ಬ್ರೇಕಿಂಗ್ ನ್ಯೂಸ್
01-09-23 05:11 pm Mangalore Correspondent ಕ್ರೈಂ
ಉಳ್ಳಾಲ, ಸೆ.1: ನರಿಂಗಾನ ಗ್ರಾಮದ ಮೊಂಟೆಪದವಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಕಿಟಕಿಯ ಸಲಾಕೆ ಮತ್ತು ಬಾಗಿಲು ಮುರಿದು ಕನ್ನ ಹಾಕಿದ ಕಳ್ಳರು 15 ಸಾವಿರ ನಗದು, ಎರಡು ಲ್ಯಾಪ್ ಟಾಪ್ ಮತ್ತು ತನಿಖೆಯ ಜಾಡು ತಪ್ಪಿಸಲು ಸಿಸಿಟಿವಿಯ ಮೂರು ಡಿವಿಆರ್ ಗಳನ್ನೇ ಕದ್ದೊಯ್ದಿದ್ದಾರೆ.
ಕಾಲೇಜು ಹಾಗೂ ಪ್ರೌಢಶಾಲೆ ಕಟ್ಟಡದ ಆವರಣದಲ್ಲಿ ಕಾಲೇಜು ಪ್ರಿನ್ಸಿಪಾಲ್, ಪ್ರೌಢಶಾಲೆ ವೈಸ್ ಪ್ರಿನ್ಸಿಪಾಲ್ ಕಚೇರಿ ಇದ್ದು ಎರಡೂ ಕೊಠಡಿಗಳಿಗೆ ಕಳ್ಳರು ನಿನ್ನೆ ರಾತ್ರಿ ಕನ್ನ ಹಾಕಿದ್ದಾರೆ. ಕಾಲೇಜಿನ ಪ್ರಿನ್ಸಿಪಾಲ್ ಕಚೇರಿಯ ಕಿಟಕಿಯ ಸಲಾಕೆ ಮುರಿಯಲು ಕಳ್ಳರು ವಿಫಲರಾಗಿದ್ದು ಬಾಗಿಲಿನ ಬೀಗ ಮುರಿದು ಒಳ ನುಗ್ಗಿದ್ದಾರೆ. ಒಳಗಿದ್ದ ಮೂರು ಕಪಾಟನ್ನು ಮುರಿದು ದಾಖಲೆ ಪತ್ರಗಳನ್ನ ತಡಕಾಡಿ ಚೆಲ್ಲಾಪಿಲ್ಲಿ ಮಾಡಿದ್ದಾರೆ. ಕಪಾಟಿನಲ್ಲಿದ್ದ 15 ಸಾವಿರ ರೂಪಾಯಿ ನಗದು ಎಗರಿಸಿದ ಚಾಣಾಕ್ಷ ಕಳ್ಳರು ಮೂರು ಸ್ಮಾರ್ಟ್ ಫೋನ್ ಗಳನ್ನ ಅಲ್ಲೇ ಬಿಟ್ಟು ಒಂದು ಡಿವಿಆರ್ ಕದ್ದೊಯ್ದಿದ್ದಾರೆ. ಕಾಲೇಜು ಸ್ಟಾಫ್ ರೂಂಗೂ ಕಳ್ಳರು ನುಗ್ಗಿದ್ದು ಅಲ್ಲಿ ಏನೂ ಸಿಕ್ಕಿಲ್ಲ.
ಹೈಸ್ಕೂಲ್ ವೈಸ್ ಪ್ರಿನ್ಸಿಪಾಲ್ ಕೊಠಡಿಯ ಕಿಟಕಿಯ ಸಲಾಕೆ ಮುರಿದು ಒಳನುಗ್ಗಿದ ಕಳ್ಳರು ಎರಡು ಲ್ಯಾಪ್ ಟ್ಯಾಪ್ ,ಚಿಲ್ಲರೆ ನಗದು ಮತ್ತು ಎರಡು ಡಿವಿಆರ್ ಗಳನ್ನ ಕದ್ದೊಯ್ದಿದ್ದಾರೆ.


ಕಬಾಟುಗಳನ್ನ ತಡಕಾಡಿ ಅಮೂಲ್ಯ ದಾಖಲೆ ಪತ್ರಗಳನ್ನೆಲ್ಲ ನೆಲಕ್ಕೆಸೆದು ಹೋಗಿದ್ದಾರೆ. ಇಂದು ಬೆಳಗ್ಗೆ ಶಾಲೆಗೆ ಬಂದ ಶಿಕ್ಷಕರು, ವಿದ್ಯಾರ್ಥಿಗಳಿಗೆ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದ್ದು ತಕ್ಷಣವೇ ಕೊಣಾಜೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು, ಶ್ವಾನದಳ, ಫೋರೆನ್ಸಿಕ್ ತಜ್ಞರು ಪರಿಶೀಲನೆ ನಡೆಸಿದ್ದು, ಚಾಲಾಕಿ ಕಳ್ಳರು ಡಿವಿಆರ್ ಹೊತ್ತೊಯ್ದಿರುವುದರಿಂದ ಸಮೀಪದ ಅಂಗಡಿಗಳಲ್ಲಿ ಸಿಸಿಟಿವಿ ಫೂಟೇಜ್ ಪರಿಶೀಲಿಸುತ್ತಿದ್ದಾರೆ.
Mangalore Robbers enter Naringana karnataka public school, flee with cash and laptop.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm