ಬ್ರೇಕಿಂಗ್ ನ್ಯೂಸ್
07-11-20 04:18 pm Headline Karnataka News Network ಕ್ರೈಂ
ಕಾಸರಗೋಡು, ನವೆಂಬರ್ 7: ಮಂಜೇಶ್ವರ ಶಾಸಕ ಎಂ.ಕೆ. ಕಮರುದ್ದೀನ್ ಅವರನ್ನು ಕೊನೆಗೂ ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಂದು ಬೆಳಗ್ಗೆ ಶಾಸಕ ಕಮರುದ್ದೀನ್ ಅವರನ್ನು ವಿಚಾರಣೆಗೆ ಕರೆಸಿಕೊಂಡಿದ್ದರು. ಬೆಳಗ್ಗಿನಿಂದ ವಿಚಾರಣೆ ನಡೆಸಿದ ಪೊಲೀಸರು ಈಗ ಬಂಧಿಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ಫ್ಯಾಷನ್ ಗೋಲ್ಡ್ ಹೆಸರಲ್ಲಿ ನೂರಾರು ಮಂದಿಯಿಂದ ಕೋಟ್ಯಂತರ ಹಣ ಪಡೆದು ವಂಚನೆ ನಡೆಸಿದ ಬಗ್ಗೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ನೇಮಕ ಮಾಡಲಾಗಿತ್ತು. ತನಿಖಾ ತಂಡದ ಮುಖ್ಯಸ್ಥ ಪಿ.ವಿವೇಕ್ ಕುಮಾರ್ ಕಾಸರಗೋಡು ಎಸ್ ಪಿ ಕಚೇರಿಯಲ್ಲಿ ವಿಚಾರಣೆ ನಡೆಸಿದ್ದು, ಪ್ರಕರಣದಲ್ಲಿ ಶಾಸಕರ ಶಾಮೀಲಾತಿ ಮತ್ತು ವಂಚನೆ ಎಸಗಿರುವುದು ಕಂಡುಬಂದಿದ್ದರಿಂದ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಬಂಧಿಸಿದ್ದಾರೆ.
ಫ್ಯಾಶನ್ ಗೋಲ್ಡ್ ಹೆಸರಲ್ಲಿ ಹಣ ದ್ವಿಗುಣಗೊಳಿಸುವ ಭರವಸೆಯಿಂದ 700ಕ್ಕೂ ಹೆಚ್ಚು ಮಂದಿ ಹಣ ಹೂಡಿಕೆ ಮಾಡಿದ್ದರು. 130 ಕೋಟಿಗೂ ಹೆಚ್ಚು ಮೊತ್ತದ ಹಗರಣ ಇದಾಗಿದ್ದು, ಇತ್ತೀಚೆಗೆ ಹಣ ಸಿಗದೆ ವಂಚನೆಗೊಳಗಾದ ಮಂದಿ ಪೊಲೀಸ್ ದೂರು ದಾಖಲಿಸಿದ್ದರು. ಕಾಸರಗೋಡಿನ ವಿವಿಧ ಠಾಣೆಗಳಲ್ಲಿ ಈವರೆಗೆ 107 ಪ್ರಕರಣಗಳು ದಾಖಲಾಗಿವೆ. ಪೊಲೀಸರು ಒತ್ತಡಕ್ಕೊಳಗಾಗಿ ಶಾಸಕರನ್ನು ತನಿಖೆಗೆ ಒಳಪಡಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣದಲ್ಲಿ ಫ್ಯಾಶನ್ ಗೋಲ್ಡ್ ಡೈರೆಕ್ಟರ್ ಪೂಕೋಯ ತಂಗಳ್ ಕೂಡ ಆರೋಪಿಯಾಗಿದ್ದಾರೆ.
Manjeshwar MLA M C Qamaruddin arrested in connection with the fraud case of Fashion Gold International Company. Special Investigation Team led by P Vivek Kumar who was interrogating MLA Qamaruddin in SP's office has arrested the MLA.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm