ಬ್ರೇಕಿಂಗ್ ನ್ಯೂಸ್
01-09-23 05:11 pm Mangalore Correspondent ಕ್ರೈಂ
ಉಳ್ಳಾಲ, ಸೆ.1: ನರಿಂಗಾನ ಗ್ರಾಮದ ಮೊಂಟೆಪದವಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಕಿಟಕಿಯ ಸಲಾಕೆ ಮತ್ತು ಬಾಗಿಲು ಮುರಿದು ಕನ್ನ ಹಾಕಿದ ಕಳ್ಳರು 15 ಸಾವಿರ ನಗದು, ಎರಡು ಲ್ಯಾಪ್ ಟಾಪ್ ಮತ್ತು ತನಿಖೆಯ ಜಾಡು ತಪ್ಪಿಸಲು ಸಿಸಿಟಿವಿಯ ಮೂರು ಡಿವಿಆರ್ ಗಳನ್ನೇ ಕದ್ದೊಯ್ದಿದ್ದಾರೆ.
ಕಾಲೇಜು ಹಾಗೂ ಪ್ರೌಢಶಾಲೆ ಕಟ್ಟಡದ ಆವರಣದಲ್ಲಿ ಕಾಲೇಜು ಪ್ರಿನ್ಸಿಪಾಲ್, ಪ್ರೌಢಶಾಲೆ ವೈಸ್ ಪ್ರಿನ್ಸಿಪಾಲ್ ಕಚೇರಿ ಇದ್ದು ಎರಡೂ ಕೊಠಡಿಗಳಿಗೆ ಕಳ್ಳರು ನಿನ್ನೆ ರಾತ್ರಿ ಕನ್ನ ಹಾಕಿದ್ದಾರೆ. ಕಾಲೇಜಿನ ಪ್ರಿನ್ಸಿಪಾಲ್ ಕಚೇರಿಯ ಕಿಟಕಿಯ ಸಲಾಕೆ ಮುರಿಯಲು ಕಳ್ಳರು ವಿಫಲರಾಗಿದ್ದು ಬಾಗಿಲಿನ ಬೀಗ ಮುರಿದು ಒಳ ನುಗ್ಗಿದ್ದಾರೆ. ಒಳಗಿದ್ದ ಮೂರು ಕಪಾಟನ್ನು ಮುರಿದು ದಾಖಲೆ ಪತ್ರಗಳನ್ನ ತಡಕಾಡಿ ಚೆಲ್ಲಾಪಿಲ್ಲಿ ಮಾಡಿದ್ದಾರೆ. ಕಪಾಟಿನಲ್ಲಿದ್ದ 15 ಸಾವಿರ ರೂಪಾಯಿ ನಗದು ಎಗರಿಸಿದ ಚಾಣಾಕ್ಷ ಕಳ್ಳರು ಮೂರು ಸ್ಮಾರ್ಟ್ ಫೋನ್ ಗಳನ್ನ ಅಲ್ಲೇ ಬಿಟ್ಟು ಒಂದು ಡಿವಿಆರ್ ಕದ್ದೊಯ್ದಿದ್ದಾರೆ. ಕಾಲೇಜು ಸ್ಟಾಫ್ ರೂಂಗೂ ಕಳ್ಳರು ನುಗ್ಗಿದ್ದು ಅಲ್ಲಿ ಏನೂ ಸಿಕ್ಕಿಲ್ಲ.
ಹೈಸ್ಕೂಲ್ ವೈಸ್ ಪ್ರಿನ್ಸಿಪಾಲ್ ಕೊಠಡಿಯ ಕಿಟಕಿಯ ಸಲಾಕೆ ಮುರಿದು ಒಳನುಗ್ಗಿದ ಕಳ್ಳರು ಎರಡು ಲ್ಯಾಪ್ ಟ್ಯಾಪ್ ,ಚಿಲ್ಲರೆ ನಗದು ಮತ್ತು ಎರಡು ಡಿವಿಆರ್ ಗಳನ್ನ ಕದ್ದೊಯ್ದಿದ್ದಾರೆ.


ಕಬಾಟುಗಳನ್ನ ತಡಕಾಡಿ ಅಮೂಲ್ಯ ದಾಖಲೆ ಪತ್ರಗಳನ್ನೆಲ್ಲ ನೆಲಕ್ಕೆಸೆದು ಹೋಗಿದ್ದಾರೆ. ಇಂದು ಬೆಳಗ್ಗೆ ಶಾಲೆಗೆ ಬಂದ ಶಿಕ್ಷಕರು, ವಿದ್ಯಾರ್ಥಿಗಳಿಗೆ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದ್ದು ತಕ್ಷಣವೇ ಕೊಣಾಜೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು, ಶ್ವಾನದಳ, ಫೋರೆನ್ಸಿಕ್ ತಜ್ಞರು ಪರಿಶೀಲನೆ ನಡೆಸಿದ್ದು, ಚಾಲಾಕಿ ಕಳ್ಳರು ಡಿವಿಆರ್ ಹೊತ್ತೊಯ್ದಿರುವುದರಿಂದ ಸಮೀಪದ ಅಂಗಡಿಗಳಲ್ಲಿ ಸಿಸಿಟಿವಿ ಫೂಟೇಜ್ ಪರಿಶೀಲಿಸುತ್ತಿದ್ದಾರೆ.
Mangalore Robbers enter Naringana karnataka public school, flee with cash and laptop.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 08:27 pm
Mangalore Correspondent
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am