ಬ್ರೇಕಿಂಗ್ ನ್ಯೂಸ್
07-11-20 04:18 pm Headline Karnataka News Network ಕ್ರೈಂ
ಕಾಸರಗೋಡು, ನವೆಂಬರ್ 7: ಮಂಜೇಶ್ವರ ಶಾಸಕ ಎಂ.ಕೆ. ಕಮರುದ್ದೀನ್ ಅವರನ್ನು ಕೊನೆಗೂ ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಂದು ಬೆಳಗ್ಗೆ ಶಾಸಕ ಕಮರುದ್ದೀನ್ ಅವರನ್ನು ವಿಚಾರಣೆಗೆ ಕರೆಸಿಕೊಂಡಿದ್ದರು. ಬೆಳಗ್ಗಿನಿಂದ ವಿಚಾರಣೆ ನಡೆಸಿದ ಪೊಲೀಸರು ಈಗ ಬಂಧಿಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ಫ್ಯಾಷನ್ ಗೋಲ್ಡ್ ಹೆಸರಲ್ಲಿ ನೂರಾರು ಮಂದಿಯಿಂದ ಕೋಟ್ಯಂತರ ಹಣ ಪಡೆದು ವಂಚನೆ ನಡೆಸಿದ ಬಗ್ಗೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ನೇಮಕ ಮಾಡಲಾಗಿತ್ತು. ತನಿಖಾ ತಂಡದ ಮುಖ್ಯಸ್ಥ ಪಿ.ವಿವೇಕ್ ಕುಮಾರ್ ಕಾಸರಗೋಡು ಎಸ್ ಪಿ ಕಚೇರಿಯಲ್ಲಿ ವಿಚಾರಣೆ ನಡೆಸಿದ್ದು, ಪ್ರಕರಣದಲ್ಲಿ ಶಾಸಕರ ಶಾಮೀಲಾತಿ ಮತ್ತು ವಂಚನೆ ಎಸಗಿರುವುದು ಕಂಡುಬಂದಿದ್ದರಿಂದ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಬಂಧಿಸಿದ್ದಾರೆ.
ಫ್ಯಾಶನ್ ಗೋಲ್ಡ್ ಹೆಸರಲ್ಲಿ ಹಣ ದ್ವಿಗುಣಗೊಳಿಸುವ ಭರವಸೆಯಿಂದ 700ಕ್ಕೂ ಹೆಚ್ಚು ಮಂದಿ ಹಣ ಹೂಡಿಕೆ ಮಾಡಿದ್ದರು. 130 ಕೋಟಿಗೂ ಹೆಚ್ಚು ಮೊತ್ತದ ಹಗರಣ ಇದಾಗಿದ್ದು, ಇತ್ತೀಚೆಗೆ ಹಣ ಸಿಗದೆ ವಂಚನೆಗೊಳಗಾದ ಮಂದಿ ಪೊಲೀಸ್ ದೂರು ದಾಖಲಿಸಿದ್ದರು. ಕಾಸರಗೋಡಿನ ವಿವಿಧ ಠಾಣೆಗಳಲ್ಲಿ ಈವರೆಗೆ 107 ಪ್ರಕರಣಗಳು ದಾಖಲಾಗಿವೆ. ಪೊಲೀಸರು ಒತ್ತಡಕ್ಕೊಳಗಾಗಿ ಶಾಸಕರನ್ನು ತನಿಖೆಗೆ ಒಳಪಡಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣದಲ್ಲಿ ಫ್ಯಾಶನ್ ಗೋಲ್ಡ್ ಡೈರೆಕ್ಟರ್ ಪೂಕೋಯ ತಂಗಳ್ ಕೂಡ ಆರೋಪಿಯಾಗಿದ್ದಾರೆ.
Manjeshwar MLA M C Qamaruddin arrested in connection with the fraud case of Fashion Gold International Company. Special Investigation Team led by P Vivek Kumar who was interrogating MLA Qamaruddin in SP's office has arrested the MLA.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am