ್ದ 22 ಗ್ರಾಮ್ ತೂಕದ ಹವಳ ಪೋಣಿತ ಚಿನ್ನದ ಸರವನ್ನ ದರೋಡೆಗೈಯಲಾಗಿದೆ. ಸುಶೀಲ ಅವರ ಪತಿ ಉಗ್ಗಪ್ಪ ಮೂಲ್ಯ ಅವರು ಕೆಲ ವರುಷಗಳ ಹಿಂದೆ ಸಾವನ್ನಪ್ಪಿದ್ದರು. ದಂಪತಿಗೆ ಮಕ್ಕಳಿರಲಿಲ್ಲ. ಹಾಗಾಗಿ ಸುಶೀಲ ಅವರು ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು.
ಇಂದು ಮಧ್ಯಾಹ್ನ 2.45 ರ ವೇಳೆ ಸುಶೀಲ ಅವರು ಮನೆಯ ಹಾಲ್ ನಲ್ಲಿ ಇದ್ದ ಮಂಚದಲ್ಲಿ ಗೋಡೆ ಕಡೆ ಮುಖ ಹಾಕಿ ಮಲಗಿದ್ದ ಸಂದರ್ಭ ಮಹಿಳೆಯೋರ್ವಳು ನುಗ್ಗಿದ್ದು ಮುಖಕ್ಕೆ ದಿಂಬನ್ನು ಅದುಮಿ ಸರವನ್ನು ದರೋಡೆಗೈದು ಪರಾರಿಯಾಗಿದ್ದಾಳೆ. ದರೋಡೆಗೈದ ಆಗಂತುಕ ಮಹಿಳೆ ಬಾಗಿಲಿನಿಂದ ಹೊರ ಓಡಿದಾಗ ಸುಶೀಲ ಅವರು ಮಹಿಳೆ ಚೂಡಿದಾರ್ ಧರಿಸಿದ್ದನ್ನ ಗಮನಿಸಿದ್ದಾರೆ.
ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕರಾದ ಸಂದೀಪ್, ಉಪ ನಿರೀಕ್ಷಕರಾದ ಶೀತಲ್ ಕುಮಾರ್ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಬಿಜೆಪಿ ಮುಖಂಡ ಸತೀಶ್ ಕುಂಪಲ ಅವರು ಪೊಲೀಸರಲ್ಲಿ ಆರೋಪಿಯ ಶೀಘ್ರ ಬಂಧನಕ್ಕೆ ಆಗ್ರಹಿಸಿದ್ದಾರೆ. ಈ ಹಿಂದೆಯೂ ಸುಶೀಲ ಅವರ ಎರಡು ಚಿನ್ನದ ಬಳೆಗಳು ಕಳವಾಗಿದ್ದು ಪೊಲೀಸ್ ದೂರು ನೀಡಿರಲಿಲ್ಲ. ಸ್ಥಳೀಯ ನಿವಾಸಿ ಆರ್ಥಿಕ ಮುಗ್ಗಟ್ಟಿನಲ್ಲಿರುವ ಮಹಿಳೆಯ ಮೇಲೆಯೇ ಶಂಕೆಯಿದ್ದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
Elderly lonely woman robbed of 22 pavan gold at Kumpala in Mangalore. Police arrive at spot and are investigating the case.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
24-09-25 10:48 pm
Mangalore Correspondent
ಖಾಸಗಿ ಜಮೀನಲ್ಲಿ ಅಕ್ರಮ ಹೆದ್ದಾರಿ ನಿರ್ಮಿಸಿದ್ದ ಪಿಡ...
24-09-25 08:46 pm
Priyank Kharge, Dharmasthala SIT: ಅಕ್ರಮ ಎಷ್ಟೇ...
24-09-25 07:38 pm
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
ಚಿನ್ನಯ್ಯ ಮತ್ತೆ ಬೆಳ್ತಂಗಡಿ ಕೋರ್ಟಿಗೆ ಹಾಜರು, ದೂರು...
23-09-25 11:01 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am