ಬ್ರೇಕಿಂಗ್ ನ್ಯೂಸ್
07-11-20 04:18 pm Headline Karnataka News Network ಕ್ರೈಂ
ಕಾಸರಗೋಡು, ನವೆಂಬರ್ 7: ಮಂಜೇಶ್ವರ ಶಾಸಕ ಎಂ.ಕೆ. ಕಮರುದ್ದೀನ್ ಅವರನ್ನು ಕೊನೆಗೂ ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಂದು ಬೆಳಗ್ಗೆ ಶಾಸಕ ಕಮರುದ್ದೀನ್ ಅವರನ್ನು ವಿಚಾರಣೆಗೆ ಕರೆಸಿಕೊಂಡಿದ್ದರು. ಬೆಳಗ್ಗಿನಿಂದ ವಿಚಾರಣೆ ನಡೆಸಿದ ಪೊಲೀಸರು ಈಗ ಬಂಧಿಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ಫ್ಯಾಷನ್ ಗೋಲ್ಡ್ ಹೆಸರಲ್ಲಿ ನೂರಾರು ಮಂದಿಯಿಂದ ಕೋಟ್ಯಂತರ ಹಣ ಪಡೆದು ವಂಚನೆ ನಡೆಸಿದ ಬಗ್ಗೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ನೇಮಕ ಮಾಡಲಾಗಿತ್ತು. ತನಿಖಾ ತಂಡದ ಮುಖ್ಯಸ್ಥ ಪಿ.ವಿವೇಕ್ ಕುಮಾರ್ ಕಾಸರಗೋಡು ಎಸ್ ಪಿ ಕಚೇರಿಯಲ್ಲಿ ವಿಚಾರಣೆ ನಡೆಸಿದ್ದು, ಪ್ರಕರಣದಲ್ಲಿ ಶಾಸಕರ ಶಾಮೀಲಾತಿ ಮತ್ತು ವಂಚನೆ ಎಸಗಿರುವುದು ಕಂಡುಬಂದಿದ್ದರಿಂದ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಬಂಧಿಸಿದ್ದಾರೆ.
ಫ್ಯಾಶನ್ ಗೋಲ್ಡ್ ಹೆಸರಲ್ಲಿ ಹಣ ದ್ವಿಗುಣಗೊಳಿಸುವ ಭರವಸೆಯಿಂದ 700ಕ್ಕೂ ಹೆಚ್ಚು ಮಂದಿ ಹಣ ಹೂಡಿಕೆ ಮಾಡಿದ್ದರು. 130 ಕೋಟಿಗೂ ಹೆಚ್ಚು ಮೊತ್ತದ ಹಗರಣ ಇದಾಗಿದ್ದು, ಇತ್ತೀಚೆಗೆ ಹಣ ಸಿಗದೆ ವಂಚನೆಗೊಳಗಾದ ಮಂದಿ ಪೊಲೀಸ್ ದೂರು ದಾಖಲಿಸಿದ್ದರು. ಕಾಸರಗೋಡಿನ ವಿವಿಧ ಠಾಣೆಗಳಲ್ಲಿ ಈವರೆಗೆ 107 ಪ್ರಕರಣಗಳು ದಾಖಲಾಗಿವೆ. ಪೊಲೀಸರು ಒತ್ತಡಕ್ಕೊಳಗಾಗಿ ಶಾಸಕರನ್ನು ತನಿಖೆಗೆ ಒಳಪಡಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣದಲ್ಲಿ ಫ್ಯಾಶನ್ ಗೋಲ್ಡ್ ಡೈರೆಕ್ಟರ್ ಪೂಕೋಯ ತಂಗಳ್ ಕೂಡ ಆರೋಪಿಯಾಗಿದ್ದಾರೆ.
Manjeshwar MLA M C Qamaruddin arrested in connection with the fraud case of Fashion Gold International Company. Special Investigation Team led by P Vivek Kumar who was interrogating MLA Qamaruddin in SP's office has arrested the MLA.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm