ಬ್ರೇಕಿಂಗ್ ನ್ಯೂಸ್
01-09-23 05:11 pm Mangalore Correspondent ಕ್ರೈಂ
ಉಳ್ಳಾಲ, ಸೆ.1: ನರಿಂಗಾನ ಗ್ರಾಮದ ಮೊಂಟೆಪದವಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಕಿಟಕಿಯ ಸಲಾಕೆ ಮತ್ತು ಬಾಗಿಲು ಮುರಿದು ಕನ್ನ ಹಾಕಿದ ಕಳ್ಳರು 15 ಸಾವಿರ ನಗದು, ಎರಡು ಲ್ಯಾಪ್ ಟಾಪ್ ಮತ್ತು ತನಿಖೆಯ ಜಾಡು ತಪ್ಪಿಸಲು ಸಿಸಿಟಿವಿಯ ಮೂರು ಡಿವಿಆರ್ ಗಳನ್ನೇ ಕದ್ದೊಯ್ದಿದ್ದಾರೆ.
ಕಾಲೇಜು ಹಾಗೂ ಪ್ರೌಢಶಾಲೆ ಕಟ್ಟಡದ ಆವರಣದಲ್ಲಿ ಕಾಲೇಜು ಪ್ರಿನ್ಸಿಪಾಲ್, ಪ್ರೌಢಶಾಲೆ ವೈಸ್ ಪ್ರಿನ್ಸಿಪಾಲ್ ಕಚೇರಿ ಇದ್ದು ಎರಡೂ ಕೊಠಡಿಗಳಿಗೆ ಕಳ್ಳರು ನಿನ್ನೆ ರಾತ್ರಿ ಕನ್ನ ಹಾಕಿದ್ದಾರೆ. ಕಾಲೇಜಿನ ಪ್ರಿನ್ಸಿಪಾಲ್ ಕಚೇರಿಯ ಕಿಟಕಿಯ ಸಲಾಕೆ ಮುರಿಯಲು ಕಳ್ಳರು ವಿಫಲರಾಗಿದ್ದು ಬಾಗಿಲಿನ ಬೀಗ ಮುರಿದು ಒಳ ನುಗ್ಗಿದ್ದಾರೆ. ಒಳಗಿದ್ದ ಮೂರು ಕಪಾಟನ್ನು ಮುರಿದು ದಾಖಲೆ ಪತ್ರಗಳನ್ನ ತಡಕಾಡಿ ಚೆಲ್ಲಾಪಿಲ್ಲಿ ಮಾಡಿದ್ದಾರೆ. ಕಪಾಟಿನಲ್ಲಿದ್ದ 15 ಸಾವಿರ ರೂಪಾಯಿ ನಗದು ಎಗರಿಸಿದ ಚಾಣಾಕ್ಷ ಕಳ್ಳರು ಮೂರು ಸ್ಮಾರ್ಟ್ ಫೋನ್ ಗಳನ್ನ ಅಲ್ಲೇ ಬಿಟ್ಟು ಒಂದು ಡಿವಿಆರ್ ಕದ್ದೊಯ್ದಿದ್ದಾರೆ. ಕಾಲೇಜು ಸ್ಟಾಫ್ ರೂಂಗೂ ಕಳ್ಳರು ನುಗ್ಗಿದ್ದು ಅಲ್ಲಿ ಏನೂ ಸಿಕ್ಕಿಲ್ಲ.
ಹೈಸ್ಕೂಲ್ ವೈಸ್ ಪ್ರಿನ್ಸಿಪಾಲ್ ಕೊಠಡಿಯ ಕಿಟಕಿಯ ಸಲಾಕೆ ಮುರಿದು ಒಳನುಗ್ಗಿದ ಕಳ್ಳರು ಎರಡು ಲ್ಯಾಪ್ ಟ್ಯಾಪ್ ,ಚಿಲ್ಲರೆ ನಗದು ಮತ್ತು ಎರಡು ಡಿವಿಆರ್ ಗಳನ್ನ ಕದ್ದೊಯ್ದಿದ್ದಾರೆ.
ಕಬಾಟುಗಳನ್ನ ತಡಕಾಡಿ ಅಮೂಲ್ಯ ದಾಖಲೆ ಪತ್ರಗಳನ್ನೆಲ್ಲ ನೆಲಕ್ಕೆಸೆದು ಹೋಗಿದ್ದಾರೆ. ಇಂದು ಬೆಳಗ್ಗೆ ಶಾಲೆಗೆ ಬಂದ ಶಿಕ್ಷಕರು, ವಿದ್ಯಾರ್ಥಿಗಳಿಗೆ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದ್ದು ತಕ್ಷಣವೇ ಕೊಣಾಜೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು, ಶ್ವಾನದಳ, ಫೋರೆನ್ಸಿಕ್ ತಜ್ಞರು ಪರಿಶೀಲನೆ ನಡೆಸಿದ್ದು, ಚಾಲಾಕಿ ಕಳ್ಳರು ಡಿವಿಆರ್ ಹೊತ್ತೊಯ್ದಿರುವುದರಿಂದ ಸಮೀಪದ ಅಂಗಡಿಗಳಲ್ಲಿ ಸಿಸಿಟಿವಿ ಫೂಟೇಜ್ ಪರಿಶೀಲಿಸುತ್ತಿದ್ದಾರೆ.
Mangalore Robbers enter Naringana karnataka public school, flee with cash and laptop.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
24-09-25 10:48 pm
Mangalore Correspondent
ಖಾಸಗಿ ಜಮೀನಲ್ಲಿ ಅಕ್ರಮ ಹೆದ್ದಾರಿ ನಿರ್ಮಿಸಿದ್ದ ಪಿಡ...
24-09-25 08:46 pm
Priyank Kharge, Dharmasthala SIT: ಅಕ್ರಮ ಎಷ್ಟೇ...
24-09-25 07:38 pm
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
ಚಿನ್ನಯ್ಯ ಮತ್ತೆ ಬೆಳ್ತಂಗಡಿ ಕೋರ್ಟಿಗೆ ಹಾಜರು, ದೂರು...
23-09-25 11:01 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am