ಬ್ರೇಕಿಂಗ್ ನ್ಯೂಸ್
29-08-23 05:56 pm HK News Desk ಕ್ರೈಂ
ಕೇರಳ, ಆಗಸ್ಟ್ 29: ಮಹತ್ವದ ಕಾರ್ಯಾಚರಣೆಯಲ್ಲಿ ಕೇರಳದ ಕಾರಿಪುರ್ ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊಕೇನ್, ಹೆರಾಯಿನ್ ಸೇರಿದಂತೆ ಬರೋಬ್ಬರಿ 44 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಅನ್ನು ಪ್ರಯಾಣಿಕರೊಬ್ಬರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಡೈರೆಕ್ಟೋರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ (ಡಿಆರ್ ಐ) ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರಪ್ರದೇಶದ ಮುಜಾಫರ್ ನಗರದ ನಿವಾಸಿ ರಾಜೀವ್ ಕುಮಾರ್ ಎಂಬಾತನಿಂದ ಮೂರುವರೆ ಕೆ.ಜಿ ಕೊಕೇನ್ ಮತ್ತು 1.3 ಕೆಜಿ ಹೆರಾಯಿನ್ ಅನ್ನು ಡಿಆರ್ ಐನ ಕೊಚ್ಚಿನ ವಲಯ ಘಟಕದ ಕ್ಯಾಲಿಕಟ್ ಪ್ರಾದೇಶಿಕ ಘಟಕ ವಶಕ್ಕೆ ಪಡೆದಿರುವುದಾಗಿ ವರದಿ ತಿಳಿಸಿದೆ.
ಆರೋಪಿ ರಾಜೀವ್ ಕುಮಾರ್ ನಿಂದ ವಶಡಿಸಿಕೊಂಡ ಮಾದಕ ವಸ್ತುಗಳ ಒಟ್ಟು ಮೊತ್ತ 44 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ಏರ್ ಅರೇಬಿಯಾ ವಿಮಾನದಲ್ಲಿ ರಾಜೀವ್ ಕುಮಾರ್ ಕೀನ್ಯಾದ ನೈರೋಬಿಯಿಂದ ಶಾರ್ಜಾದ ಮೂಲಕ ಕೇರಳಕ್ಕೆ ಆಗಮಿಸಿದ್ದ. ಈ ಸಂದರ್ಭದಲ್ಲಿ ಕ್ಯಾಲಿಕಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿಯಿಂದ ಒಟ್ಟು 4.08 ಕೆ.ಜಿ ಮಾದಕವಸ್ತುಗಳನ್ನು ವಶಕ್ಕೆ ತೆಗೆದುಕೊಂಡಿರುದಾಗಿ ಅಧಿಕರಿಗಳು ತಿಳಿಸಿದ್ದಾರೆ.
ಆರೋಪಿ ತನ್ನ ಚೆಕ್ ಇನ್ ಬ್ಯಾಗೇಜ್ನಲ್ಲಿದ್ದ ಶೂಗಳು, ಕೈ ಚೀಲಗಳು, ಪಾರ್ಸ್ಗಳು, ಚಿತ್ರಫಲಕಗಳು ಮತ್ತು ಫೈಲ್ ಫೋಲ್ಡರ್ಗಳಂತಹ ವಸ್ತುಗಳ ಒಳಗೆ ನಿಷೇಧಿತ ಡ್ರಗ್ಸ್ ಬಚ್ಚಿಟ್ಟುಕೊಂಡು ಸಾಗಿಸುತ್ತಿದ್ದ. ಸದ್ಯ ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಡಿಆರ್ಐ ಅಧಿಕಾರಿಗಳು ಹೇಳಿದ್ದಾರೆ.
In a major drug haul, ₹ 44 crore worth narcotics, including cocaine and heroin, were seized from a passenger at the international airport in Karipur in Karala, the Directorate of Revenue Intelligence (DRI) said today.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm