ಬ್ರೇಕಿಂಗ್ ನ್ಯೂಸ್
07-11-20 04:18 pm Headline Karnataka News Network ಕ್ರೈಂ
ಕಾಸರಗೋಡು, ನವೆಂಬರ್ 7: ಮಂಜೇಶ್ವರ ಶಾಸಕ ಎಂ.ಕೆ. ಕಮರುದ್ದೀನ್ ಅವರನ್ನು ಕೊನೆಗೂ ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಂದು ಬೆಳಗ್ಗೆ ಶಾಸಕ ಕಮರುದ್ದೀನ್ ಅವರನ್ನು ವಿಚಾರಣೆಗೆ ಕರೆಸಿಕೊಂಡಿದ್ದರು. ಬೆಳಗ್ಗಿನಿಂದ ವಿಚಾರಣೆ ನಡೆಸಿದ ಪೊಲೀಸರು ಈಗ ಬಂಧಿಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ಫ್ಯಾಷನ್ ಗೋಲ್ಡ್ ಹೆಸರಲ್ಲಿ ನೂರಾರು ಮಂದಿಯಿಂದ ಕೋಟ್ಯಂತರ ಹಣ ಪಡೆದು ವಂಚನೆ ನಡೆಸಿದ ಬಗ್ಗೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ನೇಮಕ ಮಾಡಲಾಗಿತ್ತು. ತನಿಖಾ ತಂಡದ ಮುಖ್ಯಸ್ಥ ಪಿ.ವಿವೇಕ್ ಕುಮಾರ್ ಕಾಸರಗೋಡು ಎಸ್ ಪಿ ಕಚೇರಿಯಲ್ಲಿ ವಿಚಾರಣೆ ನಡೆಸಿದ್ದು, ಪ್ರಕರಣದಲ್ಲಿ ಶಾಸಕರ ಶಾಮೀಲಾತಿ ಮತ್ತು ವಂಚನೆ ಎಸಗಿರುವುದು ಕಂಡುಬಂದಿದ್ದರಿಂದ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಬಂಧಿಸಿದ್ದಾರೆ.
ಫ್ಯಾಶನ್ ಗೋಲ್ಡ್ ಹೆಸರಲ್ಲಿ ಹಣ ದ್ವಿಗುಣಗೊಳಿಸುವ ಭರವಸೆಯಿಂದ 700ಕ್ಕೂ ಹೆಚ್ಚು ಮಂದಿ ಹಣ ಹೂಡಿಕೆ ಮಾಡಿದ್ದರು. 130 ಕೋಟಿಗೂ ಹೆಚ್ಚು ಮೊತ್ತದ ಹಗರಣ ಇದಾಗಿದ್ದು, ಇತ್ತೀಚೆಗೆ ಹಣ ಸಿಗದೆ ವಂಚನೆಗೊಳಗಾದ ಮಂದಿ ಪೊಲೀಸ್ ದೂರು ದಾಖಲಿಸಿದ್ದರು. ಕಾಸರಗೋಡಿನ ವಿವಿಧ ಠಾಣೆಗಳಲ್ಲಿ ಈವರೆಗೆ 107 ಪ್ರಕರಣಗಳು ದಾಖಲಾಗಿವೆ. ಪೊಲೀಸರು ಒತ್ತಡಕ್ಕೊಳಗಾಗಿ ಶಾಸಕರನ್ನು ತನಿಖೆಗೆ ಒಳಪಡಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣದಲ್ಲಿ ಫ್ಯಾಶನ್ ಗೋಲ್ಡ್ ಡೈರೆಕ್ಟರ್ ಪೂಕೋಯ ತಂಗಳ್ ಕೂಡ ಆರೋಪಿಯಾಗಿದ್ದಾರೆ.
Manjeshwar MLA M C Qamaruddin arrested in connection with the fraud case of Fashion Gold International Company. Special Investigation Team led by P Vivek Kumar who was interrogating MLA Qamaruddin in SP's office has arrested the MLA.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm